ಬ್ರೇಕಿಂಗ್ ನ್ಯೂಸ್
18-04-22 10:08 pm Bengaluru Correspondent ಕ್ರೈಂ
ಬೆಂಗಳೂರು, ಎ.18 : ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಮತ್ತೊಂದು ಬಹುಕೋಟಿ ವಂಚನೆ ಎಸಗಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಶೇರ್ ಶಾ ಅಪ್ಲಿಕೇಷನ್ ಹೆಸರಿನಲ್ಲಿ ಹೂಡಿಕೆದಾರರಿಗೆ ಭಾರೀ ವಂಚನೆ ಎಸಗಲಾಗಿದೆ.
ಗ್ರಾಹಕರಿಗೆ ಕ್ರಿಪ್ಟೋ ಮೈನಿಂಗ್ ಯಂತ್ರ ನೀಡೋದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಎಸಗಿದ್ದು ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಬರೋಬ್ಬರಿ 44 ಬ್ಯಾಂಕ್ ಅಕೌಂಟ್ ನಲ್ಲಿದ್ದ 15 ಕೋಟಿ ರೂ. ಹಣ, 1 ಕೆಜಿ 650 ಗ್ರಾಂ ಚಿನ್ನ , 78 ಲಕ್ಷ ನಗದು ಸೇರಿ 17 ಕೋಟಿ ರೂಪಾಯಿ ವಶಕ್ಕೆ ಪಡೆಯಲಾಗಿದೆ.
ಕೋವಿಡ್ 2ನೇ ಲಾಕ್ಡೌನ್ ವೇಳೆ ಸಾಮಾಜಿಕ ಜಾಲತಾಣ ಮೂಲಕ HNT (HELIEAM CRIPTO TOKEN) ಕ್ರಿಪ್ಟೋ ಕರೆನ್ಸಿ ನೀಡೋದಾಗಿ ನಂಬಿಸಿ ಆರೋಪಿಗಳು ವಂಚನೆ ಎಸಗಿದ್ದಾರೆ. ಬೆಂಗಳೂರು ಸೇರಿ ವಿವಿಧ ರಾಜ್ಯಗಳಲ್ಲಿ ನೊಂದಾಯಿತ ಕಂಪನಿಗಳ ಮೂಲಕ ಗ್ರಾಹಕರು ಹಣ ಹೂಡಿಕೆ ಮಾಡಿದ್ದರು.
ಆದರೆ 2022 ರ ಜನವರಿ ತಿಂಗಳಲ್ಲಿ ಶೇರ್ ಷಾ ಅಪ್ಲಿಕೇಷನ್ ದೋಷಪೂರಿತವಾಗಿದೆ, ಅದನ್ನ ಅಪ್ಡೇಟ್ ಮಾಡಬೇಕು ಎಂದು ಗ್ರಾಹಕರಿಗೆ ಸಂದೇಶ ರವಾನಿಸಲಾಗಿತ್ತು. ಅಲ್ಲದೆ, ಹೊಸ ಅಪ್ಲಿಕೇಷನ್ 2.0 ಬಿಡುಗಡೆ ಮಾಡ್ತಿವಿ ಎಂದು ನಂಬಿಸಿದ್ದರು.
ಆದರೆ ಹೇಳಿದ ಸಮಯಕ್ಕೆ ಅಪ್ಲಿಕೇಷನ್ ಅಪ್ಡೇಟ್ ಆಗದೇ ಇದ್ದುದು ಸಂಶಯ ಬರುವಂತಾಗಿತ್ತು. ಹೂಡಿಕೆದಾರರಿಗೆ ಯಾವುದೇ ರಿಟರ್ನ್ ನೀಡದೆ, ಆದಾಯವನ್ನೂ ನೀಡದೆ ಕ್ರಿಪ್ಟೋ ಮೈನಿಂಗ್ ಯಂತ್ರವನ್ನೂ ನೀಡದೆ ವಂಚನೆ ಎಸಗಿದ್ದಾಗಿ ಹೇಳಲಾಗುತ್ತಿದೆ.
1 ಕೇಜಿ 650 ಗ್ರಾಂ ಗೋಲ್ಡ್ , 78ಲಕ್ಷ ಹಣ, 44 ಡಿಎಸ್ ಸಿ (digital signature certificate), ವಿವಿಧ ಕಂಪನಿಗಳ ಹೆಸರಿನ ಸೀಲ್, ಮೊಬೈಲ್ ಫೋನ್, ಲ್ಯಾಪ್ ಟ್ಯಾಪ್ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಎಷ್ಟು ಕೋಟಿ ವಂಚನೆಯಾಗಿದೆ ಎನ್ನುವ ಕುರಿತಾಗಿ ಮಾಹಿತಿ ಕಲೆಹಾಕಲಾಗುತ್ತಿದೆ.
A multi-crore money laundering case has come to light in the name of crypto currency. Police have arrested four people for allegedly defrauding an application. There have been multiple frauds in the name of the Sher Shaw app. Allegations of crypto mining are believed to have been imposed on millions of rupees.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm