ಬ್ರೇಕಿಂಗ್ ನ್ಯೂಸ್
31-03-22 10:31 am HK Desk news ಕ್ರೈಂ
ಬೆಳಗಾವಿ, ಮಾ.30: ಅಂಕೋಲಾ ಉದ್ಯಮಿ ಆರ್.ಎನ್.ನಾಯಕ್ ಹತ್ಯೆ ಪ್ರಕರಣದಲ್ಲಿ ಬೆಳಗಾವಿಯ ಕೋಕಾ ವಿಶೇಷ ನ್ಯಾಯಾಲಯ ಭೂಗತ ಪಾತಕಿ ಬನ್ನಂಜೆ ರಾಜಾ ಸಹಿತ ಒಂಬತ್ತು ಆರೋಪಿಗಳು ತಪ್ಪಿತಸ್ಥರು ಎಂದು ತೀರ್ಪು ನೀಡಿದೆ.
ಉದ್ಯಮಿ ಹತ್ಯೆ ಪ್ರಕರಣದಲ್ಲಿ ಬನ್ನಂಜೆ ರಾಜಾ ಮತ್ತು ಇತರ ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ಹಿನ್ನೆಲೆಯಲ್ಲಿ ಕೋಕಾ ಕಾಯ್ದೆ ಜಾರಿಗೊಳಿಸಲಾಗಿತ್ತು. ಮೊದಲ ಬಾರಿಗೆ ಕೋಕಾ ಕಾಯ್ದೆ ಹೇರಿದ್ದ ಪ್ರಕರಣದಲ್ಲಿ ಬೆಳಗಾವಿ ಕೋಕಾ ನ್ಯಾಯಾಲಯದ ನ್ಯಾಯಾಧೀಶ ಸಿ.ಎಂ.ಜೋಶಿ ತೀರ್ಪು ನೀಡಿದ್ದಾರೆ. ಶಿಕ್ಷೆ ಪ್ರಮಾಣವನ್ನು ಏಪ್ರಿಲ್ 4ರಂದು ನೀಡುವುದಾಗಿ ನ್ಯಾಯಾಧೀಶ ಸಿ.ಎಂ.ಜೋಶಿ ತಿಳಿಸಿದ್ದಾರೆ.
ಅಲ್ಲದೆ, ಪ್ರಕರಣದಲ್ಲಿ 6, 11 ಹಾಗೂ 16ನೇ ಆರೋಪಿಗಳು ನಿರ್ದೋಷಿ ಎಂದು ತೀರ್ಪು ನೀಡಲಾಗಿದೆ. ಅದರಂತೆ ಆರನೇ ಆರೋಪಿ ಕೇರಳದ ರಬ್ದಿನ್ ಫಿಚೈ, 11ನೇ ಆರೋಪಿ ಬೆಂಗಳೂರಿನ ಮಹ್ಮದ್ ಶಾಬಂದರಿ, 16ನೇ ಆರೋಪಿ ಉತ್ತರ ಕನ್ನಡದ ಆನಂದ ನಾಯಕ್ ದೋಷಮುಕ್ತರಾಗಿದ್ದಾರೆ.
ಎರಡನೇ ಆರೋಪಿ ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, ಮೂರನೇ ಆರೋಪಿ ಬೆಂಗಳೂರಿನ ಅಭಿ ಭಂಡಗಾರ, ನಾಲ್ಕನೇ ಆರೋಪಿ ಉಡುಪಿಯ ಗಣೇಶ ಭಜಂತ್ರಿ, ಐದನೇ ಆರೋಪಿ ಕೇರಳದ ಕೆ.ಎಂ. ಇಸ್ಮಾಯಿಲ್, ಏಳನೇ ಆರೋಪಿ ಹಾಸನದ ಮಹೇಶ ಅಚ್ಛಂಗಿ, ಎಂಟನೇ ಆರೋಪಿ ಕೇರಳದ ಸಂತೋಷ ಎಂ.ಬಿ,
ಒಂಬತ್ತನೇ ಆರೋಪಿ ಉಡುಪಿ ಮೂಲದ ಬನ್ನಂಜೆ ರಾಜಾ, ಹತ್ತನೇ ಆರೋಪಿ ಬೆಂಗಳೂರಿನ ಜಗದೀಶ್ ಚಂದ್ರರಾಜ್, 12ನೇ ಆರೋಪಿ ಉತ್ತರ ಪ್ರದೇಶದ ಅಂಕಿತಕುಮಾರ್ ಕಶ್ಯಪ್ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
2013 ಡಿಸೆಂಬರ್ 21 ರಂದು ಅಂಕೋಲಾದಲ್ಲಿ ಉದ್ಯಮಿ ಆರ್.ಎನ್. ನಾಯಕ್ ಅವರನ್ನು ಹತ್ಯೆ ಮಾಡಲಾಗಿತ್ತು. ಹಫ್ತಾ ಕೇಳಿದ್ದಕ್ಕೆ ಕೊಡದೇ ಇದ್ದುದಕ್ಕೆ ಸಹಚರರ ಮೂಲಕ ಕೊಲ್ಲಿಸಿದ್ದಾಗಿ ಭೂಗತ ಪಾತಕಿ ಬನ್ನಂಜೆ ರಾಜಾ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದ್ದ. ಆಗಿನ ಪಶ್ಚಿಮ ವಲಯ ಐಜಿಪಿ ಆಗಿದ್ದ ಪ್ರತಾಪ ರೆಡ್ಡಿ ಸೂಚನೆಯಂತೆ ಆರೋಪಿಗಳ ವಿರುದ್ಧ ಕೋಕಾ ಕೇಸ್ ದಾಖಲಿಸಲಾಗಿತ್ತು. ಆನಂತರ, ಬನ್ನಂಜೆ ರಾಜಾ ವಿರುದ್ಧ ಇಂಟರ್ ಪೋಲ್ ನೋಟೀಸ್ ಜಾರಿಗೊಳಿಸಿ 2015 ರಲ್ಲಿ ಮೊರಕ್ಕೋದಲ್ಲಿ ಬಂಧಿಸಲಾಗಿತ್ತು. ಪ್ರತಾಪ ರೆಡ್ಡಿ ತಂಡ ಮೊರಕ್ಕೋದಿಂದ ರಾಜಾನನ್ನು ಕರೆತಂದಿದ್ದರು. ಆರ್.ಎನ್. ನಾಯಕ್ ಹತ್ಯೆ ಸೇರಿ ಮಂಗಳೂರು, ಉಡುಪಿ, ಮುಂಬೈ, ಬೆಂಗಳೂರಿನಲ್ಲಿ ಬನ್ನಂಜೆ ರಾಜಾ 30 ಕ್ಕೂ ಹೆಚ್ಚು ಪ್ರಕರಣ ಎದುರಿಸುತ್ತಿದ್ದಾನೆ.
ಸರ್ಕಾರದ ಪರ ವಿಶೇಷ ಅಭಿಯೋಜಕ ಕೆ.ಜಿ. ಪುರಾಣಿಕಮಠ, ಹೆಚ್ಚುವರಿ ಅಭಿಯೋಜಕ ಶಿವಪ್ರಸಾದ್ ಆಳ್ವ ವಕಾಲತ್ತು ಮಾಡಿದ್ದರು. ಬನ್ನಂಜೆ ರಾಜಾ ಪರ ವಕೀಲ ಎಂ.ಶಾಂತಾರಾಮ ಶೆಟ್ಟಿ ವಾದ ಮಂಡಿಸಿದ್ದರು. ಕೋರ್ಟಿನಲ್ಲಿ ತನ್ನ ಅಪರಾಧ ಒಪ್ಪಿಕೊಂಡಿದ್ದರಿಂದ ಸುಪಾರಿ ಕಿಲ್ಲರ್ ಮತ್ತು ಸ್ಕೆಚ್ ಹಾಕಿದ್ದ ಬನ್ನಂಜೆ ರಾಜಾ ವಿರುದ್ಧ ಪ್ರಕರಣ ತಗ್ಲಾಕ್ಕೊಂಡಿತ್ತು. ಇದೀಗ ಕರ್ನಾಟಕದಲ್ಲಿ ಮೊದಲ ಬಾರಿಗೆ ಜಾರಿಯಾಗಿದ್ದ ಕೋಕಾ ಕಾಯ್ದೆ ಪ್ರಕರಣದಲ್ಲಿ ಅಪರಾಧ ಸಾಬೀತಾಗಿದ್ದು ಪೊಲೀಸರ ತಂಡ ಮಹತ್ವದ ಸಾಧನೆ ಮಾಡಿದೆ.
Karnataka’s mafia don Rajendra Kumar alias Bannanje Raja, accused of over 50 criminal cases, along with nine others were on Wednesday, March 30, found guilty of murdering BJP leader and mining industrialist RN Nayak. A special court in Belagavi, set up to hear cases under the Karnataka Control of Organised Crime (KCOC) Act, 2000, was hearing the case of RN Nayak’s murder in 2013 in Ankola in Karnataka’s Uttara Kannada district. This was the first case filed under the KCOC Act.
09-07-25 01:53 pm
Bangalore Correspondent
Heart attack, Dharwad, Davanagere: ಉದ್ಯಮಿ ಮಗನ...
09-07-25 11:50 am
ಸಿಎಂ ಸೀಟು ಗೊಂದಲ ಕೇವಲ ಮಾಧ್ಯಮಗಳ ಸೃಷ್ಟಿ ; ಮೊದಲು...
08-07-25 08:35 pm
Karnataka Ban Online Betting and Gambling: ಆನ...
08-07-25 05:01 pm
Exorcism Ritual in Shivamogga, Death; ದೆವ್ವ ಬ...
08-07-25 02:47 pm
07-07-25 08:45 pm
HK News Desk
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
08-07-25 09:33 pm
Mangalore Correspondent
“Mission Possible: KMC Attavar Performs Life-...
08-07-25 03:37 pm
KMC Hospital Mangalore, Attavar, Surgery: ಅಪಘ...
08-07-25 03:27 pm
Mangalore suicide, Thumbe: ಮೊಬೈಲ್ ಗೀಳು ; ತುಂಬ...
08-07-25 10:15 am
ಎಂಟು ವರ್ಷದ ಪ್ರೀತಿ ಸಾವಿನಲ್ಲಿ ಅಂತ್ಯ ; ಪ್ರೀತಿಸುತ...
07-07-25 05:02 pm
08-07-25 10:01 pm
Bengaluru Staffer
Mangalore, Job Fraud, Crime: ಪಾರ್ಟ್ ಟೈಮ್ ಕೆಲಸ...
07-07-25 10:31 pm
Job Fraud, Mangalore, Doctor: ದುಬೈನ ಎನ್ಎಂಸಿ ಹ...
07-07-25 10:18 pm
ಹದಿನಾರರ ವಯಸ್ಸು ಹುಚ್ಚುಕೋಡಿ ಮನಸ್ಸು ; 16ರ ಹುಡುಗಿ...
07-07-25 07:13 pm
Digital Arrest, Cyber Fraud, Mangalore: ಡಿಜಿಟ...
07-07-25 03:30 pm