ಬ್ರೇಕಿಂಗ್ ನ್ಯೂಸ್
20-04-22 12:09 pm Bengaluru Correspondent ಕ್ರೈಂ
ಬೆಂಗಳೂರು, ಎ.20: ಜುವೆಲ್ಲರಿ ಮೇಲ್ಗಡೆಯ ಮಹಡಿಯಲ್ಲಿ ಬಾಡಿಗೆ ಪಡೆದಿದ್ದ ತಂಡವೊಂದು ಜುವೆಲ್ಲರಿಗೆ ಕನ್ನ ಹಾಕಿದ್ದಲ್ಲದೆ, 5 ಕೇಜಿ ಚಿನ್ನಾಭರಣ ದೋಚಿಕೊಂಡು ಹೋಗಿರುವ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು 15 ಜನರ ವಿಶೇಷ ತಂಡವನ್ನು ರಚಿಸಿದ್ದಾರೆ.
ಜೆಪಿ ನಗರ ಠಾಣೆ ವ್ಯಾಪ್ತಿಯ ಪ್ರಿಯದರ್ಶಿನಿ ಜುವೆಲ್ಲರ್ಸ್ ನಲ್ಲಿ ಕಳವು ನಡೆದಿದ್ದು, ಆರೋಪಿಗಳು ವ್ಯವಸ್ಥಿತವಾಗಿ ಕಳ್ಳತನ ನಡೆಸಿದ್ದಾರೆ. ಒಂದು ತಿಂಗಳ ಹಿಂದೆ ದೆಹಲಿಯ ನಕಲಿ ವಿಳಾಸವನ್ನು ನೀಡಿ, ಮೂವರು ವ್ಯಕ್ತಿಗಳು ಜುವೆಲ್ಲರಿ ಕಟ್ಟಡದ ಮೂರನೇ ಮಹಡಿಯಲ್ಲಿ ಬಾಡಿಗೆ ಕೋಣೆ ಪಡೆದಿದ್ದರು. ಕೆಳಗಿನ ಎರಡು ಮಹಡಿಯಲ್ಲಿ ಜುವೆಲ್ಲರಿ ಇದ್ದು, ಮೇಲಿನ ಮೂರನೇ ಮಹಡಿ ಖಾಲಿ ಇತ್ತು. ಅಲ್ಲಿ ಬಾಡಿಗೆ ಪಡೆದು ಒಂದು ತಿಂಗಳ ಕಾಲ ಜುವೆಲ್ಲರಿ ದರೋಡೆಗೆ ಆರೋಪಿಗಳು ಸ್ಕೆಚ್ ಹಾಕಿದ್ದಾರೆ.

ಜುವೆಲ್ಲರಿಯ ಇಂಚಿಂಚು ಮಾಹಿತಿ ಸಂಗ್ರಹಿಸಿದ ಬಳಿಕ ಮೊನ್ನೆ ರಜಾದಿನವಾದ ಭಾನುವಾರ ಕಳವು ಕೃತ್ಯ ನಡೆಸಿದ್ದಾರೆ. ಮೂರನೇ ಮಹಡಿಯಿಂದ ಕೆಳಗಿನ ಭಾಗಕ್ಕೆ ಕಾಂಕ್ರೀಟನ್ನು ಕೊರೆದು ಸುರಂಗ ತೋಡಿದ್ದು ಅಲ್ಲಿಂದ ಜುವೆಲ್ಲರಿ ಒಳಕ್ಕಿಳಿದು ಚಿನ್ನಾಭರಣ ಕಳವು ಮಾಡಿದ್ದಾರೆ. ಮಂಗಳವಾರ ಬೆಳಗ್ಗೆ ಮಾಲೀಕರು ಬಂದು ಜುವೆಲ್ಲರಿ ಓಪನ್ ಮಾಡಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಒಟ್ಟು 2.5 ಕೋಟಿ ಮೌಲ್ಯದ ಚಿನ್ನಾಭರಣ ಕಳವಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಕೊಠಡಿ ಬಾಡಿಗೆ ಪಡೆಯುವ ವೇಳೆ ವಿಳಾಸದ ಗುರುತಿಗಾಗಿ ಆಧಾರ್ ಕಾರ್ಡ್ ನೀಡಿದ್ದು, ಅದು ನಕಲಿಯೆಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಸಂಜೆ ವರೆಗೂ ವ್ಯಾಪಾರ ಮಾಡಿದ್ದ ಮಾಲೀಕರು ರಾತ್ರಿ ವೇಳೆಗೆ ಬಂದ್ ಮಾಡಿ ಹೋಗಿದ್ದರು. ಅದೇ ದಿನ ರಾತ್ರಿ 2 ಗಂಟೆಯ ವೇಳೆಗೆ ಜುವೆಲ್ಲರಿಗೆ ಕನ್ನ ಕೊರೆಯಲಾಗಿದೆ. ಗ್ಯಾಸ್ ಕಟರ್ ಬಳಸಿ ಕನ್ನ ಹಾಕಿರುವುದು ಕಂಡುಬಂದಿದ್ದು, ಒಳಕ್ಕಿಳಿದು ಕಪಾಟು ಒಡೆದು ಚಿನ್ನ ದೋಚಿದ್ದಾರೆ.
Bangalore Robbers break Priyadarshini Jewellers at JP Nagar, escape with five kilos of gold. A 15 member police team has been formed to nab the robbers. JP Nagar police are now investigating the case.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 11:41 am
HK News Staffer
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
22-03-26 12:10 pm
HK News Staffer
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm