ಬ್ರೇಕಿಂಗ್ ನ್ಯೂಸ್
25-03-22 07:27 pm Bengaluru Correspondent ಕ್ರೈಂ
ಬೆಂಗಳೂರು, ಮಾ.25: ಬಾಡಿಗೆ ನೀಡಿದ್ದ ಕಟ್ಟಡದಲ್ಲಿ ಮನೆ ಮಾಲೀಕನಿಗೆ ತಿಳಿಯದೆ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ, ಅದಕ್ಕೆ ಮನೆ ಮಾಲೀಕನನ್ನು ಜವಾಬ್ದಾರಿಯಾಗಿಸಿ ಮಾನವ ಕಳ್ಳ ಸಾಗಣಿಕೆ ಆರೋಪದಲ್ಲಿ ಪ್ರಕರಣ ದಾಖಲಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ನ್ಯಾಯಾಧೀಶ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಬಗ್ಗೆ ತೀರ್ಪು ನೀಡಿದ್ದು, ಚಂದ್ರಾ ಲೇಔಟ್ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ವಜಾ ಮಾಡಿದೆ. ನಾಗರಭಾವಿ ನಿವಾಸಿ ಪ್ರಭುರಾಜ್ ಎಂಬವರು ತನ್ನ ವಿರುದ್ಧ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ವಜಾ ಮಾಡುವಂತೆ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಮಾನವ ಕಳ್ಳಸಾಗಣೆ ನಿಯಂತ್ರಣ ಕಾಯ್ದೆ 3(2) ಬಿ ಪ್ರಕಾರ, ಮನೆ ಮಾಲೀಕ ತನ್ನ ಬಾಡಿಗೆ ಕಟ್ಟಡದಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವುದನ್ನು ತಿಳಿದಿದ್ದರೆ, ಪ್ರಕರಣ ದಾಖಲಿಸಿಕೊಳ್ಳಬಹುದು. ಸದ್ರಿ ಪ್ರಕರಣದಲ್ಲಿ ಮನೆ ಮಾಲೀಕ ತನ್ನ ಬಾಡಿಗೆ ಕಟ್ಟಡದಲ್ಲಿ ಏನು ಆಗುತ್ತಿದೆ ಅನ್ನುವುದರ ಅರಿವು ಹೊಂದಿರಲಿಲ್ಲ. ಅಲ್ಲದೆ, ಮನೆ ಮಾಲೀಕ ಅದೇ ಜಾಗದಲ್ಲಿ ವಾಸವನ್ನೂ ಮಾಡುತ್ತಿರಲಿಲ್ಲ. ಈ ಬಗ್ಗೆ ಪೊಲೀಸರು ಹಾಕಿರುವ ಚಾರ್ಜ್ ಶೀಟ್ ನಲ್ಲಿಯೂ ಉಲ್ಲೇಖಿಸಿದ್ದು, ಇದರಂತೆ ಅರ್ಜಿದಾರ ವ್ಯಕ್ತಿಯ ವಿರುದ್ಧ ಕೇಸು ದಾಖಲಿಸಿದರೆ ಆತನಿಗೆ ವಿನಾಕಾರಣ ಕಿರುಕುಳ ನೀಡಿದಂತಾಗುತ್ತದೆ. ಅಲ್ಲದೆ, ಕಾನೂನಿನ ದುರುಪಯೋಗ ಆಗುತ್ತದೆ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ಹೇಳಿದ್ದಾರೆ.
ಅರ್ಜಿದಾರ ವ್ಯಕ್ತಿ ತನ್ನ ಕಟ್ಟಡವನ್ನು 2019ರಲ್ಲಿ ಬಾಡಿಗೆಗೆ ಕೊಟ್ಟಿದ್ದರು. 2020ರಲ್ಲಿ ಅಲ್ಲಿಗೆ ದಾಳಿ ನಡೆಸಿದ್ದ ಪೊಲೀಸರು ವೇಶ್ಯಾವಾಟಿಕೆ ನಡೆಯುತ್ತಿರುವುದನ್ನು ಪತ್ತೆ ಮಾಡಿದ್ದರು. ಆನಂತರ, ಮನೆ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ಮನೆ ಮಾಲೀಕ ಪ್ರಭುರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದು ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿದ್ದರು.
In an important development, the Karnataka High Court has ruled that if the house owner is not aware of a prostitution racket being run in the premises given on rent, then he is not liable to be prosecuted under the Prevention of Human Trafficking Act.The single bench headed by Justice M. Nagaprasanna gave the verdict on Thursday quashing the FIR in this regard against the house owner Prabhuraj, a resident of Nagarbhavi in Bengaluru.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm