ಬ್ರೇಕಿಂಗ್ ನ್ಯೂಸ್
03-05-22 04:35 pm Mangalore Correspondent ಕ್ರೈಂ
ಬಂಟ್ವಾಳ, ಮೇ 3 : ಬಿ.ಸಿ.ರೋಡ್ ನಲ್ಲಿ ಮಕ್ಕಳ ತಜ್ಞರಾಗಿರುವ ಡಾ.ಅಶ್ವಿನ್ ಬಾಳಿಗಾ ಅವರನ್ನು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಮೈ ಜಿಯೋ ಏಪ್ ಡೌನ್ಲೋಡ್ ಮಾಡುವ ಹೆಸರಲ್ಲಿ ವೈದ್ಯರ ಖಾತೆಯಿಂದ 1.65 ಲಕ್ಷ ರೂಪಾಯಿ ಹಣ ದೋಚಿದ ಘಟನೆ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಡಾ.ಅಶ್ವಿನ್ ಬಾಳಿಗಾ ಅವರಿಗೆ ಎ.28 ರಂದು ಸಂಜೆ 5.30 ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು ನಿಮ್ಮ ಜಿಯೋ ನಂಬರನ್ನು ಅಪ್ಡೇಟ್ ಮಾಡುವುದಾಗಿ ತಿಳಿಸಿದ್ದಾನೆ. ಅಲ್ಲದೆ, ಗೂಗಲ್ ಪ್ಲೇ ಸ್ಟೋರ್ ನಿಂದ ಕ್ವಿಕ್ ಈಝೀ ಏಪ್ ಡೌನ್ಲೋಡ್ ಮಾಡಲು ಹೇಳಿದ್ದಾನೆ. ಆನಂತರ, ಅಶ್ವಿನ್ ಬಾಳಿಗಾ ಅವರಿಗೆ ಮೈ ಜಿಯೋ ಏಪ್ ನಲ್ಲಿ ಮೊಬೈಲ್ ನಲ್ಲಿ ಹತ್ತು ರೂಪಾಯಿ ರಿಚಾರ್ಜ್ ಮಾಡಲು ತಿಳಿಸಿದ್ದ. ಅದರಂತೆ, ಅಶ್ವಿನ್ ಬಾಳಿಗಾ ಅವರು ತನ್ನ ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಮತ್ತು ಎಟಿಎಂ ಕಾರ್ಡ್ ವಿವರಗಳನ್ನು ಮೈ ಜಿಯೋ ಏಪ್ ನಲ್ಲಿ ದಾಖಲಿಸಿ, ಹತ್ತು ರೂ. ರಿಚಾರ್ಜ್ ಮಾಡಿದ್ದಾರೆ.

ಕೂಡಲೇ ವೈದ್ಯರ ಬ್ಯಾಂಕ್ ಖಾತೆಯುಳ್ಳ ಎಚ್ ಡಿಎಫ್ ಸಿ ಖಾತೆಯಿಂದ ಹತ್ತು ಸಾವಿರ ರೂ. ಮೂರು ಬಾರಿ ಕಟ್ ಆಗಿದೆ. ಆನಂತರ ರೂ.45 ಸಾವಿರದಂತೆ ಮೂರು ಬಾರಿ ಕಟ್ ಆಗಿದ್ದು ಅಪರಿಚಿತನ ಖಾತೆಗೆ ಹಣ ವರ್ಗಾವಣೆ ಆಗಿದೆ. ಒಟ್ಟು 1.65 ಲಕ್ಷ ರೂ. ಹಣ ಖಾತೆಯಿಂದ ಬೇರೆ ಖಾತೆಗೆ ಜಮಾ ಆಗಿದ್ದು ವೈದ್ಯರು ಮೋಸ ಹೋಗಿದ್ದಾರೆ. ಈ ಬಗ್ಗೆ ವೈದ್ಯ ಡಾ.ಅಶ್ವಿನ್ ಬಾಳಿಗಾ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of My Jio app update, doctor looted of 1.65 lakh in Bantwal.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm