ಬ್ರೇಕಿಂಗ್ ನ್ಯೂಸ್
18-05-22 10:28 pm Mangaluru Correspondent ಕ್ರೈಂ
Photo credits : Representational Image
ಬೆಳ್ತಂಗಡಿ, ಮೇ 18: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ತುಂಬಿಸಿಕೊಂಡು ಚಿಕ್ಕಮಗಳೂರಿನ ಕಡೆಗೆ ಒಯ್ಯುತ್ತಿದ್ದಾಗ ಧರ್ಮಸ್ಥಳ ಪೊಲೀಸರು ತಡೆದು ವಶಕ್ಕೆ ಪಡೆದಿರುವ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಸ್ಥಳ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಉಜಿರೆ ಕಡೆಯಿಂದ ತೆರಳುತ್ತಿದ್ದ ಕೆಎ 19ಸಿ 5086 ಸಂಖ್ಯೆಯ ಬೊಲೆರೋ ವಾಹನದಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಯಾವುದೇ ದಾಖಲಾತಿ ಇಲ್ಲದೆ 50 ಕೆಜಿ ಅಕ್ಕಿಯ 59 ಚೀಲಗಳು, 25 ಕೇಜಿಯ 14 ಗೋಣಿ ಚೀಲಗಳಲ್ಲಿ ಅಕ್ಕಿ ಪತ್ತೆಯಾಗಿದೆ. ಒಟ್ಟು 33 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದು, ಇದರ ಅಂದಾಜು ಮೌಲ್ಯ 49,500 ರೂ. ಆಗಿರುತ್ತದೆ.
ಈ ಬಗ್ಗೆ ಪೊಲೀಸರು ಬೆಳ್ತಂಗಡಿ ವಿಭಾಗದ ಆಹಾರ ನಿರೀಕ್ಷಕ ವಿಶ್ವ .ಕೆ , ಸಿಬಂದಿಯನ್ನು ಸ್ಥಳಕ್ಕೆ ಕರೆಸಿದ್ದು ಪಂಚನಾಮೆ ನಡೆಸಿದ್ದಾರೆ. ಆಹಾರ ನಿರೀಕ್ಷಕರ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬೊಲೆರೊ ವಾಹನ ಚಾಲಕ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ನಿವಾಸಿ ವಿನಯ್ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ರಿ ಅಕ್ಕಿಯು ಮೇ ತಿಂಗಳಲ್ಲಿ ಪಡಿತರ ಅಂಗಡಿಗಳಿಗೆ ಪೂರೈಸಿದ ಅಕ್ಕಿಯೆಂದು ಆಹಾರ ಇಲಾಖೆಯ ಅಧಿಕಾರಿಗಳು ಗುರುತಿಸಿದ್ದಾರೆ.
ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಒಯ್ಯುತ್ತಿರುವ ಮಾಹಿತಿಯಿದ್ದು, ಚಾಲಕನಿಗೆ ಸಹಾಯ ಮಾಡಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಕಿ ಮತ್ತು ಬೊಲೆರೋ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
Mangalore Police seize 33 quintals of PDS rice at Charmadi Check Post
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm