ಬ್ರೇಕಿಂಗ್ ನ್ಯೂಸ್
18-05-22 10:28 pm Mangaluru Correspondent ಕ್ರೈಂ
Photo credits : Representational Image
ಬೆಳ್ತಂಗಡಿ, ಮೇ 18: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ತುಂಬಿಸಿಕೊಂಡು ಚಿಕ್ಕಮಗಳೂರಿನ ಕಡೆಗೆ ಒಯ್ಯುತ್ತಿದ್ದಾಗ ಧರ್ಮಸ್ಥಳ ಪೊಲೀಸರು ತಡೆದು ವಶಕ್ಕೆ ಪಡೆದಿರುವ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಸ್ಥಳ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಉಜಿರೆ ಕಡೆಯಿಂದ ತೆರಳುತ್ತಿದ್ದ ಕೆಎ 19ಸಿ 5086 ಸಂಖ್ಯೆಯ ಬೊಲೆರೋ ವಾಹನದಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಯಾವುದೇ ದಾಖಲಾತಿ ಇಲ್ಲದೆ 50 ಕೆಜಿ ಅಕ್ಕಿಯ 59 ಚೀಲಗಳು, 25 ಕೇಜಿಯ 14 ಗೋಣಿ ಚೀಲಗಳಲ್ಲಿ ಅಕ್ಕಿ ಪತ್ತೆಯಾಗಿದೆ. ಒಟ್ಟು 33 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದು, ಇದರ ಅಂದಾಜು ಮೌಲ್ಯ 49,500 ರೂ. ಆಗಿರುತ್ತದೆ.
ಈ ಬಗ್ಗೆ ಪೊಲೀಸರು ಬೆಳ್ತಂಗಡಿ ವಿಭಾಗದ ಆಹಾರ ನಿರೀಕ್ಷಕ ವಿಶ್ವ .ಕೆ , ಸಿಬಂದಿಯನ್ನು ಸ್ಥಳಕ್ಕೆ ಕರೆಸಿದ್ದು ಪಂಚನಾಮೆ ನಡೆಸಿದ್ದಾರೆ. ಆಹಾರ ನಿರೀಕ್ಷಕರ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬೊಲೆರೊ ವಾಹನ ಚಾಲಕ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ನಿವಾಸಿ ವಿನಯ್ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ರಿ ಅಕ್ಕಿಯು ಮೇ ತಿಂಗಳಲ್ಲಿ ಪಡಿತರ ಅಂಗಡಿಗಳಿಗೆ ಪೂರೈಸಿದ ಅಕ್ಕಿಯೆಂದು ಆಹಾರ ಇಲಾಖೆಯ ಅಧಿಕಾರಿಗಳು ಗುರುತಿಸಿದ್ದಾರೆ.
ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಒಯ್ಯುತ್ತಿರುವ ಮಾಹಿತಿಯಿದ್ದು, ಚಾಲಕನಿಗೆ ಸಹಾಯ ಮಾಡಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಕಿ ಮತ್ತು ಬೊಲೆರೋ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
Mangalore Police seize 33 quintals of PDS rice at Charmadi Check Post
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am