ಬ್ರೇಕಿಂಗ್ ನ್ಯೂಸ್
16-04-22 11:57 am Mangalore Correspondent ಕ್ರೈಂ
ಮಂಗಳೂರು, ಎ.16: ಹಂಪನಕಟ್ಟೆ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿ, ಬೈಕ್ ಸವಾರನ ಮೇಲೆ ಡಿಕ್ಕಿಯಾಗಿ ಬೈಕ್ ಜೊತೆಗೇ ನೂರು ಮೀಟರ್ ದೂರಕ್ಕೆ ಹೊತ್ತೊಯ್ದು ಬೆಂಕಿ ಹತ್ತಿಕೊಂಡಿದ್ದ ಘಟನೆ ಸಂಬಂಧಿಸಿ ಪಾಂಡೇಶ್ವರ ಟ್ರಾಫಿಕ್ ಪೊಲೀಸರು ಬಸ್ ಚಾಲಕನನ್ನು ಬಂಧಿಸಿದ್ದಾರೆ.
ಎಪ್ರಿಲ್ 8ರಂದು ಮಧ್ಯಾಹ್ನ ಘಟನೆ ನಡೆದಿತ್ತು. ಕೆಎಸ್ ರಾವ್ ರಸ್ತೆಯಿಂದ ಮಿಲಾಗ್ರಿಸ್ ಕಡೆಗೆ ತೆರಳುತ್ತಿದ್ದ ಬೈಕ್ ಮೇಲೆ ಬಸ್ ಡಿಕ್ಕಿಯಾಗಿತ್ತು. ಅಲ್ಲದೆ, ಬಸ್ಸಿಗೆ ಬೆಂಕಿ ಹತ್ತಿಕೊಂಡರೂ, ಪ್ರಯಾಣಿಕರಿದ್ದ ಬಸ್ಸನ್ನು ಚಾಲಕ ಸ್ಟೇಟ್ ಬ್ಯಾಂಕಿನತ್ತ ಚಲಾಯಿಸಿದ್ದು ನೂರು ಮೀಟರ್ ದೂರದಲ್ಲಿ ನಿಲ್ಲಿಸಿದ್ದಾನೆ. ಅಷ್ಟರಲ್ಲಿ ಬೈಕ್ ಘರ್ಷಣೆಯಿಂದಾಗಿ ಬಸ್ಸಿಗೆ ಬೆಂಕಿ ಹತ್ತಿಕೊಂಡಿತ್ತು.



ಆನಂತರ ಬೆಂಕಿ ಸಂಪೂರ್ಣ ಹತ್ತಿಕೊಂಡಿದ್ದು ಬಸ್ 75 ಶೇಕಡಾ ಸುಟ್ಟು ಹೋಗಿತ್ತು. ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆ ಬಗ್ಗೆ ಪ್ರಕರಣ ದಾಖಲಿಸಿದ್ದ ಪೊಲೀಸರು ಇದೀಗ ಬಸ್ ಚಾಲಕ ಬಿಜು ಮೋನುವನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಎ.26ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.



45 ನಂಬರಿನ ಬಸ್ ಜ್ಯೋತಿ ಕಡೆಯಿಂದ ಸ್ಟೇಟ್ ಬ್ಯಾಂಕಿನತ್ತ ತೆರಳುತ್ತಿದ್ದು ಹಂಪನಕಟ್ಟೆ ವೃತ್ತದಲ್ಲಿ ಟ್ರಾಫಿಕ್ ರೆಡ್ ಸಿಗ್ನಲ್ ಬೀಳುತ್ತಿರುವುದನ್ನು ಕಂಡು ವೇಗವಾಗಿ ಧಾವಿಸಿ ಹೋಗಿದ್ದ. ಈ ವೇಳೆ, ಬೈಕನ್ನು ಗಮನಿಸದೆ ಬಸ್ಸನ್ನು ಚಲಾಯಿಸಿದ್ದರಿಂದ ಅಪಘಾತ ಆಗಿತ್ತು. ಬೈಕ್ ಸವಾರ ದಿಲೋನ್ ಅದೃಷ್ಟವಶಾತ್ ಬೈಕಿನಿಂದ ಹಿಂಭಾಗಕ್ಕೆ ಎಸೆಯಲ್ಪಟ್ಟಿದ್ದು ಕಾಲಿನ ಭಾಗಕ್ಕೆ ಮಾತ್ರ ಗಾಯಗೊಂಡಿದ್ದ. ಆದರೆ ಬೈಕ್ ಬಸ್ಸಿನಡಿ ಸಿಲುಕಿಕೊಂಡು ಅದರ ಜೊತೆಗೇ ನೂರು ಮೀಟರ್ ಉದ್ದಕ್ಕೆ ರಸ್ತೆಗೆ ಘರ್ಷಿಸುತ್ತಾ ಚಲಿಸಿತ್ತು. ಆದರೂ ಬಸ್ ಚಾಲಕ ಬಸ್ಸನ್ನು ನಿಲ್ಲಿಸದೇ ಇದ್ದುದು ಪ್ರಯಾಣಿಕರ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.
Traffic East police arrested the driver, who jumped red signal, crashed on to a bike which caused fire and burnt the bus, putting the lives of bike rider as well as passengers in the bus in danger, on April 8, at Hampankatta in the city.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm