ಬ್ರೇಕಿಂಗ್ ನ್ಯೂಸ್
20-05-22 01:54 pm HK Desk News ಕ್ರೈಂ
ನವದೆಹಲಿ, ಮೇ 20: ಮ್ಯಾಟ್ರಿಮೋನಿಯಲ್ ಸೈಟ್ ನಲ್ಲಿ ನಕಲಿ ಪ್ರೊಫೈಲ್ ಬಳಸ್ಕೊಂಡು ನೂರಕ್ಕೂ ಹೆಚ್ಚು ಮಹಿಳೆಯರ ಜೊತೆ ಸಂಪರ್ಕ ಬೆಳೆಸಿದ್ದಲ್ಲದೆ, ಮದುವೆಯಾಗುವುದಾಗಿ ನಂಬಿಸಿ ಅವರಿಂದಲೇ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿರುವ ಘಟನೆ ಬೆಳಕಿಗೆ ಬಂದಿದ್ದು ದೆಹಲಿ ಪೊಲೀಸರು ವಂಚಕನನ್ನು ಕೊಲ್ಕತ್ತಾದಲ್ಲಿ ಬಂಧಿಸಿದ್ದಾರೆ.
ದೆಹಲಿಯ ಡಾಕ್ಟರ್ ಮಹಿಳೆಯೊಬ್ಬರು ತನಗಾದ ವಂಚನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಮೂಲತಃ ಒಡಿಶಾದ ಕಿಯೋಂಜಾರ್ ಜಿಲ್ಲೆಯ ನಿವಾಸಿ ಫರಾನ್ ತಸೀರ್ ಖಾನ್ ಬಂಧಿತ ವ್ಯಕ್ತಿ. ಏಮ್ಸ್ ನಲ್ಲಿ ವೈದ್ಯರಾಗಿದ್ದ ಮಹಿಳೆ ದೆಹಲಿ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ಆರೋಪಿ ಮ್ಯಾಟ್ರಿಮೋನಿಯಲ್ ಸೈಟ್ ನಲ್ಲಿ ಪರಿಚಯ ಆಗಿದ್ದ. ತನ್ನನ್ನು ಬಿಸಿನೆಸ್ ಮ್ಯಾನ್ ಎಂದು ಹೇಳಿಕೊಂಡಿದ್ದಲ್ಲದೆ, ಮದುವೆಯಾಗುವುದಾಗಿ ನಂಬಿಸಿ ವ್ಯವಹಾರ ವಿಸ್ತರಣೆಗಾಗಿ 15 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದಾನೆಂದು ತಿಳಿಸಿದ್ದರು.
ಪೊಲೀಸರು ತನಿಖೆ ನಡೆಸಿದಾಗ ಫರಾನ್ ತಸೀರ್ ಖಾನ್, ವಿವಿಧ ಮ್ಯಾಟ್ರಿಮೋನಿಯಲ್ ಸೈಟ್ ನಲ್ಲಿ ತನ್ನ ಹೆಸರನ್ನು ನೋಂದಾಯಿಸಿದ್ದ. ತಾನೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ಎಂದು ತೋರಿಸಿಕೊಳ್ಳುತ್ತಿದ್ದ. ಐಷಾರಾಮಿ ಬಿಎಂಡಬ್ಲ್ಯು ಕಾರಿನಲ್ಲಿ ತಿರುಗಾಡುತ್ತಿರುವ ಫೋಟೋವನ್ನು ಹಾಕ್ಕೊಳ್ತಿದ್ದ. ಬಳಿಕ ನೋಡಿದರೆ, ಕಾರು ಆತನದ್ದಾಗಿರಲಿಲ್ಲ. ಬೇರೆಯವರ ಕಾರಿನಲ್ಲಿ ಕುಳಿತು ಫೋಟೋ ತೆಗೆದು ಮಹಿಳೆಯರನ್ನು ನಂಬಿಸುತ್ತಿದ್ದ. ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಮುಂಬೈ, ಒಡಿಶಾ, ದೆಹಲಿ, ಪಂಜಾಬ್, ಕರ್ನಾಟಕ ಹೀಗೆ ಹಲವು ರಾಜ್ಯಗಳ ಮಹಿಳೆಯರು ಈತನ ವಂಚನೆಗೆ ಒಳಗಾಗಿದ್ದಾರೆ.
ಹೆಚ್ಚಾಗಿ ಒಂದು ನಗರದಿಂದ ಮತ್ತೊಂದು ಕಡೆಗೆ ಪ್ರಯಾಣ ಮಾಡುತ್ತಿದ್ದ ಖಾನ್, ಅದರ ನಡುವೆಯೇ ಹುಡುಗಿಯರನ್ನು ಸಂಪರ್ಕಿಸಿ ವಿಡಿಯೋ ಕಾಲ್ ಮಾಡುತ್ತಿದ್ದ. ವಿಡಿಯೋ ಕರೆಯನ್ನು ರೆಕಾರ್ಡ್ ಮಾಡಿ ಬ್ಲಾಕ್ಮೇಲ್ ಮಾಡುತ್ತಿದ್ದ. ಅವರಿಂದಲೇ ಹಣ ಪಡೆಯುತ್ತಿದ್ದ. ತನಗೆ ವರ್ಷಕ್ಕೆ 30ರಿಂದ 40 ಲಕ್ಷ ಆದಾಯ ಬರುತ್ತಿದೆ ಎಂದು ಹೇಳಿ ನಂಬಿಸುತ್ತಿದ್ದ. ತಸೀರ್ ಖಾನ್ ಗೆ ಮದುವೆಯಾಗಿದ್ದು ಮೂರು ವರ್ಷದ ಮಗಳಿದ್ದಾಳೆ. ತಂದೆ, ತಾಯಿಯೂ ಇದ್ದಾರೆ. ಆದರೆ ಮಹಿಳೆಯರ ಬಳಿ ತನಗೆ ಯಾರೂ ಸಂಬಂಧಿಕರಿಲ್ಲ. ಹೆತ್ತವರು ರಸ್ತೆ ಅಪಘಾತದಲ್ಲಿ ತೀರಿಕೊಂಡಿದ್ದಾರೆ. ಬಿಸಿನೆಸ್ ಮಾಡಿಕೊಂಡಿದ್ದೇನೆ ಎಂದು ಹೇಳಿ ಪುಂಗಿ ಊದುತ್ತಲೇ ಮಹಿಳೆಯರನ್ನು ಬಲೆಗೆ ಹಾಕ್ಕೊಳ್ತಿದ್ದ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
A 35-year-old man was arrested for allegedly duping over 100 women from across the country of several lakh rupees on on the pretext of marriage, police said on Friday.Farhan Taseer Khan, currently residing in Odisha's Keonjhar district, was arrested from Paharganj in central Delhi based on the complaint filed by a woman doctor working at the All India Institute of Medical Sciences (AIIMS) in Delhi in March.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm