ಬ್ರೇಕಿಂಗ್ ನ್ಯೂಸ್
21-12-20 03:08 pm Source: GIZBOT Mutthuraju H M ಡಿಜಿಟಲ್ ಟೆಕ್
ಬೆಂಗಳೂರು, ಡಿ.21: ಇಂದು ಖಗೋಳದಲ್ಲಿ ವಿಸ್ಮಯವೊಂದು ಜರುಗಲಿದೆ. ಸೌರವ್ಯೂಹದ ಎರಡ್ಡು ದೊಡ್ಡ ಗ್ರಹಗಳ ಸಮಾಗಮಕ್ಕೆ ಈ ದಿನ ಸಾಕ್ಷಿಯಾಗಲಿದೆ. ಎರಡು ದೊಡ್ಡ ಗ್ರಹಗಳು ಹತ್ತಿರ ಹತ್ತಿರ ಸಮೀಪಿಸುತ್ತಿದ್ದಾರೆ ಎನ್ನುವ ಸುದ್ದಿ ಇಡೀ ಜಗತ್ತನ್ನೇ ಕುತೂಹಲಕ್ಕೆ ದೂಡಿದೆ. ಇದೇ ಕಾರಣಕ್ಕೆ ಸರ್ಚ್ ಇಂಜಿನ್ ದೈತ್ಯ ಕೂಡ ಈ ದಿನ ತನ್ನ ಮುಖಪುಟದ ಡೂಡಲ್ ನಲ್ಲಿ ಉತ್ತರ ಗೋಳಾರ್ಧದಲ್ಲಿ ಚಳಿಗಾಲದ ಅಯನ ಸಂಕ್ರಾಂತಿಯನ್ನು ಪ್ರದರ್ಶಿಸಿದೆ.

ಹೌದು, ಸೌರವ್ಯೂಹದ ದೊಡ್ಡ ಗ್ರಹಗಳಾದ ಗುರು ಮತ್ತು ಶನಿ ಸಮೀಪಕ್ಕೆ ಬರಲಿದ್ದಾರೆ. ಇದು 2020 ರ ಮತ್ತೊಂದು ಅಚ್ಚರಿ ಎಂದೇ ಹೇಳಬಹುದಾಗಿದೆ. ಡಿಸೆಂಬರ್ 21 ಅಂದರೆ ಈ ದಿನ ಸುದೀರ್ಘ ರಾತ್ರಿಯಲ್ಲಿ, "ದೊಡ್ಡ ಸಂಯೋಗ" ಎಂದು ಕರೆಯಲ್ಪಡುವ ನಂಬಲಾಗದ ಖಗೋಳ ಚಮತ್ಕಾರ ನಡೆಯಲಿದೆ. ರಾತ್ರಿಯ ಆಕಾಶದಲ್ಲಿ ನಮ್ಮ ಸೌರವ್ಯೂಹದ ಗ್ರಹಗಳಾದ ಶನಿ ಮತ್ತು ಗುರುಗಳ ದೃಶ್ಯ ಅತಿಕ್ರಮಣವೇ ದೊಡ್ಡ ಸಂಯೋಗವಾಗಿದೆ.
ಮೂಲತಃ, ಶನಿ ಮತ್ತು ಗುರುಗಳು ಪರಸ್ಪರ 0.1 ಡಿಗ್ರಿ ಒಳಗೆ ಇರುತ್ತವೆ. ಶನಿ ಮತ್ತು ಗುರು ಗ್ರಹಗಳು ಪ್ರತಿ 20 ವರ್ಷಗಳಿಗೆ ಒಮ್ಮೆ ಹೀಗೆ ಪರಸ್ಪರ ಹಾದುಹೋಗಲಿವೆ. ಆದರೆ, ಈ ಬಾರಿ ಈ ಎರಡೂ ಗ್ರಹಗಳಿಗೆ ಅತ್ಯಂತ ಹತ್ತಿರದಲ್ಲಿ ಭೂಮಿಯೂ ಹಾದುಹೋಗಲಿದೆ. ಸದ್ಯ ಗುರು ಮತ್ತು ಶನಿಗ್ರಹಗಳು 400 ವರ್ಷಗಳ ನಂತರ ಇದೇ ಮೊದಲ ಬಾರಿ ಅತ್ಯಂತ ಸಮೀಪಕ್ಕೆ ಬರಲಿವೆ. ಇದನ್ನು ಖಗೋಳ ವಿಜ್ಞಾನಿಗಳು ‘ಮಹಾ ಸಂಯೋಗ' ಎಂದು ಹೆಸರಿಸಲಾಗಿದೆ. ಇಂತಹ ವಿದ್ಯಮಾನ ಮತ್ತೇ 60 ವರ್ಷಗಳ ನಂತರ ಸಂಭವಿಸಲಿದೆ ಎಂದು ‘ನಾಸಾ' ಸಂಸ್ಥೆ ಹೇಳಿದೆ.

ಇನ್ನು ಈ ಮಹಾ ಸಂಯೋಗಕ್ಕೆ ಸಾಕ್ಷಿಯಾಗಿ ಡಿಸೆಂಬರ್ 13ರಿಂದಲೇ ಖಗೋಳದ ಎರಡು ದೊಡ್ಡ ಗ್ರಹಗಳಾದ ಗುರು ಮತ್ತು ಶನಿ ಹತ್ತಿ ಹತ್ತಿರ ಬರುತ್ತಿವೆ. ಪ್ರತಿದಿನ ಇವುಗಳ ನಡುವಣ ಅಂತರ ಕಡಿಮೆಯಾಗಲಿದೆ. ಆದರೆ ಇಂದು ಈ ಎರಡು ಗ್ರಹಗಳು ಅತ್ಯಂತ ಸಮೀಪಕ್ಕೆ ಬರಲಿವೆ. ಈ ಮಹಾ ಸಂಯೋಗದಲ್ಲಿ ಪ್ರಾರಂಭದಿಂದ ಶನಿಗ್ರಹವು ಮೇಲ್ಭಾಗದಲ್ಲಿ, ಗುರು ಗ್ರಹವು ಕೆಳಭಾಗದಲ್ಲಿ ಗೋಚರಿಸಲಿದೆ. ಇದನ್ನು ಬರಿ ಗಣ್ಣಿನಿಂದಲೇ ನೋಡಬಹುದಾಗಿದ್ದು, ಆಕಾಶದಲ್ಲಿ ಸುಲಭವಾಗಿ ಗೋಚರಿಸಲಿದೆ. ಆದರೆ ಸೋಮವಾರವಾದ ಇಂದು ರಾತ್ರಿಯಿಂದ ಗುರು ಗ್ರಹವು ಮೇಲ್ಭಾಗದಲ್ಲಿ ಮತ್ತು ಶನಿಗ್ರಹವು ಕೆಳಭಾಗದಲ್ಲಿ ಗೋಚರಿಸಲಿದೆ. ಇನ್ನು ಗೂಗಲ್ ಕೂಡ ತನ್ನ ಡೂಡಲ್ನಲ್ಲಿ, ಶನಿ ಮತ್ತು ಗುರುಗಳ ಮಹಾ ಸಂಯೋಗದ ಗುರುತಾಗಿ ತನ್ನ ಡೂಡಲ್ ಪ್ರದರ್ಶಿಸಿದೆ.
This News Article is a Copy of GIZBOT
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
13-06-26 05:28 pm
HK News Staffer
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
13-06-26 09:17 pm
HK News Staffer
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm