ಬ್ರೇಕಿಂಗ್ ನ್ಯೂಸ್
21-12-20 03:08 pm Source: GIZBOT Mutthuraju H M ಡಿಜಿಟಲ್ ಟೆಕ್
ಬೆಂಗಳೂರು, ಡಿ.21: ಇಂದು ಖಗೋಳದಲ್ಲಿ ವಿಸ್ಮಯವೊಂದು ಜರುಗಲಿದೆ. ಸೌರವ್ಯೂಹದ ಎರಡ್ಡು ದೊಡ್ಡ ಗ್ರಹಗಳ ಸಮಾಗಮಕ್ಕೆ ಈ ದಿನ ಸಾಕ್ಷಿಯಾಗಲಿದೆ. ಎರಡು ದೊಡ್ಡ ಗ್ರಹಗಳು ಹತ್ತಿರ ಹತ್ತಿರ ಸಮೀಪಿಸುತ್ತಿದ್ದಾರೆ ಎನ್ನುವ ಸುದ್ದಿ ಇಡೀ ಜಗತ್ತನ್ನೇ ಕುತೂಹಲಕ್ಕೆ ದೂಡಿದೆ. ಇದೇ ಕಾರಣಕ್ಕೆ ಸರ್ಚ್ ಇಂಜಿನ್ ದೈತ್ಯ ಕೂಡ ಈ ದಿನ ತನ್ನ ಮುಖಪುಟದ ಡೂಡಲ್ ನಲ್ಲಿ ಉತ್ತರ ಗೋಳಾರ್ಧದಲ್ಲಿ ಚಳಿಗಾಲದ ಅಯನ ಸಂಕ್ರಾಂತಿಯನ್ನು ಪ್ರದರ್ಶಿಸಿದೆ.

ಹೌದು, ಸೌರವ್ಯೂಹದ ದೊಡ್ಡ ಗ್ರಹಗಳಾದ ಗುರು ಮತ್ತು ಶನಿ ಸಮೀಪಕ್ಕೆ ಬರಲಿದ್ದಾರೆ. ಇದು 2020 ರ ಮತ್ತೊಂದು ಅಚ್ಚರಿ ಎಂದೇ ಹೇಳಬಹುದಾಗಿದೆ. ಡಿಸೆಂಬರ್ 21 ಅಂದರೆ ಈ ದಿನ ಸುದೀರ್ಘ ರಾತ್ರಿಯಲ್ಲಿ, "ದೊಡ್ಡ ಸಂಯೋಗ" ಎಂದು ಕರೆಯಲ್ಪಡುವ ನಂಬಲಾಗದ ಖಗೋಳ ಚಮತ್ಕಾರ ನಡೆಯಲಿದೆ. ರಾತ್ರಿಯ ಆಕಾಶದಲ್ಲಿ ನಮ್ಮ ಸೌರವ್ಯೂಹದ ಗ್ರಹಗಳಾದ ಶನಿ ಮತ್ತು ಗುರುಗಳ ದೃಶ್ಯ ಅತಿಕ್ರಮಣವೇ ದೊಡ್ಡ ಸಂಯೋಗವಾಗಿದೆ.
ಮೂಲತಃ, ಶನಿ ಮತ್ತು ಗುರುಗಳು ಪರಸ್ಪರ 0.1 ಡಿಗ್ರಿ ಒಳಗೆ ಇರುತ್ತವೆ. ಶನಿ ಮತ್ತು ಗುರು ಗ್ರಹಗಳು ಪ್ರತಿ 20 ವರ್ಷಗಳಿಗೆ ಒಮ್ಮೆ ಹೀಗೆ ಪರಸ್ಪರ ಹಾದುಹೋಗಲಿವೆ. ಆದರೆ, ಈ ಬಾರಿ ಈ ಎರಡೂ ಗ್ರಹಗಳಿಗೆ ಅತ್ಯಂತ ಹತ್ತಿರದಲ್ಲಿ ಭೂಮಿಯೂ ಹಾದುಹೋಗಲಿದೆ. ಸದ್ಯ ಗುರು ಮತ್ತು ಶನಿಗ್ರಹಗಳು 400 ವರ್ಷಗಳ ನಂತರ ಇದೇ ಮೊದಲ ಬಾರಿ ಅತ್ಯಂತ ಸಮೀಪಕ್ಕೆ ಬರಲಿವೆ. ಇದನ್ನು ಖಗೋಳ ವಿಜ್ಞಾನಿಗಳು ‘ಮಹಾ ಸಂಯೋಗ' ಎಂದು ಹೆಸರಿಸಲಾಗಿದೆ. ಇಂತಹ ವಿದ್ಯಮಾನ ಮತ್ತೇ 60 ವರ್ಷಗಳ ನಂತರ ಸಂಭವಿಸಲಿದೆ ಎಂದು ‘ನಾಸಾ' ಸಂಸ್ಥೆ ಹೇಳಿದೆ.

ಇನ್ನು ಈ ಮಹಾ ಸಂಯೋಗಕ್ಕೆ ಸಾಕ್ಷಿಯಾಗಿ ಡಿಸೆಂಬರ್ 13ರಿಂದಲೇ ಖಗೋಳದ ಎರಡು ದೊಡ್ಡ ಗ್ರಹಗಳಾದ ಗುರು ಮತ್ತು ಶನಿ ಹತ್ತಿ ಹತ್ತಿರ ಬರುತ್ತಿವೆ. ಪ್ರತಿದಿನ ಇವುಗಳ ನಡುವಣ ಅಂತರ ಕಡಿಮೆಯಾಗಲಿದೆ. ಆದರೆ ಇಂದು ಈ ಎರಡು ಗ್ರಹಗಳು ಅತ್ಯಂತ ಸಮೀಪಕ್ಕೆ ಬರಲಿವೆ. ಈ ಮಹಾ ಸಂಯೋಗದಲ್ಲಿ ಪ್ರಾರಂಭದಿಂದ ಶನಿಗ್ರಹವು ಮೇಲ್ಭಾಗದಲ್ಲಿ, ಗುರು ಗ್ರಹವು ಕೆಳಭಾಗದಲ್ಲಿ ಗೋಚರಿಸಲಿದೆ. ಇದನ್ನು ಬರಿ ಗಣ್ಣಿನಿಂದಲೇ ನೋಡಬಹುದಾಗಿದ್ದು, ಆಕಾಶದಲ್ಲಿ ಸುಲಭವಾಗಿ ಗೋಚರಿಸಲಿದೆ. ಆದರೆ ಸೋಮವಾರವಾದ ಇಂದು ರಾತ್ರಿಯಿಂದ ಗುರು ಗ್ರಹವು ಮೇಲ್ಭಾಗದಲ್ಲಿ ಮತ್ತು ಶನಿಗ್ರಹವು ಕೆಳಭಾಗದಲ್ಲಿ ಗೋಚರಿಸಲಿದೆ. ಇನ್ನು ಗೂಗಲ್ ಕೂಡ ತನ್ನ ಡೂಡಲ್ನಲ್ಲಿ, ಶನಿ ಮತ್ತು ಗುರುಗಳ ಮಹಾ ಸಂಯೋಗದ ಗುರುತಾಗಿ ತನ್ನ ಡೂಡಲ್ ಪ್ರದರ್ಶಿಸಿದೆ.
This News Article is a Copy of GIZBOT
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
15-03-26 01:08 pm
HK News Desk
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am