ಬ್ರೇಕಿಂಗ್ ನ್ಯೂಸ್
06-01-21 03:24 pm Source: GIZBOT Manthesh ಡಿಜಿಟಲ್ ಟೆಕ್
ನಿಮಗೆ ನಿಮ್ಮ ಹೋಲದ ಪಹಣಿ ಪಡೆಯಬೇಕಿದ್ದರೇ, ಮೊದಲಿನಂತೆ ನಾಡ ಕಚೇರಿಗೆ ಹೋಗಿ ಕ್ಯೂನಲ್ಲಿ ನಿಲ್ಲುವ ಅಗತ್ಯವಿಲ್ಲ. ಆನ್ಲೈನ್ ಮೂಲಕ ಅತೀ ಸುಲಭವಾಗಿ ಹೋಲದ RTC ಉತಾರ/ ಪಹಣಿಯನ್ನು ನೀವು ಪಡೆಯಬಹುದಾಗಿದೆ. ಹಾಗೆಯೇ ಪಹಣಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಸಹ ಅವಕಾಶವಿದೆ.
ಹೌದು, ಸದ್ಯ ತಂತ್ರಜ್ಞಾನ ಬಹುತೇಕ ಎಲ್ಲ ಕೆಲಸಗಳನ್ನು ಸರಳಗೊಳಿಸಿದೆ. ಸರ್ಕಾರ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿದ್ದು, ಆನ್ಲೈನ್ ಮೂಲಕ ಯಾವಾಗ ಬೇಕಾದರೂ ಪಹಣಿಯಲ್ಲಿ ಪಡೆಯಬಹುದಾಗಿದೆ. ಪಹಣಿ ಪಡೆಯಲು ಅಗತ್ಯ ಮಾಹಿತಿಗಳಾದ ಹೋಲದ ಸರ್ವೇ ನಂಬರ್, ಹಿಸ್ಸಾ, ಯಾವ ಜಿಲ್ಲೆ, ಯಾವ ತಾಲೂಕ್, ಯಾವ ಹೋಬಳಿಗಳ ಇವುಗಳ ಮಾಹಿತಿ ನೀಡಬೇಕಿರುತ್ತದೆ. ಹಾಗಾದರೇ ಆನ್ಲೈನ್ನಲ್ಲಿ ಪಹಣಿ ಪಡೆಯುವುದು

ಆನ್ಲೈನ್ನಲ್ಲಿ ಪಹಣಿ ಪಡೆಯಲು ಈ ಕ್ರಮ ಅನುಸರಿಸಿ
ಹಂತ 1 ಮೊದಲು ನೀವು ಬ್ರೌಸರ್ನಲ್ಲಿ https://landrecords.karnataka.gov.in ಅಥವಾ Bhoomi ವೆಬ್ಸೈಟ್ ತೆರೆಯಿರಿ.
ಹಂತ 2 ಆ ನಂತರ ಮೇಲಿನ ಚಿತ್ರದಲ್ಲಿ ತೋರಿಸಿರುವಂತೆ View RTC and MR ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 3 View RTC and MR ಆಯ್ಕೆ ಕ್ಲಿಕ್ ಮಾಡಿದ ನಂತರ ಮೇಲೆ ತೋರಿಸಿರುವ ವಿಂಡೋ ತೆರದುಕೊಳ್ಳುತ್ತದೆ.

ಹಂತ 4 ನಂತರ ಅಲ್ಲಿ ಕೇಳಲಾಗಿರುವ, ಹೋಲ ಇರುವ ಜಿಲ್ಲೆ ಯಾವುದು, ತಾಲೂಕು ಯಾವುದು, ಹೋಬಳಿ, ಗ್ರಾಮ, ಸರ್ವೇ ನಂಬರ್ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.
ಹಂತ 5 ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿದ ನಂತರ Fetch Details ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 6 Fetch Details ಆಯ್ಕೆ ಕ್ಲಿಕ್ ಮಾಡಿದ ಮೇಲೆ ನೀವು ನಮೂದಿಸಿದ ಜಾಗದ/ಭೂಮಿಯ ಮಾಹಿತಿಯನ್ನಾಧರಿಸಿ ಆ ಸರ್ವೇ ನಂಬರ್ನಲ್ಲಿರುವ ಭೂಮಿಯ ವಿವರಗಳು ನಿಮಗೆ ಕಾಣುತ್ತವೆ.

ಹಂತ 7 ಭೂಮಿಯ ವಿವರಗಳು ಕಾಣಿಸಿಕೊಂಡ ನಂತರ View ಆಯ್ಕೆಯನ್ನು ಸೆಲೆಕ್ಟ್ ಮಾಡಿ.
ಹಂತ 8 View ಆಯ್ಕೆ ಕ್ಲಿಕ್ ಮಾಡಿದ ನಂತರ ಬೇರೊಂದು ಪುಟದಲ್ಲಿ ನಿಮ್ಮ ಪಹಣಿ ಕಾಣುತ್ತದೆ. ನೀವು ಅಲ್ಲಿ ಕಾಣುವ ಪಹಣಿಯನ್ನು ಸೇವ್ ಮಾಡಿಕೊಂಡು ಪ್ರಿಂಟ್ ತೆಗೆಸಿಕೊಳ್ಳಬಹುದು.
ಹಂತ 9 ಆನ್ಲೈನ್ನಲ್ಲಿ ವೀಕ್ಷಿಸುವ ಪಹಣಿ ವೀಕ್ಷಣೆಗೆ ಮಾತ್ರ. ಆದರೆ ನಿಗದಿತ ಸರ್ಕಾರಿ ಶುಲ್ಕ ಪಾವತಿಸುವ ಮೂಲಕ ಕೆಲಸಗಳಿಗೆ ಮಾನ್ಯತೆ ಇರುವಂತಹ ಪಹಣಿ ಸಹ ಪ್ರಿಂಟ್ ಮಾಡಬಹುದಾಗಿದೆ.
This News Article is a Copy of GIZBOT
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
15-12-25 08:12 pm
HK News Desk
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
15-12-25 05:40 pm
Mangalore Correspondent
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm