ಬ್ರೇಕಿಂಗ್ ನ್ಯೂಸ್
24-09-20 12:30 pm Mangalore Correspondent ಕ್ರೈಂ
ಪುತ್ತೂರು, ಸೆಪ್ಟಂಬರ್ 24: ಪತಿಯೇ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಕೊಣಾಲು ಗ್ರಾಮದಲ್ಲಿ ನಡೆದಿದೆ.
ಕೇರಳ ಮೂಲದ, ನೆಲ್ಯಾಡಿ ನಿವಾಸಿ ಬಿಜು(38) ಎಂಬಾತ ತನ್ನ ಪತ್ನಿ ಶೈನಿ(33) ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ(63) ಮೇಲೆ ಆಸಿಡ್ ಎರಚಿ ಹಲ್ಲೆ ನಡೆಸಿದ್ದಾನೆ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ, ಕಣ್ಣಿನ ಭಾಗ ಸುಟ್ಟುಹೋಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜು ಹಾಗೂ ಪತ್ನಿ ಶೈನಿ ನಡುವೆ ಜಗಳ ನಡೆದು, ಪತ್ನಿ ಮನೆ ಬಿಟ್ಟು ಬಂದಿದ್ದಳು. ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿರುವ ತಂದೆಯ ತಮ್ಮನ ಮನೆಯಲ್ಲಿ ವಾಸವಿದ್ದರು. ಇದೇ ವೇಳೆ, ಅಲ್ಲಿಂದ ಶೈನಿ ತನ್ನ ಚಿಕ್ಕಮ್ಮ ಝಾನ್ಸಿ ಜೊತೆಗೆ ನೆಲ್ಯಾಡಿಯ ಆಶ್ರಮವೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದಳು. ಎಂದಿನಂತೆ ಇಂದು ಬೆಳಗ್ಗೆ ಶೈನಿ ಹಾಗೂ ಝಾನ್ಸಿ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾದು ಕುಳಿತಿದ್ದ ಆರೋಪಿ ಬಿಜು, ಇಬ್ಬರ ಮೇಲೂ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ.
ಸುದ್ದಿ ತಿಳಿಯುತ್ತಲೇ ಶೈನಿಯ ಚಿಕ್ಕಪ್ಪ ಏಲಿಯಸ್, ಸ್ಥಳಕ್ಕೆ ಆಗಮಿಸಿದ್ದು ಇಬ್ಬರನ್ನೂ ರಿಕ್ಷಾದಲ್ಲಿ ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ದಿದ್ದಾರೆ. ನೆಲ್ಯಾಡಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am