ಬ್ರೇಕಿಂಗ್ ನ್ಯೂಸ್
20-04-22 12:09 pm Bengaluru Correspondent ಕ್ರೈಂ
ಬೆಂಗಳೂರು, ಎ.20: ಜುವೆಲ್ಲರಿ ಮೇಲ್ಗಡೆಯ ಮಹಡಿಯಲ್ಲಿ ಬಾಡಿಗೆ ಪಡೆದಿದ್ದ ತಂಡವೊಂದು ಜುವೆಲ್ಲರಿಗೆ ಕನ್ನ ಹಾಕಿದ್ದಲ್ಲದೆ, 5 ಕೇಜಿ ಚಿನ್ನಾಭರಣ ದೋಚಿಕೊಂಡು ಹೋಗಿರುವ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು 15 ಜನರ ವಿಶೇಷ ತಂಡವನ್ನು ರಚಿಸಿದ್ದಾರೆ.
ಜೆಪಿ ನಗರ ಠಾಣೆ ವ್ಯಾಪ್ತಿಯ ಪ್ರಿಯದರ್ಶಿನಿ ಜುವೆಲ್ಲರ್ಸ್ ನಲ್ಲಿ ಕಳವು ನಡೆದಿದ್ದು, ಆರೋಪಿಗಳು ವ್ಯವಸ್ಥಿತವಾಗಿ ಕಳ್ಳತನ ನಡೆಸಿದ್ದಾರೆ. ಒಂದು ತಿಂಗಳ ಹಿಂದೆ ದೆಹಲಿಯ ನಕಲಿ ವಿಳಾಸವನ್ನು ನೀಡಿ, ಮೂವರು ವ್ಯಕ್ತಿಗಳು ಜುವೆಲ್ಲರಿ ಕಟ್ಟಡದ ಮೂರನೇ ಮಹಡಿಯಲ್ಲಿ ಬಾಡಿಗೆ ಕೋಣೆ ಪಡೆದಿದ್ದರು. ಕೆಳಗಿನ ಎರಡು ಮಹಡಿಯಲ್ಲಿ ಜುವೆಲ್ಲರಿ ಇದ್ದು, ಮೇಲಿನ ಮೂರನೇ ಮಹಡಿ ಖಾಲಿ ಇತ್ತು. ಅಲ್ಲಿ ಬಾಡಿಗೆ ಪಡೆದು ಒಂದು ತಿಂಗಳ ಕಾಲ ಜುವೆಲ್ಲರಿ ದರೋಡೆಗೆ ಆರೋಪಿಗಳು ಸ್ಕೆಚ್ ಹಾಕಿದ್ದಾರೆ.

ಜುವೆಲ್ಲರಿಯ ಇಂಚಿಂಚು ಮಾಹಿತಿ ಸಂಗ್ರಹಿಸಿದ ಬಳಿಕ ಮೊನ್ನೆ ರಜಾದಿನವಾದ ಭಾನುವಾರ ಕಳವು ಕೃತ್ಯ ನಡೆಸಿದ್ದಾರೆ. ಮೂರನೇ ಮಹಡಿಯಿಂದ ಕೆಳಗಿನ ಭಾಗಕ್ಕೆ ಕಾಂಕ್ರೀಟನ್ನು ಕೊರೆದು ಸುರಂಗ ತೋಡಿದ್ದು ಅಲ್ಲಿಂದ ಜುವೆಲ್ಲರಿ ಒಳಕ್ಕಿಳಿದು ಚಿನ್ನಾಭರಣ ಕಳವು ಮಾಡಿದ್ದಾರೆ. ಮಂಗಳವಾರ ಬೆಳಗ್ಗೆ ಮಾಲೀಕರು ಬಂದು ಜುವೆಲ್ಲರಿ ಓಪನ್ ಮಾಡಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಒಟ್ಟು 2.5 ಕೋಟಿ ಮೌಲ್ಯದ ಚಿನ್ನಾಭರಣ ಕಳವಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಕೊಠಡಿ ಬಾಡಿಗೆ ಪಡೆಯುವ ವೇಳೆ ವಿಳಾಸದ ಗುರುತಿಗಾಗಿ ಆಧಾರ್ ಕಾರ್ಡ್ ನೀಡಿದ್ದು, ಅದು ನಕಲಿಯೆಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಸಂಜೆ ವರೆಗೂ ವ್ಯಾಪಾರ ಮಾಡಿದ್ದ ಮಾಲೀಕರು ರಾತ್ರಿ ವೇಳೆಗೆ ಬಂದ್ ಮಾಡಿ ಹೋಗಿದ್ದರು. ಅದೇ ದಿನ ರಾತ್ರಿ 2 ಗಂಟೆಯ ವೇಳೆಗೆ ಜುವೆಲ್ಲರಿಗೆ ಕನ್ನ ಕೊರೆಯಲಾಗಿದೆ. ಗ್ಯಾಸ್ ಕಟರ್ ಬಳಸಿ ಕನ್ನ ಹಾಕಿರುವುದು ಕಂಡುಬಂದಿದ್ದು, ಒಳಕ್ಕಿಳಿದು ಕಪಾಟು ಒಡೆದು ಚಿನ್ನ ದೋಚಿದ್ದಾರೆ.
Bangalore Robbers break Priyadarshini Jewellers at JP Nagar, escape with five kilos of gold. A 15 member police team has been formed to nab the robbers. JP Nagar police are now investigating the case.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm