ಬ್ರೇಕಿಂಗ್ ನ್ಯೂಸ್
12-01-23 07:52 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಇದೇ ಫೆಬ್ರವರಿ 1, 2023 ರಂದು ಆಯೋಜಿಸಿರುವ 'Galaxy Unpacked' ಈವೆಂಟ್ನಲ್ಲಿ Samsung ತನ್ನ ಬಹುನಿರೀಕ್ಷಿತ Galaxy S23 ಸರಣಿ ಸ್ಮಾರ್ಟ್ಫೋನ್ಗಳನ್ನು ಬಿಡುಗಡೆ ಮಾಡುವ ಬಗ್ಗೆ ಈಗಾಗಲೇ ಬಹಿರಂಗಪಡಿಸಿದೆ. ಇದೀಗ ದೊರೆತಿರುವ ಮತ್ತೊಂದು ಸಿಹಿಸುದ್ದಿ ಏನೆಂದರೆ, ಗ್ರಾಹಕರು ಇಂದಿನಿಂದಲೇ Samsung Galaxy S23 ಸರಣಿ ಸ್ಮಾರ್ಟ್ಫೋನ್ಗಳನ್ನು ಕೊಡುಗೆಗಳೊಂದಿಗೆ ಪ್ರೀ-ಬುಕ್ ಮಾಡಲು ಅನುಮತಿಸಲಾಗಿದೆ. ಹೌದು, ದೇಶದಲ್ಲಿ Galaxy S23 ಸರಣಿಯಲ್ಲಿ ಬಿಡುಗಡೆಯಾಗಲಿರುವ Galaxy S23, Galaxy S23+, ಮತ್ತು Galaxy S23 Ultra ಮೂರು ಸ್ಮಾರ್ಟ್ಫೋನ್ಗಳನ್ನು ಪ್ರೀ-ಬುಕ್ ಮಾಡಬಹುದಾಗಿದ್ದು, ಈ ಸ್ಮಾರ್ಟ್ಫೋನ್ಗಳನ್ನು ಮೊದಲೇ ಬುಕ್ ಗ್ರಾಹಕರಿಗೆ 5000 ಮೌಲ್ಯದ ಪ್ರಯೋಜನಗಳು ದೊರೆಯಲಿವೆ ಎಂದು Samsung ಕಂಪೆನಿ ತಿಳಿಸಿದೆ.
ಭಾರತದಲ್ಲಿ Samsung Galaxy S23 ಸರಣಿ ಫೋನ್ಗಳ ಪ್ರೀ-ಬುಕಿಂಗ್ ಕೊಡುಗೆಗಳು
ಫೆಬ್ರವರಿ 1, 2023 ರಂದು ದೇಶದಲ್ಲಿ ಬಿಡುಗಡೆಯಾಗಲಿರುವ Samsung Galaxy S23 ಸರಣಿ ಸ್ಮಾರ್ಟ್ಪೋನ್ಗಳನ್ನು ಮೊದಲೇ ಪಡೆಯಲು ಇಚ್ಚಿಸುವ ಗ್ರಾಹಕರು Samsung ಕಂಪೆನಿಯ ಅಧಿಕೃತ ವೆಬ್ಸೈಟ್ ಮೂಲಕ ಯಾವುದೇ Galaxy S23, Galaxy S23+, ಮತ್ತು Galaxy S23 Ultra ಸಾಧನವನ್ನು ಪ್ರೀ-ಬುಕ್ ಮಾಡಬಹುದು. ಇದಕ್ಕಾಗಿ, Samsung ಕಂಪೆನಿ 1999 ರೂ.ಗೆ ಪ್ರೀ ಬುಕ್ಕಿಂಗ್ ಬೆಲೆಯನ್ನು ನಿಗಧಿಪಡಿಸಿದೆ. ಹೀಗೆ 1999 ರೂ. ಪಾವತಿಸಿ ಪ್ರೀ-ಬುಕ್ ಮಾಡುವ ಗ್ರಾಹಕರಿಗೆ 5000 ಮೌಲ್ಯದ ಪ್ರಯೋಜನಗಳನ್ನು ಒದಗಿಸುವುದಾಗಿ Samsung ಕಂಪೆನಿ ಹೇಳಿಕೊಂಡಿದೆ. ಇಷ್ಟೇ ಅಲ್ಲದೇ, Galaxy S23 ಸರಣಿ ಸ್ಮಾರ್ಟ್ಫೋನ್ಗಳನ್ನು ಪ್ರೀ-ಬುಕ್ ಮಾಡುವ ಗ್ರಾಹಕರಿಗೆ ಆರಂಭಿಕ ವಿತರಣೆ, ವಿಶೇಷ ಬಣ್ಣದ ಆಯ್ಕೆಗಳು ಮತ್ತು 2000 ರೂ. ವೆಲ್ಕಮ್ ಕೂಪನ್ ಸಹ ದೊರೆಯಲಿವೆ.

Samsung ಆಯೋಜಿಸಿರುವ Galaxy Unpacked 2023 ಕಾರ್ಯಕ್ರಮವು ದೇಶದಲ್ಲಿ ಇದೇ ಫೆಬ್ರವರಿ 1 ರಂದು ರಾತ್ರಿ 11: 30 ಕ್ಕೆದ ಪ್ರಾರಂಭವಾಗಲಿದೆ ಮತ್ತು ಕಾರ್ಯಕ್ರಮವನ್ನು ಕಂಪನಿಯ ಅಧಿಕೃತ ಚಾನೆಲ್ಗಳ ಮೂಲಕ ಲೈವ್ಸ್ಟ್ರೀಮ್ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಇತ್ತೀಚಿನ Snapdragon 8 Gen 2 ಪ್ರೊಸೆಸರ್ ಹೊತ್ತು Galaxy S23, Galaxy S23+, ಮತ್ತು Galaxy S23 Ultra ಮೂರು ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗಲಿವೆ ಎಂದು ಹೇಳಲಾಗಿದೆ. ಇತ್ತೀಚಿಗೆ ಸೋರಿಕೆಯಾದ ಹಲವು ಮಾಹಿತಿಗಳ ಪ್ರಕಾರ, ದೇಶದಲ್ಲಿ Galaxy S23 ಮತ್ತು Galaxy S23+ ಸ್ಮಾರ್ಟ್ಫೋನ್ಗಳು ಟ್ರಿಪಲ್ ಕ್ಯಾಮೆರಾ ಸೆಟಪ್ನೊಂದಿಗೆ ಮತ್ತು Galaxy S23 Ultra 100 ಎಕ್ಸ್ ಜೂಮ್ ಸಾಮರ್ಥ್ಯದ 200-MP ಕ್ವಾಡ್ ಕ್ಯಾಮೆರಾ ಸಟಪ್ನೊಂದಿಗೆ ಬರಲಿದೆ ಎನ್ನಲಾಗಿದೆ.
Samsung Galaxy S23 Series Pre-Reservation Orders Open In India.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm