ಬ್ರೇಕಿಂಗ್ ನ್ಯೂಸ್
17-12-20 03:52 pm Source: GIZBOT ಡಿಜಿಟಲ್ ಟೆಕ್
ಪ್ರಸ್ತುತ ದೇಶದಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಹೆಚ್ಚು ಮುನ್ನಲೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಹಲವು UPI ಆಧಾರಿತ ಪೇಮೆಂಟ್ ಆಪ್ಗಳು ಬಳಕೆಯಲ್ಲಿವೆ. ಈ ಸಾಲಿಗಿಗ ಭಾರತೀಯ ಅಂಚೆ ಇಲಾಖೆಯೂ ಸೇರ್ಪಡೆ ಆಗಿದ್ದು, ಅಂಚೆ ಇಲಾಖೆ ಹೊಸದಾಗಿ ''ಡಾಕ್ಪೇ'' ಆಪ್ ಅನ್ನು ಪರಿಚಯಿಸಿದೆ. ಈ ಸೇವೆಯಿಂದ ಹಣವನ್ನು ಕಳುಹಿಸುವುದು, ಕ್ಯೂಆರ್ ಕೋಡ್ಗಳನ್ನು ಸ್ಕ್ಯಾನ್ ಮಾಡುವುದು ಮತ್ತು ವ್ಯಾಪಾರಿಗಳಿಗೆ ಡಿಜಿಟಲ್ ರೂಪದಲ್ಲಿ ಹಣ ಪಾವತಿಗಳನ್ನು ಮಾಡುವಂತಹ ಸೇವೆಗಳನ್ನು ಸುಗಮಗೊಳಿಸಲು ಸಾಧ್ಯವಾಗುತ್ತದೆ.
ಹೌದು, ದೇಶದಲ್ಲಿ ಡಿಜಿಟಲ್ ಪೇಮೆಂಟ್ ಉತ್ತೇಜಿಸುವ ನಿಟ್ಟಿನಲ್ಲಿ ಅಂಚೆ ಇಲಾಖೆ ಮತ್ತು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಈ ನೂತನ ಆಪ್ ಅನಾವರಣ ಮಾಡಿವೆ. ಇನ್ನು ಈ ಆಪ್ನಲ್ಲಿ ಬಳಕೆದಾರರಿಗೆ ಹಣ ವರ್ಗಾವಣೆ, QR ಕೋಡ್ ಸ್ಕ್ಯಾನ್, ಬಿಲ್ ಪಾವತಿ, ಹಣ ಪಾವತಿ, ವರ್ಚುವಲ್ ಡೆಬಿಟ್ ಕಾರ್ಡ್, UPI ಪೇಮೆಂಟ್, ಬ್ಯಾಂಕ್ ಸೇವೆಗಳಂತಹ ಸೇವೆಗಳು ಲಭ್ಯವಾಗುತ್ತವೆ.

ಆಂಡ್ರಾಯ್ಡ್ನಲ್ಲಿ ಡಾಕ್ಪೇ ಅಪ್ಲಿಕೇಶನ್ ಡೌನ್ಲೋಡ್ ಮಾಡುವುದು ಹೇಗೆ?
* ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಗೂಗಲ್ ಪ್ಲೇ ಸ್ಟೋರ್ ತೆರೆಯಿರಿ.
* ಹುಡುಕಾಟ ಪೆಟ್ಟಿಗೆಯನ್ನು ಬಳಸಿಕೊಂಡು 'ಡಾಕ್ಪೇ'-'DakPay' ಕೀ ಸರ್ಚ್ ಹುಡುಕಿ.
* DakPay by IPPB ಹೆಸರಿನ ಅಪ್ಲಿಕೇಶನ್ನಲ್ಲಿ ಟ್ಯಾಪ್ ಮಾಡಿ ಮತ್ತು ಇನ್ಸ್ಟಾಲ್ ಬಟನ್ ಒತ್ತಿರಿ.
* ಆಪ್ ಇನ್ಸ್ಟಾಲ್ ಆದ ನಂತರ, ಅಪ್ಲಿಕೇಶನ್ ತೆರೆಯಿರಿ. * ಆನಂತರ NEXT ಐಕಾನ್ ಮೇಲೆ ಟ್ಯಾಪ್ ಮಾಡಿ.
* ನೀವು ಡಾಕ್ಪೇ ಜೊತೆ ಲಿಂಕ್ ಮಾಡಲು ಬಯಸುವ ಮೊಬೈಲ್ ಸಂಖ್ಯೆಯನ್ನು ಆಯ್ಕೆ ಮಾಡಿ/ನಮೂದಿಸಿ.
* ಹೆಸರು, ಇಮೇಲ್ ಐಡಿ, ಹುಟ್ಟಿದ ದಿನಾಂಕ ಮತ್ತು ಇತರೆ ವಿವರಗಳನ್ನು ನಮೂದಿಸುವ ಮೂಲಕ ಪ್ರೊಫೈಲ್ ರಚಿಸಿ.

ಆಂಡ್ರಾಯ್ಡ್ನಲ್ಲಿ ಲಭ್ಯ
ಅಂಚೆ ಇಲಾಖೆಯ ನೂತನ ಡಾಕ್ಪೇ ಪೇಮೆಂಟ್ ಅಪ್ಲಿಕೇಶನ್ ಸದ್ಯ ಗೂಗಲ್ ಪ್ಲೇ ಸ್ಟೋರ್ ಮೂಲಕ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಅಪ್ಲಿಕೇಶನ್ ಲಭ್ಯವಿದೆ. ಇನ್ನು ಡಾಕ್ಪೇ ಅಪ್ಲಿಕೇಶನ್ ಶೀಘ್ರದಲ್ಲೇ ಆಪಲ್ ಆಪ್ ಸ್ಟೋರ್ ಮೂಲಕ ಐಓಎಸ್ ಬಳಕೆದಾರರಿಗೂ ಲಭ್ಯವಾಗಲಿದ ಎನ್ನಲಾಗಿದೆ.
This News Article is a Copy of GIZBOT
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
15-12-25 08:12 pm
HK News Desk
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
15-12-25 05:40 pm
Mangalore Correspondent
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm