ಬ್ರೇಕಿಂಗ್ ನ್ಯೂಸ್
23-09-20 07:39 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟಂಬರ್ 23: ಸಿಸಿಬಿ ಪೊಲೀಸರು ಒಂದೆಡೆ ಡ್ರಗ್ಸ್ ಪ್ರಕರಣದ ಬುಡವನ್ನೇ ಜಾಲಾಡುತ್ತಿದ್ದರೆ, ಸಿಸಿಬಿಯಲ್ಲೇ ಇದ್ದ ಎಸಿಪಿ ದರ್ಜೆಯ ಅಧಿಕಾರಿಯೊಬ್ಬ ತನಿಖೆಯ ಮಾಹಿತಿಗಳನ್ನು ಆರೋಪಿಗಳಿಗೆ ಸೋರಿಕೆ ಮಾಡುತ್ತಿದ್ದರು. ಡ್ರಗ್ಸ್ ಪ್ರಕರಣದಲ್ಲಿ ಆರೋಪಿಗಳ ವಿಚಾರಣೆ ವೇಳೆ ಎಸಿಪಿಯ ಕೈವಾಡ ಕಂಡುಬಂದಿತ್ತು. ಇದನ್ನು ತಿಳಿದ ಬೆಂಗಳೂರು ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ಸರಕಾರಕ್ಕೆ ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸಿದ್ದರು. ಇದೀಗ ಸಿಸಿಬಿಯ ಎಸಿಪಿ ಆಗಿದ್ದ ಮುದವಿ ಎಂಬವರನ್ನು ರಾಜ್ಯ ಸರಕಾರ ಅಮಾನತುಗೊಳಿಸಿ ಆದೇಶ ಮಾಡಿದೆ.
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಕಿಂಗ್ ಪಿನ್ ಎನ್ನಲಾಗುತ್ತಿರುವ ದೆಹಲಿ ಮೂಲದ ವೀರೇನ್ ಖನ್ನಾ ಜೊತೆಗೆ ಎಸಿಪಿ ಮುದವಿ ಸಂಪರ್ಕ ಹೊಂದಿದ್ದಲ್ಲದೆ, ತನಿಖಾ ಮಾಹಿತಿಯನ್ನು ಆರೋಪಿಗಳಿಗೆ ಸೋರಿಕೆ ಮಾಡುತ್ತಿದ್ದರು. ಈ ವಿಚಾರ ಆರೋಪಿಗಳ ತನಿಖೆ ಸಂದರ್ಭದಲ್ಲಿ ಸಿಸಿಬಿ ಮುಖ್ಯಸ್ಥರಿಗೆ ತಿಳಿದುಬಂದಿತ್ತು. ಖಚಿತ ಮಾಹಿತಿ ಜೊತೆಗೆ ಸಂದೀಪ್ ಪಾಟೀಲ್, ಈ ಬಗ್ಗೆ ಸರಕಾರಕ್ಕೆ ಪತ್ರ ಬರೆದಿದ್ದರು. ಎಸಿಪಿ ಮುದವಿ, ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ತನಿಖಾ ತಂಡದಲ್ಲಿ ಇರಲಿಲ್ಲ. ಸಿಸಿಬಿ ಮಹಿಳಾ ಸುರಕ್ಷತಾ ವಿಭಾಗದಲ್ಲಿ ಎಸಿಪಿ ಆಗಿದ್ದರು. ಆದರೆ, ತಂಡದಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಮಲ್ಲಿಕಾರ್ಜುನ ಎಸಿಪಿಗೆ ಮಾಹಿತಿ ನೀಡುತ್ತಿದ್ದರು. ಇವರಿಬ್ಬರು ಡ್ರಗ್ಸ್ ಪ್ರಕರಣದಲ್ಲಿ ಆರೋಪಿಗಳಿಗೆ ತನಿಖೆಯ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ವಿಚಾರ ವಿಚಾರಣೆಯಲ್ಲಿ ತಿಳಿದುಬಂದಿತ್ತು. ಇದೀಗ ಹೆಡ್ ಕಾನ್ಸ್ ಟೇಬಲ್ ಮತ್ತು ಎಸಿಪಿ ಇಬ್ಬರನ್ನೂ ಸರಕಾರ ಸಸ್ಪೆಂಡ್ ಮಾಡಿದೆ.
ವೀರೇನ್ ಖನ್ನಾ ಬಂಧನವಾದ ನಂತರವೂ ಎಸಿಪಿ ಆತನಿಗೆ ಸಹಕರಿಸುತ್ತಿದ್ದರು. ಕಸ್ಟಡಿಯಲ್ಲಿದ್ದ ಸಂದರ್ಭ ಖನ್ನಾಗೆ ಮೊಬೈಲ್ ನೀಡಿದ್ದ ಆರೋಪವೂ ಎಸಿಪಿ ಮೇಲಿದೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm