ಬ್ರೇಕಿಂಗ್ ನ್ಯೂಸ್
24-04-22 01:28 pm HK News Desk ಕ್ರೈಂ
ಬೆಂಗಳೂರು, ಎ.24: ಇತ್ತೀಚೆಗೆ ಬೆಂಗಳೂರಿನ ಹತ್ತಕ್ಕೂ ಶಾಲೆಗಳಿಗೆ ಬಾಂಬ್ ಇದೆಯೆಂದು ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ತನಿಖೆ ಚುರುಕುಗೊಂಡಿದ್ದು ಕೇಂದ್ರ ಗುಪ್ತಚರ ದಳವೂ ತನಿಖೆ ಕೈಗೆತ್ತಿಕೊಂಡಿದೆ. ತನಿಖೆಯಲ್ಲಿ ಇ-ಮೇಲ್ ಬೆದರಿಕೆ ಸಂದೇಶ ಪಾಕಿಸ್ಥಾನ ಅಥವಾ ಸಿರಿಯಾದಿಂದ ಬಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಇ-ಮೇಲ್ ಸಂದೇಶದಲ್ಲಿ ಬಳಸಿದ ಭಾಷೆ ಮತ್ತು ಶಬ್ದಗಳು ಒಂದೇ ರೀತಿಯವಾಗಿದ್ದು, ಯಾರೋ ಒಂದೇ ತಂಡದ ಕೃತ್ಯ ಎನ್ನುವ ಶಂಕೆ ಅಧಿಕಾರಿಗಳದ್ದು, ಹೀಗಾಗಿ ಇ-ಮೇಲ್ ಸಂದೇಶ ಎಲ್ಲಿಂದ ಬಂದಿತ್ತು ಎನ್ನುವ ಬಗ್ಗೆ ಅಧಿಕಾರಿಗಳು ಸರ್ವರ್ ಆಧರಿಸಿ ತನಿಖೆ ಕೈಗೊಂಡಿದ್ದಾರೆ. ರಾಜ್ಯ ಗುಪ್ತಚರ ದಳ, ಆಂತರಿಕ ಭದ್ರತಾ ದಳ ಮತ್ತು ಕೇಂದ್ರೀಯ ಗುಪ್ತಚರ ದಳ ಪ್ರಕರಣದ ಬಗ್ಗೆ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ.

ವಿದೇಶದಿಂದ ಇ-ಮೇಲ್ ಬಂದಿರುವ ಬಗ್ಗೆ ಪ್ರಾಥಮಿಕ ಮಾಹಿತಿಗಳಿವೆ. ಹೀಗಾಗಿ ಪಾಕಿಸ್ಥಾನ ಅಥವಾ ಗಲ್ಫ್ ರಾಷ್ಟ್ರಗಳಿಂದ ಮೇಲ್ ಬಂದಿರುವ ಬಗ್ಗೆ ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಒಂದೇ ಸರ್ವರ್ ಆಗಿರಬಹುದೇ, ಬೇರೆ ಬೇರೆ ಸರ್ವರ್ ಗಳನ್ನು ಬಳಸಿ ಇಮೇಲ್ ಮಾಡಲಾಗಿದೆಯೇ ಎಂಬುದನ್ನು ಪತ್ತೆಹಚ್ಚಲು ಬೆಂಗಳೂರು ಪೊಲೀಸರು ಸೈಬರ್ ತಂತ್ರಜ್ಞರ ಮೊರೆ ಹೋಗಿದ್ದಾರೆ. ಇದೇ ವೇಳೆ, ಗೂಗಲ್ ಸಂಸ್ಥೆಯಿಂದಲೂ ತನಿಖೆಗೆ ಮಾಹಿತಿ ಪಡೆಯುವುದಕ್ಕೂ ಮುಂದಾಗಿದ್ದಾರೆ.
ಇದೇ ವೇಳೆ, ಹಳೆಯ ಬಾಂಬ್ ಬೆದರಿಕೆ ಪ್ರಕರಣಗಳ ಬಗ್ಗೆಯೂ ಪೊಲೀಸರು ಜಾಲಾಡಿದ್ದಾರೆ. ಹಳೆ ಆರೋಪಿಗಳನ್ನು ವಿಚಾರಣೆ ನಡೆಸಿ, ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ. ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣ ಸೇರಿದಂತೆ ಹಲವು ಕಡೆ ಬಾಂಬ್ ಇರಿಸಿದ್ದಾಗಿ ಹುಸಿ ಕರೆ ಮಾಡಿದ್ದ ಪ್ರಕರಣಗಳ ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ. ಅವರಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಇ-ಮೇಲ್ ಸಂದೇಶ ಎಲ್ಲಿಂದ ಬಂದಿತ್ತು ಅನ್ನುವುದನ್ನು ಪತ್ತೆಹಚ್ಚಲು ತನಿಖೆ ಕೈಗೊಂಡಿದ್ದಾರೆ.
13 schools in Bengaluru get hoax bomb threat, Pak work behind emails says Intellegence. As many as 13 private schools in and around the city received emails threatening that explosives have been planted on the school premises, on Friday. The police, who concluded that it is a mischief, have intensified the investigation to trace the people behind it. Reacting to the incident, Chief Minister Basavaraj Bommai said it is a conspiracy to disturb peace and tarnish the image of the state.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 03:14 pm
HK News Staffer
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
22-03-26 02:42 pm
HK News Staffer
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm