ಬ್ರೇಕಿಂಗ್ ನ್ಯೂಸ್
24-09-20 04:02 pm Udupi Correspondent ಕ್ರೈಂ
ಉಡುಪಿ, ಸೆಪ್ಟಂಬರ್ 24: ಉಡುಪಿ ನಗರ ಭಾಗದ ಹಿರಿಯಡ್ಕದಲ್ಲಿ ಹಾಡುಹಗಲೇ ರೌಡಿಶೀಟರ್ ಒಬ್ಬನನ್ನು ಕಡಿದು ಕೊಲೆ ಮಾಡಲಾಗಿದೆ. ಕೊಲೆಯಾದ ಯುವಕನನ್ನು ಕಿಶನ್ ಹೆಗ್ಡೆ ಇನ್ನಾ ಎಂದು ಗುರುತಿಸಲಾಗಿದೆ.
ನಗರದ ಹೃದಯ ಭಾಗದಲ್ಲೇ ಜನರು ನೋಡನೋಡುತ್ತಿದ್ದಂತೆ ಘಟನೆ ನಡೆದಿದ್ದು ಯುವಕನ ಕತ್ತು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಿಶನ್ ಹೆಗ್ಡೆ ತನ್ನ ಗೆಳೆಯನ ಜೊತೆ ಕಾರಿನಲ್ಲಿ ಕುಳಿತಿದ್ದಾಗ ಉಡುಪಿ ಕಡೆಯಿಂದ ಬಂದ ಇನ್ನೋವ ಮತ್ತು ರಿಡ್ಜ್ಕಾರಿನಲ್ಲಿ 8 ಮಂದಿ ಬಂದಿದ್ದಾರೆ. ಸ್ಥಳದಲ್ಲಿ ಕೆಲಕಾಲ ವಾಗ್ವಾದ ನಡೆದು ಕಿಶನ್ ಹೆಗ್ಡೆ ಕಾರಿನಿಂದ ಕೆಳಗಿಳಿಯುತ್ತಿದ್ದಂತೆ ಯುವಕರ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿದೆ. ತಲೆಯ ಹಿಂಭಾಗಕ್ಕೆ ಮತ್ತು ಕುತ್ತಿಗೆಗೆ ಬಲವಾದ ಪೆಟ್ಟಾಗಿದೆ. ಕಿಶನ್ ಹೆಗ್ಡೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ವಿವರ ನೀಡಿದ್ದಾರೆ.


ಕಿಶನ್ ಹೆಗ್ಡೆ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಎನ್ನಲಾಗಿದೆ. ಹಿರಿಯಡ್ಕ ಪರಿಸರದಲ್ಲಿ ಪ್ರಭಾವ ಬೆಳೆಸಿಕೊಂಡಿದ್ದ ಅಪರಾಧ ಹಿನ್ನೆಲೆ ಹೊಂದಿದ್ದ. ಪೂರ್ವ ದ್ವೇಷದಿಂದ ಎರಡು ಕಾರುಗಳಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ತಂಡ ಕಿಶನ್ ಹೆಗ್ಡೆಯ ಕಾರನ್ನು ಅಡ್ಡಗಟ್ಟಿ ಕುತ್ತಿಗೆಯನ್ನು ಕತ್ತರಿಸಿದ್ದಾರೆ. ಕಿಶನ್ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಕೊಲೆಯ ಹಿಂದೆ ಯಾರಿದ್ದಾರೆ, ದ್ವೇಷ ಏನಿತ್ತು ಎಂಬುದು ತಿಳಿದುಬಂದಿಲ್ಲ.
ಸ್ಥಳಕ್ಕೆ ಹಿರಿಯಡ್ಕ ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ, ಬಂದೋಬಸ್ತ್ ಕೈಗೊಂಡಿದ್ದಾರೆ. ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am