ಬ್ರೇಕಿಂಗ್ ನ್ಯೂಸ್
04-12-20 01:22 pm Source: GIZBOT ಡಿಜಿಟಲ್ ಟೆಕ್
ಆಗ್ಮೆಂಟೆಡ್-ರಿಯಾಲಿಟಿ ಮೊಬೈಲ್ ಗೇಮಿಂಗ್ ಸಂಸ್ಥೆ ಕ್ರಿಕಿ, 'ಯಾತ್ರಾ' ಎಂಬ ಹೊಸ ಆಗ್ಮೆಂಟೆಡ್ ರಿಯಾಲಿಟಿ ಗೇಮ್ ಅನ್ನು ಜಿಯೋ ಸಹಯೋಗದೊಡನೆ ಭಾರತದಲ್ಲಿ ಪರಿಚಯಿಸಿದೆ. ಸೀರೀಸ್ ಎ ಫಂಡಿಂಗ್ ಸುತ್ತನ್ನೂ ಮುನ್ನಡೆಸಿದ ಜಿಯೋ, ಕ್ರಿಕಿ ಪಡೆದ ಒಟ್ಟು ಹೂಡಿಕೆಯನ್ನು 22 ಮಿಲಿಯನ್ ಡಾಲರುಗಳಿಗೆ ಕೊಂಡೊಯ್ದಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕ್ರಿಕಿ ಸಂಸ್ಥಾಪಕರಾದ ಜಾಹ್ನವಿ ಮತ್ತು ಕೇತಕಿ ಶ್ರೀರಾಮ್, "ತಲ್ಲೀನಗೊಳಿಸುವ ರೀತಿಯಲ್ಲಿ ಸ್ಫೂರ್ತಿ ಮತ್ತು ವಾಸ್ತವವನ್ನು ಒಂದುಗೂಡಿಸುವುದು ಕ್ರಿಕಿಯೊಂದಿಗಿನ ನಮ್ಮ ದೃಷ್ಟಿಕೋನವಾಗಿದೆ. ಆಗ್ಮೆಂಟೆಡ್ ರಿಯಾಲಿಟಿಯೊಂದಿಗೆ, ನಿಮ್ಮ ಮೊಬೈಲ್ ಫೋನ್ನ ಕಿಟಕಿಯ ಮೂಲಕ ಫ್ಯಾಂಟಸಿ ಪ್ರಪಂಚಗಳನ್ನು ನೇರವಾಗಿ ನಿಮ್ಮ ಮನೆಗೆ ತರಲು ನಮಗೆ ಸಾಧ್ಯವಾಗುತ್ತದೆ." ಎಂದು ಹೇಳಿದ್ದಾರೆ.

ಕೇವಲ ತಮ್ಮ ಮೊಬೈಲ್ ಫೋನ್ ಕ್ಯಾಮೆರಾದೊಂದಿಗೆ, ಆಟಗಾರರು ಯಾತ್ರಾದ ಆಕ್ಷನ್-ಸಾಹಸಗಾಥೆಯನ್ನು ಪ್ರವೇಶಿಸಬಹುದು ಮತ್ತು ಮಾನ್ಸ್ಟರ್ಗಳ ಸೈನ್ಯವನ್ನು ಸೋಲಿಸುವ ಅನ್ವೇಷಣೆಗೆ ಸೇರಬಹುದು. ಬಿಲ್ಲು ಮತ್ತು ಬಾಣ, ಚಕ್ರ, ಮಿಂಚು ಮತ್ತು ಫೈರ್ ಬೋಲ್ಟ್ಗಳಂತಹ ಶಸ್ತ್ರಾಸ್ತ್ರಗಳನ್ನು ಬಳಸಿ, ಆಟಗಾರರು ವಿವಿಧ ಹಂತದ ಯುದ್ಧ ಮತ್ತು ಪಜಲ್ ಗೇಮ್ಗಳ ಮೂಲಕ ಹೋರಾಡಬಹುದು.
ಬಳಕೆದಾರರು ತಮ್ಮ ಆಟವನ್ನು ಪೂರ್ಣಗೊಳಿಸಿದ ನಂತರ, ವೈಯಕ್ತಿಕಗೊಳಿಸಿದ ವೀಡಿಯೊವನ್ನು ತಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಬಹುದು. ಇತರ ಬಳಕೆದಾರರು ಪೋಸ್ಟ್ ಮಾಡಿದ ಆಟದ ವೀಡಿಯೊಗಳನ್ನು ನೋಡಲು ವೀಡಿಯೊ ಫೀಡ್ಗಳು ಮತ್ತು ಡಿಜಿಟಲ್ ತರಬೇತಿ ಮೈದಾನ ಕೂಡ ಲಭ್ಯವಿದ್ದು, ಮತ್ತೆ ಆಡುವ ಮೊದಲು ಆಟಗಾರರು ಅಲ್ಲಿ ತಮ್ಮ ಬಿಲ್ಲು - ಬಾಣದ ಕೌಶಲವನ್ನು ಅಭ್ಯಾಸ ಮಾಡಬಹುದು. ಜಿಯೋ ಬಳಕೆದಾರರಿಗೆ ಈ ಕೆಳಗಿನ ವಿಶೇಷ ಸೌಲಭ್ಯಗಳು ದೊರಕುತ್ತಿವೆ:

3ಡಿ ಅವತಾರ್ ವೈಶಿಷ್ಟ್ಯ
ಹೆಚ್ಚುವರಿ ಶಸ್ತ್ರಾಸ್ತ್ರಗಳು ಮತ್ತು ಪವರ್ಗಳನ್ನು ಅನ್ಲಾಕ್ ಮಾಡಲು ಗೇಮ್ಪ್ಲೇ ಟೋಕನ್ಗಳು
ಗೇಮ್ ಲೆವೆಲ್ಗಳು
ಈ ಸಂದರ್ಭದಲ್ಲಿ ಮಾತನಾಡಿದ ಜಿಯೋ ನಿರ್ದೇಶಕ ಆಕಾಶ್ ಅಂಬಾನಿ, "ಆಗ್ಮೆಂಟೆಡ್ ರಿಯಾಲಿಟಿಯನ್ನು ಅಂಗೀಕರಿಸಲು ಕ್ರಿಕಿ ಒಂದು ಇಡೀ ಪೀಳಿಗೆಯ ಭಾರತೀಯರನ್ನು ಪ್ರೇರೇಪಿಸಲಿದೆ. ಪ್ರಪಂಚದೆಲ್ಲೆಡೆಯ ಅತ್ಯುತ್ತಮ ಅನುಭವಗಳನ್ನು ಭಾರತಕ್ಕೆ ತರುವುದು ನಮ್ಮ ದೃಷ್ಟಿಕೋನವಾಗಿದೆ ಮತ್ತು ಯಾತ್ರಾದ ಪರಿಚಯವು ಆ ದಿಕ್ಕಿನಲ್ಲಿ ಒಂದು ಹೆಜ್ಜೆಯಾಗಿದೆ.

ಆಗ್ಮೆಂಟೆಡ್ ರಿಯಾಲಿಟಿ ಗೇಮಿಂಗ್ ಬಳಕೆದಾರರನ್ನು ತನ್ನದೇ ಆದ ಜಗತ್ತಿನೊಳಕ್ಕೆ ಕರೆದೊಯ್ಯುತ್ತದೆ, ಮತ್ತು ಯಾತ್ರಾ ಮೂಲಕ ಆಗ್ಮೆಂಟೆಡ್ ರಿಯಾಲಿಟಿಯನ್ನು (AR) ಅನುಭವಿಸಲು ನಾವು ಜಿಯೋ ಮತ್ತು ಬೇರೆಲ್ಲ ಸೇವೆಗಳ ಪ್ರತಿಯೊಬ್ಬ ಬಳಕೆದಾರರನ್ನೂ ಆಹ್ವಾನಿಸುತ್ತೇವೆ." ಎಂದು ಹೇಳಿದ್ದಾರೆ. ಕ್ರಿಕಿ ಈಗ ಐಒಎಸ್ ಆಪ್ ಸ್ಟೋರ್ ಮತ್ತು ಗೂಗಲ್ ಪ್ಲೇ ಸ್ಟೋರ್ಗಳಲ್ಲಿ ಉಚಿತವಾಗಿ ಲಭ್ಯವಿದೆ.
This News Article is a Copy of GIZBOT
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm