ಬ್ರೇಕಿಂಗ್ ನ್ಯೂಸ್
09-04-22 10:12 pm Bengaluru Correspondent ಕ್ರೈಂ
ಬೆಂಗಳೂರು, ಎ.9 : 16 ವರ್ಷದ ಅಪ್ರಾಪ್ತ ಹುಡುಗಿ ಮೇಲೆ ಎಂಟು ಜನ ಕಾಮುಕರು ಸೇರಿ ಹಲವು ತಿಂಗಳ ಕಾಲ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಯಲಹಂಕ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ತನಿಖೆ ನಡೆಸಿದ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
ಮೊದಲು ಪ್ರಮುಖ ಆರೋಪಿಯೊಬ್ಬ ಹುಡುಗಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದು ಅದನ್ನು ವಿಡಿಯೋ ರೆಕಾರ್ಡ್ ಮಾಡಿದ್ದ. ಆನಂತರ ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕೊಲೆ ಮಾಡೋದಾಗಿ ಬೆದರಿಸಿದ್ದಲ್ಲದೆ, ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಆರಂಭಿಸಿದ್ದ. ನಂತರ ಅದೇ ವಿಡಿಯೋ ಮುಂದಿಟ್ಟು ತನ್ನ ಸ್ನೇಹಿತರ ಜೊತೆಗೂ ಸಹಕರಿಸುವಂತೆ ಬೆದರಿಕೆ ಒಡ್ಡಿದ್ದಾನೆ. ಇಲ್ಲದಿದ್ದರೆ ವಿಡಿಯೋವನ್ನು ಹೊರಗೆ ಹರಿಯ ಬಿಡುವುದಾಗಿ ಬ್ಲಾಕ್ಮೇಲ್ ಮಾಡಿದ್ದಾನೆ.
ಆಬಳಿಕ ಸರದಿಯಂತೆ ಎಂಟು ಮಂದಿ ಸ್ನೇಹಿತರು ಸೇರಿ ಹುಡುಗಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಮೊದಲು ಇಬ್ಬರು ಆರೋಪಿಗಳಿಂದ ಶುರುವಾದ ಕಾಮುಕ ಕೃತ್ಯ ಆಮೇಲೆ ಒಬ್ಬರಾದ ಮೇಲೆ ಒಬ್ಬರಂತೆ ಕಾಮ ತೃಷೆ ತೀರಿಸಿಕೊಳ್ಳುವ ಮಟ್ಟಕ್ಕೆ ಬಂದಿತ್ತು. ಇತ್ತೀಚೆಗೆ ಮಗಳು ಮನೆಗೆ ಬಂದಾಗ ಅಳುತ್ತಿದ್ದುದನ್ನು ಕಂಡು ಹೆತ್ತವರು ಪ್ರಶ್ನೆ ಮಾಡಿದ್ದಾರೆ.
ಆದರೆ ಸ್ನೇಹಿತರ ವಿಡಿಯೋ ಬೆದರಿಕೆಗೆ ಹೆದರಿ ಮನೆಯವರಲ್ಲಿ ನಿಜ ವಿಚಾರ ಹೇಳಿರಲಿಲ್ಲ. ಮನೆಯಲ್ಲಿ ಅಂದು ಕಬಾಬ್ ಇದ್ದುದರಿಂದ ಅದನ್ನು ತಿಂದು, ಕಬಾಬ್ ಖಾರ ಇತ್ತು , ಅದ್ಕೆ ಕಣ್ಣೀರು ಬಂತು ಎಂದು ಹೇಳಿ ತಪ್ಪಿಸಿಕೊಂಡಿದ್ದಳು. ಬಳಿಕ ಮನೆಮಂದಿ ವಿಚಾರ ಕೆದಕಿದಾಗ ಕೃತ್ಯದ ಬಗ್ಗೆ ತಿಳಿಸಿದ್ದು ಹೆತ್ತವರು ಗಾಬರಿಗೊಂಡಿದ್ದಾರೆ. ತಕ್ಷಣ ಎಂಟು ಜನ ಕಾಮುಕರ ವಿರುದ್ಧ ಪೋಷಕರು ದೂರು ನೀಡಿದ್ದು ಅದರಂತೆ ಏಳು ಜನರನ್ನ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಶೋಧಕಾರ್ಯ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಯಲಹಂಕ ಠಾಣೆಯಲ್ಲಿ ಪೋಕ್ಸೋ, ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Karnataka police have arrested seven persons in connection with the gang rape of a 16-year-old girl in Bengaluru, officials said on Saturday, adding that search is underway for another accused.According to the police, the main accused person had sexually assaulted the victim and made a video of the incident.After the assault he had threatened the victim that he would kill her if she chose to tell anyone about it.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm