ಬ್ರೇಕಿಂಗ್ ನ್ಯೂಸ್
16-04-22 07:56 pm HK Desk news ಕ್ರೈಂ
ಪಾಲಕ್ಕಾಡ್, ಎ.16: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಎಸ್ಡಿಪಿಐ ಮತ್ತು ಆರೆಸ್ಸೆಸ್ ಮುಯ್ಯಿಗೆ ಮುಯ್ಯಿ ಎನ್ನುವಂತೆ ತಲವಾರು ಕಾಳಗದಲ್ಲಿ ತೊಡಗಿದೆ. ಶುಕ್ರವಾರ ಮಧ್ಯಾಹ್ನ ಎಸ್ಡಿಪಿಐ ಕಾರ್ಯಕರ್ತನ ಕೊಲೆ ನಡೆದಿತ್ತು. ಅದಕ್ಕೆ ಪ್ರತಿಯಾಗಿ ಶನಿವಾರ ಮಧ್ಯಾಹ್ನ ಹಾಡಹಗಲೇ ಆರೆಸ್ಸೆಸ್ ನಾಯಕರೊಬ್ಬರ ಹತ್ಯೆ ನಡೆದಿದೆ.
ಈ ಹಿಂದೆ ಆರೆಸ್ಸೆಸ್ ಶಾರೀರಿಕ ಶಿಕ್ಷಣ ಪ್ರಮುಖ್ ಆಗಿದ್ದ ಶ್ರೀನಿವಾಸನ್ ಕೊಲೆಯಾದವರು. ಮೇಲ್ಮುರಿ ಎಂಬಲ್ಲಿ ಶ್ರೀನಿವಾಸನ್ ಇಂದು ಮಧ್ನಾಹ್ನ ಒಂದು ಗಂಟೆ ಸುಮಾರಿಗೆ ತನ್ನ ಅಂಗಡಿಯಲ್ಲಿದ್ದಾಗ, ಮೂರು ಬೈಕುಗಳಲ್ಲಿ ಬಂದ ಐವರು ಹಂತಕರು ಯದ್ವಾತದ್ವಾ ತಲವಾರು ಬೀಸಿ ಭೀಕರ ಕೊಲೆ ಮಾಡಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಒಯ್ದರೂ ಬದುಕುಳಿಯಲಿಲ್ಲ.
ಬಿಜೆಪಿ ನಾಯಕರು, ಕೊಲೆಯ ಹಿಂದೆ ಎಸ್ಡಿಪಿಐ ಮತ್ತು ಪಿಎಫ್ಐ ಕಾರ್ಯಕರ್ತರಿದ್ದಾರೆ, ಅವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಶುಕ್ರವಾರ ನಡೆದ ಕೊಲೆಗೆ ಪ್ರತೀಕಾರ ರೂಪದಲ್ಲಿ ಘಟನೆ ನಡೆದಿದ್ದು, ಎಸ್ಡಿಪಿಐ ಕಾರ್ಯಕರ್ತರೇ ಕೃತ್ಯ ನಡೆಸಿದ್ದಾರೆ ಎನ್ನಲಾಗುತ್ತಿದೆ. ಶುಕ್ರವಾರ ಮಧ್ಯಾಹ್ನ ಎಲಪ್ಪಳ್ಳಿ ಎಂಬಲ್ಲಿ ಮಸೀದಿಗೆ ಕಾರಿನಲ್ಲಿ ಬಂದಿದ್ದ ಸುಬೈರ್ ಎಂಬ ಎಸ್ಡಿಪಿಐ ಕಾರ್ಯಕರ್ತನ ಕೊಲೆ ಆಗಿತ್ತು. ಕಾರಿಗೆ ಹಿಂದಿನಿಂದ ಡಿಕ್ಕಿಯಾಗಿದ್ದ ತಂಡ, ತಂದೆಯ ಎದುರಲ್ಲೇ ಸುಬೇರ್ ನನ್ನು ಕೊಲೆಗೈದಿತ್ತು. ಸಂಜೆ ವೇಳೆಗೆ ಸುಬೇರ್ ಅಂತ್ಯಕ್ರಿಯೆ ನಡೆದಿದ್ದು, ಅದಾಗಿ 20 ಗಂಟೆ ಕಳೆಯುವಷ್ಟರಲ್ಲಿ ಮತ್ತೊಂದು ಹೆಣ ಬಿದ್ದಿದೆ. ಘಟನೆ ಹಿನ್ನೆಲೆಯಲ್ಲಿ ಪಾಲಕ್ಕಾಡ್ ಜಿಲ್ಲೆಯಾದ್ಯಂತ ಪೊಲೀಸ್ ಭದ್ರತೆ ಬಿಗಿಗೊಳಿಸಲಾಗಿದೆ.
ಈ ಹಿಂದೆ ಆರೆಸ್ಸೆಸ್ ನಾಯಕರಾಗಿದ್ದ ಶ್ರೀನಿವಾಸನ್(47), ಈಗ ಹಳೆಯದನ್ನು ಬಿಟ್ಟು ಆಟೋ ಗ್ಯಾರೇಜ್ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ತನ್ನ ಪಾಡಿಗೆ ಕೆಲಸ ಮಾಡುತ್ತಿದ್ದಾಗಲೇ ಸುಲಭದಲ್ಲಿ ಹಂತಕರ ಕೈಗೆ ಸಿಕ್ಕಿದ್ದಾರೆ. ಶುಕ್ರವಾರದ ಕೊಲೆ ಪ್ರಕರಣದಲ್ಲಿ ಬಿಜೆಪಿಯಾಗಲೀ, ಆರೆಸ್ಸೆಸ್ ಆಗಲಿ ಶಾಮೀಲು ಹೊಂದಿಲ್ಲ. ನಮ್ಮ ಕೈವಾಡ ಇಲ್ಲ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದರು.
A local RSS leader was hacked to death in Kerala’s Palakkad district on Saturday, barely a day after a PFI leader was murdered in the area. The BJP’s district leadership in Palakkad said the PFI and its political wing, the Social Democratic Party of India, were behind Saturday’s murder.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm