ಬ್ರೇಕಿಂಗ್ ನ್ಯೂಸ್
24-09-20 12:30 pm Mangalore Correspondent ಕ್ರೈಂ
ಪುತ್ತೂರು, ಸೆಪ್ಟಂಬರ್ 24: ಪತಿಯೇ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಕೊಣಾಲು ಗ್ರಾಮದಲ್ಲಿ ನಡೆದಿದೆ.
ಕೇರಳ ಮೂಲದ, ನೆಲ್ಯಾಡಿ ನಿವಾಸಿ ಬಿಜು(38) ಎಂಬಾತ ತನ್ನ ಪತ್ನಿ ಶೈನಿ(33) ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ(63) ಮೇಲೆ ಆಸಿಡ್ ಎರಚಿ ಹಲ್ಲೆ ನಡೆಸಿದ್ದಾನೆ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ, ಕಣ್ಣಿನ ಭಾಗ ಸುಟ್ಟುಹೋಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜು ಹಾಗೂ ಪತ್ನಿ ಶೈನಿ ನಡುವೆ ಜಗಳ ನಡೆದು, ಪತ್ನಿ ಮನೆ ಬಿಟ್ಟು ಬಂದಿದ್ದಳು. ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿರುವ ತಂದೆಯ ತಮ್ಮನ ಮನೆಯಲ್ಲಿ ವಾಸವಿದ್ದರು. ಇದೇ ವೇಳೆ, ಅಲ್ಲಿಂದ ಶೈನಿ ತನ್ನ ಚಿಕ್ಕಮ್ಮ ಝಾನ್ಸಿ ಜೊತೆಗೆ ನೆಲ್ಯಾಡಿಯ ಆಶ್ರಮವೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದಳು. ಎಂದಿನಂತೆ ಇಂದು ಬೆಳಗ್ಗೆ ಶೈನಿ ಹಾಗೂ ಝಾನ್ಸಿ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾದು ಕುಳಿತಿದ್ದ ಆರೋಪಿ ಬಿಜು, ಇಬ್ಬರ ಮೇಲೂ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ.
ಸುದ್ದಿ ತಿಳಿಯುತ್ತಲೇ ಶೈನಿಯ ಚಿಕ್ಕಪ್ಪ ಏಲಿಯಸ್, ಸ್ಥಳಕ್ಕೆ ಆಗಮಿಸಿದ್ದು ಇಬ್ಬರನ್ನೂ ರಿಕ್ಷಾದಲ್ಲಿ ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ದಿದ್ದಾರೆ. ನೆಲ್ಯಾಡಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm