ಬ್ರೇಕಿಂಗ್ ನ್ಯೂಸ್
25-04-22 09:53 am HK Desk news ಕ್ರೈಂ
ಬೆಳ್ತಂಗಡಿ, ಎ.25 ಪರಿಶಿಷ್ಟ ಜನಾಂಗದ ಮಹಿಳೆಯನ್ನು ಅದೇ ಸಮುದಾಯದ ತಂಡವೊಂದು ಅರೆ ಬೆತ್ತಲೆಗೊಳಿಸಿ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದ್ದು ಘಟನೆ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಮೂವರು ಮಹಿಳೆಯರು ಸೇರಿ ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಜಾಗದ ತಕರಾರಿನ ವಿಚಾರದಲ್ಲಿ ಹಲ್ಲೆ ಕೃತ್ಯ ನಡೆದಿದ್ದು ಉಜಿರೆ ಗುರಿಪಳ್ಳ ನಿವಾಸಿಗಳಾದ ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಸುಗುಣ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬವರ ವಿರುದ್ಧ ಐಪಿಸಿ 143, 147, 148, 323, 324, 504, 354, 354(B), 506, 149 ಅಡಿ ಎಫ್ ಐಆರ್ ದಾಖಲಾಗಿದೆ.
ಬಿಜೆಪಿ ತಾಲೂಕು ಘಟಕದ ಎಸ್.ಟಿ. ಮೋರ್ಚಾ ಅಧ್ಯಕ್ಷ ಸೇರಿ ಹಲವರು ಸೇರಿ ಕೃತ್ಯ ನಡೆಸಿದ್ದಾಗಿ ಆರೋಪಿಸಲಾಗಿದೆ. ಅರೆಬೆತ್ತಲೆ ಮಾಡಿ ಹಲ್ಲೆ ನಡೆಸಿದ್ದಲ್ಲದೆ, ಕೃತ್ಯದ ವಿಡಿಯೋ ಮಾಡಿದ ಬಗ್ಗೆಯೂ ದೂರಿನಲ್ಲಿ ತಿಳಿಸಲಾಗಿದೆ.

ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸರಕಾರಿ ಜಾಗದಲ್ಲಿ ಮನೆ ನಿರ್ಮಿಸುವುದಕ್ಕಾಗಿ ಸಲ್ಲಿಸಿದ್ದ 94ಸಿ ಅರ್ಜಿಯ ವಿಚಾರದಲ್ಲಿ ಎ.19 ರಂದು ಪಂಚಾಯತ್ ಪಿಡಿಓ ಮತ್ತು ಗ್ರಾಮ ಲೆಕ್ಕಾಧಿಕಾರಿ ಸ್ಥಳಕ್ಕೆ ಬಂದಿದ್ದರು.
ಈ ಸಂದರ್ಭ ಜಾಗದ ವಿಚಾರದಲ್ಲಿ ಇನ್ನೊಂದು ತಂಡ ತಕರಾರು ತೆಗೆದಿದ್ದು ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಪಡಿಸಿತ್ತು. ಇದರಿಂದ ಅಳತೆಗೆ ಬಂದಿದ್ದ ಅಧಿಕಾರಿಗಳು ತಮ್ಮಿಂದ ಈ ಕಾರ್ಯ ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದರು. ಅಧಿಕಾರಿ ಸಿಬಂದಿ ತೆರಳಿದ ಬಳಿಕ ಸುರೇಖಾ ಎಂಬ ಮಹಿಳೆ ಧರಿಸಿದ್ದ ನೈಟಿಯನ್ನು ಹಿಡಿದೆಳೆದು ಹಲ್ಲೆ ನಡೆಸಿದ್ದಾಗಿ ದೂರಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
9 booked for stripping and assaulting tribal woman in Dakshina Kannada.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm