ಬ್ರೇಕಿಂಗ್ ನ್ಯೂಸ್
18-05-22 10:28 pm Mangaluru Correspondent ಕ್ರೈಂ
Photo credits : Representational Image
ಬೆಳ್ತಂಗಡಿ, ಮೇ 18: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ತುಂಬಿಸಿಕೊಂಡು ಚಿಕ್ಕಮಗಳೂರಿನ ಕಡೆಗೆ ಒಯ್ಯುತ್ತಿದ್ದಾಗ ಧರ್ಮಸ್ಥಳ ಪೊಲೀಸರು ತಡೆದು ವಶಕ್ಕೆ ಪಡೆದಿರುವ ಘಟನೆ ಚಾರ್ಮಾಡಿಯಲ್ಲಿ ನಡೆದಿದೆ.
ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಧರ್ಮಸ್ಥಳ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಉಜಿರೆ ಕಡೆಯಿಂದ ತೆರಳುತ್ತಿದ್ದ ಕೆಎ 19ಸಿ 5086 ಸಂಖ್ಯೆಯ ಬೊಲೆರೋ ವಾಹನದಲ್ಲಿ ಅನ್ನಭಾಗ್ಯ ಅಕ್ಕಿ ಪತ್ತೆಯಾಗಿದೆ. ಯಾವುದೇ ದಾಖಲಾತಿ ಇಲ್ಲದೆ 50 ಕೆಜಿ ಅಕ್ಕಿಯ 59 ಚೀಲಗಳು, 25 ಕೇಜಿಯ 14 ಗೋಣಿ ಚೀಲಗಳಲ್ಲಿ ಅಕ್ಕಿ ಪತ್ತೆಯಾಗಿದೆ. ಒಟ್ಟು 33 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದಿದ್ದು, ಇದರ ಅಂದಾಜು ಮೌಲ್ಯ 49,500 ರೂ. ಆಗಿರುತ್ತದೆ.
ಈ ಬಗ್ಗೆ ಪೊಲೀಸರು ಬೆಳ್ತಂಗಡಿ ವಿಭಾಗದ ಆಹಾರ ನಿರೀಕ್ಷಕ ವಿಶ್ವ .ಕೆ , ಸಿಬಂದಿಯನ್ನು ಸ್ಥಳಕ್ಕೆ ಕರೆಸಿದ್ದು ಪಂಚನಾಮೆ ನಡೆಸಿದ್ದಾರೆ. ಆಹಾರ ನಿರೀಕ್ಷಕರ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಬೊಲೆರೊ ವಾಹನ ಚಾಲಕ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಮುತ್ತಿಗೆಪುರ ಗ್ರಾಮದ ನಿವಾಸಿ ವಿನಯ್ (23) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ರಿ ಅಕ್ಕಿಯು ಮೇ ತಿಂಗಳಲ್ಲಿ ಪಡಿತರ ಅಂಗಡಿಗಳಿಗೆ ಪೂರೈಸಿದ ಅಕ್ಕಿಯೆಂದು ಆಹಾರ ಇಲಾಖೆಯ ಅಧಿಕಾರಿಗಳು ಗುರುತಿಸಿದ್ದಾರೆ.
ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಒಯ್ಯುತ್ತಿರುವ ಮಾಹಿತಿಯಿದ್ದು, ಚಾಲಕನಿಗೆ ಸಹಾಯ ಮಾಡಿದವರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ಕಿ ಮತ್ತು ಬೊಲೆರೋ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
Mangalore Police seize 33 quintals of PDS rice at Charmadi Check Post
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm