ಬ್ರೇಕಿಂಗ್ ನ್ಯೂಸ್
09-05-22 10:30 pm Udupi Correspondent ಕ್ರೈಂ
ಉಡುಪಿ, ಮೇ 9 : ತಾಯಿ ಮತ್ತು ಆಕೆಯ ಹತ್ತು ವರ್ಷದ ಮಗು ಸಂಶಯಾಸ್ಪದ ನೆಲೆಯಲ್ಲಿ ಸಾವನ್ನಪ್ಪಿದ ಘಟನೆ ಹಿರಿಯಡ್ಕ ಬಳಿಯ ಆತ್ರಾಡಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಆತ್ರಾಡಿ ಗ್ರಾಮದ ಮದಗ ನಿವಾಸಿಗಳಾದ ಚೆಲುವಿ (28) ಮತ್ತು ಆಕೆಯ ಮಗಳು ಪ್ರಿಯಾ (10) ಮೃತರು. ಚೆಲುವಿ ಮಣಿಪಾಲದ ಖಾಸಗಿ ಕಂಪನಿ ಒಂದರಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದು ಇಬ್ಬರು ಮಕ್ಕಳೊಂದಿಗೆ ಮದಗದಲ್ಲಿ ನೆಲೆಸಿದ್ದಳು.
ಮೇ 8 ರ ಭಾನುವಾರ ಚೆಲುವಿಯ ತಾಯಿ ಮದಗದ ಮನೆಗೆ ಬಂದಿದ್ದು ಅಜ್ಜಿಯ ಜೊತೆಗೆ ಈಕೆಯ ಮಗನೂ ಅಜ್ಜಿ ಮನೆಗೆ ತೆರಳಿದ್ದ. ಹೀಗಾಗಿ ಭಾನುವಾರ ರಾತ್ರಿ ಚೆಲುವಿ ಮತ್ತು ಆಕೆಯ ಮಗಳು ಮಾತ್ರ ಮನೆಯಲ್ಲಿದ್ದರು. ಸೋಮವಾರ ಬೆಳಗ್ಗೆ ಅಜ್ಜಿ ಚೆಲುವಿಗೆ ಫೋನ್ ಮಾಡಿದಾಗ, ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಏನೋ ಡೌಟ್ ಬಂದು ಚೆಲುವಿಯ ನೆರೆಮನೆಯ ನಿವಾಸಿಗಳಿಗೆ ಮಾಹಿತಿ ನೀಡಿದ್ದರು. ಅವರು ಚೆಲುವಿ ಮನೆಗೆ ತೆರಳಿ ನೋಡಿದಾಗ, ತಾಯಿ, ಮಗಳು ಸಂಶಯಾಸ್ಪದವಾಗಿ ಸಾವು ಕಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಚೆಲುವಿ ಶವ ಮನೆ ಬಾಗಿಲ ಬಳಿ ಇದ್ದರೆ, ಮಗಳು ಪ್ರಿಯಾ ಕೊಠಡಿ ಒಳಗೆ ಸಾವನ್ನಪ್ಪಿದ್ದಳು. ಸ್ಥಳೀಯರು ಕೊಲೆ ನಡೆದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ವಿಧಿ ವಿಜ್ಞಾನ ತಜ್ಞರು ಬಂದು ಪರಿಶೀಲನೆ ನಡೆಸಿದ್ದಾರೆ. ಎಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ್ ನಾಯ್ಕ್, ಸಿಪಿಐ ಅನಂತ ಪದ್ಮನಾಭ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi: In a Suspicious manner, a mother and her 10-year-old daughter were found dead in the house on Monday, May 9 at Madaga near Atradi under the Hiriyadka Police Station Limits. The deceased have been identified as Cheluvi (28) and her daughter Priya (10), residents of Madaga near Atradi.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm