ಬ್ರೇಕಿಂಗ್ ನ್ಯೂಸ್
08-07-22 08:06 pm Source: Vijayakarnataka ಡಿಜಿಟಲ್ ಟೆಕ್
ವಿಶ್ವದಾದ್ಯಂತ ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರನ್ನು ಸುರಕ್ಷಿತವಾಗಿಡಲು ಗೂಗಲ್ ಸಂಸ್ಥೆಯು ತೆಗೆದುಕೊಳ್ಳುವ ಪರಿಣಾಮಕಾರಿ ಕ್ರಮಗಳು ಸಹ ಸೈಬರ್ ಕ್ರಿಮಿಗಳನ್ನು ಹೊಸಕಿಹಾಕಲು ಸಾಧ್ಯವಾಗುತ್ತಿಲ್ಲ. ಸಾಮಾನ್ಯ ಡೆವಲಪರ್ಗಳ ರೂಪದಲ್ಲಿ ಗೂಗಲ್ ಪ್ಲೇ ಸ್ಟೋರ್ ಮೂಲಕ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳನ್ನು ತಲುಪುತ್ತಿರುವ ಹಾಗೂ ಬ್ಯಾಂಕ್ OTP ಸೇರಿದಂತೆ ಹಲವು ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿರುವ ಹೊಸ ನಾಲ್ಕು ಕಳ್ಳ ಅಪ್ಲಿಕೇಷನ್ಗಳನ್ನು ಗೂಗಲ್ ಪ್ಲೇ ಸ್ಟೋರ್ನಲ್ಲಿ ಗುರುತಿಸಲಾಗಿದ್ದು, ಈಗಾಗಲೇ 100,000+ ಬಳಕೆದಾರರಿಂದ ಡೌನ್ಲೋಡ್ ಮಾಡಲಾಗಿರುವ ನಾಲ್ಕು ಹೊಸ ದುರುದ್ದೇಶಪೂರಿತ ಅಪ್ಲಿಕೇಶನ್ಗಳನ್ನು ಈಗಲೇ ಡಿಲೀಟ್ ಮಾಡಿ ಎಂದು ಸೈಬರ್ ತಜ್ಞರು ಎಚ್ಚರಿಸಿದ್ದಾರೆ.
ಹೌದು, ಗೂಗಲ್ ಪ್ಲೇ ಸ್ಟೋರ್ನಲ್ಲಿ ನಾಲ್ಕು ಹೊಸ ದುರುದ್ದೇಶಪೂರಿತ ಅಪ್ಲಿಕೇಶನ್ಗಳನ್ನು ಕಂಡುಹಿಡಿಯಲಾಗಿದ್ದು, ಈ ಅಪ್ಲಿಕೇಶನ್ಗಳಲ್ಲಿ ಜೋಕರ್ ಎಂಬ ಮಾಲ್ವೇರ್ ಪತ್ತೆಯಾಗಿದೆ. ಜೋಕರ್ ಮಾಲ್ವೇರ್ ಸಹಾಯದಿಂದ ಬಳಕೆದಾರರ ಓಟಿಪಿ ಸೇರಿದಂತೆ ಹಲವು ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿರುವುದನ್ನು ಸೈಬರ್ ತಜ್ಷರು ಕಂಡುಹಿಡಿದಿದ್ದಾರೆ. ಇದಾದ ನಂತರ ಈ ಕಳ್ಳ ಅಪ್ಲಿಕೇಶನ್ಗಳ ಕುರಿತು Google ಸಂಸ್ಥೆಯು ಸಹ ತಿಳಿದು, ಈ ಎಲ್ಲಾ ನಾಲ್ಕು ಅಪ್ಲಿಕೇಷನ್ಗಳನ್ನು ತನ್ನ ಗೂಗಲ್ ಪ್ಲೇ ಸ್ಟೋರ್ನಿಂದ ತೆಗೆದುಹಾಕಿದೆ. ಆದರೆ, ಈಗಾಗಲೇ ಈ ನಾಲ್ಕು ಅಪ್ಲಿಕೇಷನ್ಗಳನ್ನು ಡೌನ್ಲೋಡ್ ಮಾಡಿ ಬಳಸುತ್ತಿರುವ ಗ್ರಾಹಕರು ಈ ಮಾಲ್ವೇರ್-ಸೋಂಕಿತ ಅಪ್ಲಿಕೇಶನ್ಗಳನ್ನು ಈಗಲೇ ಡಿಲೀಟ್ ಮಾಡಿ ಸುರಕ್ಷಿತರಾಗಿರಲು ಕೇಳಿಕೊಳ್ಳಲಾಗಿದೆ.

ಜೋಕರ್ ಮಾಲ್ವೇರ್ ಪತ್ತೆಯಾದ ನಾಲ್ಕು ಅಪ್ಲಿಕೇಶನ್ಗಳು ಇವು.
ಕೆಲವೊಂದು ದುರುದ್ದೇಶಪೂರಿತ ಅಪ್ಲಿಕೇಶನ್ಗಳನ್ನು Play Store ಸ್ಕ್ರೀನಿಂಗ್ ಪ್ರಕ್ರಿಯೆಯಲ್ಲಿ ಪತ್ತೆಹಚ್ಚಲು ಕಷ್ಟವಾಗುತ್ತದೆ. Google ನಿಂದ ಮಾಡಿದ ಅಪ್ಲಿಕೇಶನ್ಗಳ ಸಾಮಾನ್ಯ ಭದ್ರತಾ ಸ್ಕ್ರೀನಿಂಗ್ ಅನ್ನು ಬೈಪಾಸ್ ಮಾಡಲು ಹ್ಯಾಕರ್ಗಳು ಉತ್ತಮ ಮಾರ್ಗಗಳನ್ನು ಕಂಡುಕೊಂಡಿದ್ದಾರೆ ಎಂದು ಹೇಳಲಾಗಿದೆ. ಹಾಗಾಗಿ, ನಿಮ್ಮ Android ಸ್ಮಾರ್ಟ್ಫೋನ್ನಲ್ಲಿ ನೀವು ಈ ಮೇಲಿನ ನಾಲ್ಕು ಅಪ್ಲಿಕೇಶನ್ಗಳಲ್ಲಿ ಯಾವುದನ್ನಾದರೂ ಡೌನ್ಲೋಡ್ ಮಾಡಿದ್ದರೆ, ಕೂಡಲೇ ಡಿಲೀಟ್ ಮಾಡಿಬಿಡಿ. ಗೂಗಲ್ Play Store ನಿಂದಲೂ ಅಪರಿಚಿತ ಡೆವಲಪರ್ಗಳು ಹೋಸ್ಟ್ ಮಾಡಿರುವ ಅಪ್ಲಿಕೇಶನ್ಗಳನ್ನು ಡೌನ್ಲೋಡ್ ಮಾಡುವ ಮುನ್ನ ಎಚ್ಚರಿಕೆಯನ್ನು ವಹಿಸಿ. ವಿಶ್ವಾಸಾರ್ಹ ಮತ್ತು ಸುರಕ್ಷಿತ ಎಂದು ನಿಮಗೆ ತಿಳಿದಿರುವ ಕಂಪನಿಗಳು ಅಥವಾ ಸಾಕಷ್ಟು ಜನರು ರಿವ್ಯೂ ಮಾಡಿರುವ ಉತ್ತಮ ಅಪ್ಲಿಕೇಷನ್ಗಳನ್ನು ಮಾತ್ರ ಡೌನ್ಲೋಡ್ ಮಾಡಿ.
Four New Malicious Apps Have Been Discovered On The Google Play Store.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm