ಬ್ರೇಕಿಂಗ್ ನ್ಯೂಸ್
04-06-22 08:54 pm Source: Vijayakarnataka ಡಿಜಿಟಲ್ ಟೆಕ್
ಜನಪ್ರಿಯ ಇನ್ಸ್ಟಂಟ್ ಮೆಸೇಜಿಂಗ್ ಅಪ್ಲಿಕೇಷನ್ WhatsApp ನಲ್ಲಿ ಯಾರೂ ಊಹಿಸದಂತಹ ಅಪ್ಡೇಟ್ ಒಂದನ್ನು ಗುರುತಿಸಲಾಗಿದ್ದು, ಇನ್ಮುಂದೆ WhatsApp ಬಳಕೆದಾರರು ತಾವು ಕಳುಹಿಸಿರುವ ಸಂದೇಶಗಳನ್ನು ಎಡಿಟ್ ಮಾಡುವ ಹೊಸ ಆಯ್ಕೆಯನ್ನು ಪಡೆಯಲಿದ್ದಾರೆ ಎಂಬ ಸಿಹಿಸುದ್ದಿ ದೊರೆತಿದೆ. ಪ್ರಸ್ತುತ WhatsApp ಅಪ್ಲಿಕೇಷನ್ನಲ್ಲಿ ಒಮ್ಮೆ ಕಳುಹಿಸಿದ ಸಂದೇಶವನ್ನು ಅಳಿಸಬಹುದು. ಆದರೆ, ಅವುಗಳನ್ನು ಎಡಿಟ್ ಮಾಡಲು ಸಾಧ್ಯವಿಲ್ಲ. ಆದರೆ ಮುಂಬರುವ ವೈಶಿಷ್ಟ್ಯವು ಈಗಾಗಲೇ ಕಳುಹಿಸಿದ WhatsApp ಸಂದೇಶಗಳನ್ನು ಎಡಿಟ್ ಮಾಡಲು ಅನುಮತಿಸಲಿದೆ ಎಂದು WhatsApp ಬೀಟಾ ಇನ್ಫೋ ಟ್ರ್ಯಾಕರ್ Wabetainfo ವರದಿ ಮಾಡಿದೆ. ಇದೀಗ ಈ ವೈಶಿಷ್ಟ್ಯವು WhatsApp ಬೀಟಾದದಲ್ಲಿ ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿದೆ ಎಂದು ತಿಳಿದುಬಂದಿದೆ.
WhatsApp ನಲ್ಲಿ ಪ್ರಸ್ತುತ ಅಭಿವೃದ್ಧಿಪಡಿಸಲಾಗುತ್ತಿರುವ ಎಡಿಟ್ ಮಾಡಬಹುದಾದ ವೈಶಿಷ್ಟ್ಯದ ಸ್ಕ್ರೀನ್ಶಾಟ್ ಅನ್ನು Wabetainfo ಹಂಚಿಕೊಂಡಿದೆ. ಸ್ಕ್ರೀನ್ಶಾಟ್ ನಲ್ಲಿ ಕಾಣಿಸುತ್ತಿರುವಂತೆ, WhatsApp ಬಳಕೆದಾರರು ಕಳುಹಿಸಿದ ಸಂದೇಶವನ್ನು ಆರಿಸಿದಾಗ ಅದನ್ನು ಎಡಿಟ್ ಮಾಡುವ ಆಯ್ಕೆಯನ್ನು ತೋರಿಸುತ್ತದೆ. ಸಂದೇಶಗಳನ್ನು ನಕಲಿಸಲು ಮತ್ತು ಫಾರ್ವರ್ಡ್ ಮಾಡುವ ಆಯ್ಕೆಗಳ ಜೊತೆಗೆ ಬಳಕೆದಾರರು ಎಡಿಟ್ ಆಯ್ಕೆಯನ್ನು ಸಹ ಪಡೆಯುತ್ತಾರೆ. ಎಡಿಟ್ ಬಟನ್ ಅನ್ನು ಆಯ್ಕೆ ಮಾಡಿದ ನಂತರ, ಅದನ್ನು ಕಳುಹಿಸಿದ ನಂತರವೂ ಸಹ ಸಂದೇಶದಲ್ಲಿ ಯಾವುದೇ ಕಾಗುಣಿತ ದೋಷವನ್ನು ಸರಿಪಡಿಸಬಹುದು. ಇದರಿಂದ ತಪ್ಪಾದ ಸಂದೇಶವನ್ನು ಕಳಿಹಿಸಿದ್ದರೂ ಸಹ ಅದನ್ನು ಡಿಲೀಟ್ ಮಾಡದಂತೆಯೇ ಎಡಿಟ್ ಮಾಡುವ ಮೂಲಕ ಸರಿಪಡಿಸಬಹುದಾದ ಆಯ್ಕೆ ಬಳಕೆದಾರರಿಗೆ ಸಿಗುತ್ತಿದೆ.
![]()
ಪ್ರಸ್ತುತ ಈ ಅಪ್ಡೇಟ್ ಅನ್ನು ಆಂಡ್ರಾಯ್ಡ್ ನಲ್ಲಿ ಪರೀಕ್ಷಿಸಲಾಗುತ್ತಿದೆ ಹಾಗೂ iOS ಮತ್ತು ಡೆಸ್ಕ್ಟಾಪ್ಗಾಗಿ ಈ ವೈಶಿಷ್ಟ್ಯವನ್ನು ತರಲು WhatsApp ಕಾರ್ಯನಿರ್ವಹಿಸುತ್ತಿದೆ ಎಂದು Wabetainfo ವರದಿಯು ಹೇಳಿದೆ. ಆದರೆ, ಈ ವೈಶಿಷ್ಟ್ಯವು ಈಗಿನ್ನೂ ಅಭಿವೃದ್ಧಿಯ ಹಂತದಲ್ಲಿರುವುದರಿಂದ ಸಾಮಾನ್ಯ ಬಳಕೆದಾರರಿಗೆ ಸ್ಥಿರವಾದ ನವೀಕರಣಕ್ಕಾಗಿ ಯಾವಾಗ ಸಿದ್ಧವಾಗಲಿದೆ ಎಂಬುದನ್ನು ಖಚಿತಪಡಿಸಲಾಗುವುದಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ. WhatsAppನಲ್ಲಿ ಎಡಿಟ್ ಆಯ್ಕೆ ಸಿಗುತ್ತಿರುವ ಇದೇ ವೇಳೆಯಲ್ಲಿ ಜನಪ್ರಿಯ ಮೈಕ್ರೋ-ಬ್ಲಾಗಿಂಗ್ ವೆಬ್ಸೈಟ್ Twitter ನಲ್ಲಿಯೂ ಸಹ ಎಡಿಟ್ ಬಟನ್ಗಾಗಿ ಕುತೂಹಲದಿಂದ ಕಾಯಲಾಗುತ್ತಿದೆ. ವರದಿಗಳ ಪ್ರಕಾರ, ಈ ವೈಶಿಷ್ಟ್ಯವನ್ನು ಮೊದಲು ಟ್ವಿಟರ್ ಬ್ಲೂ ಬಳಕೆದಾರರಿಗೆ ಮೊದಲು ಜಾರಿಗೆ ತರಲಾಗುತ್ತದೆ ಎನ್ನಲಾಗಿದೆ.
Whatsapp May Soon Let You Edit Messages Even After Sending Them.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm