ಬ್ರೇಕಿಂಗ್ ನ್ಯೂಸ್
06-01-21 03:24 pm Source: GIZBOT Manthesh ಡಿಜಿಟಲ್ ಟೆಕ್
ನಿಮಗೆ ನಿಮ್ಮ ಹೋಲದ ಪಹಣಿ ಪಡೆಯಬೇಕಿದ್ದರೇ, ಮೊದಲಿನಂತೆ ನಾಡ ಕಚೇರಿಗೆ ಹೋಗಿ ಕ್ಯೂನಲ್ಲಿ ನಿಲ್ಲುವ ಅಗತ್ಯವಿಲ್ಲ. ಆನ್ಲೈನ್ ಮೂಲಕ ಅತೀ ಸುಲಭವಾಗಿ ಹೋಲದ RTC ಉತಾರ/ ಪಹಣಿಯನ್ನು ನೀವು ಪಡೆಯಬಹುದಾಗಿದೆ. ಹಾಗೆಯೇ ಪಹಣಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ಸಹ ಅವಕಾಶವಿದೆ.
ಹೌದು, ಸದ್ಯ ತಂತ್ರಜ್ಞಾನ ಬಹುತೇಕ ಎಲ್ಲ ಕೆಲಸಗಳನ್ನು ಸರಳಗೊಳಿಸಿದೆ. ಸರ್ಕಾರ ಭೂ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿದ್ದು, ಆನ್ಲೈನ್ ಮೂಲಕ ಯಾವಾಗ ಬೇಕಾದರೂ ಪಹಣಿಯಲ್ಲಿ ಪಡೆಯಬಹುದಾಗಿದೆ. ಪಹಣಿ ಪಡೆಯಲು ಅಗತ್ಯ ಮಾಹಿತಿಗಳಾದ ಹೋಲದ ಸರ್ವೇ ನಂಬರ್, ಹಿಸ್ಸಾ, ಯಾವ ಜಿಲ್ಲೆ, ಯಾವ ತಾಲೂಕ್, ಯಾವ ಹೋಬಳಿಗಳ ಇವುಗಳ ಮಾಹಿತಿ ನೀಡಬೇಕಿರುತ್ತದೆ. ಹಾಗಾದರೇ ಆನ್ಲೈನ್ನಲ್ಲಿ ಪಹಣಿ ಪಡೆಯುವುದು

ಆನ್ಲೈನ್ನಲ್ಲಿ ಪಹಣಿ ಪಡೆಯಲು ಈ ಕ್ರಮ ಅನುಸರಿಸಿ
ಹಂತ 1 ಮೊದಲು ನೀವು ಬ್ರೌಸರ್ನಲ್ಲಿ https://landrecords.karnataka.gov.in ಅಥವಾ Bhoomi ವೆಬ್ಸೈಟ್ ತೆರೆಯಿರಿ.
ಹಂತ 2 ಆ ನಂತರ ಮೇಲಿನ ಚಿತ್ರದಲ್ಲಿ ತೋರಿಸಿರುವಂತೆ View RTC and MR ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 3 View RTC and MR ಆಯ್ಕೆ ಕ್ಲಿಕ್ ಮಾಡಿದ ನಂತರ ಮೇಲೆ ತೋರಿಸಿರುವ ವಿಂಡೋ ತೆರದುಕೊಳ್ಳುತ್ತದೆ.

ಹಂತ 4 ನಂತರ ಅಲ್ಲಿ ಕೇಳಲಾಗಿರುವ, ಹೋಲ ಇರುವ ಜಿಲ್ಲೆ ಯಾವುದು, ತಾಲೂಕು ಯಾವುದು, ಹೋಬಳಿ, ಗ್ರಾಮ, ಸರ್ವೇ ನಂಬರ್ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.
ಹಂತ 5 ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿದ ನಂತರ Fetch Details ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.
ಹಂತ 6 Fetch Details ಆಯ್ಕೆ ಕ್ಲಿಕ್ ಮಾಡಿದ ಮೇಲೆ ನೀವು ನಮೂದಿಸಿದ ಜಾಗದ/ಭೂಮಿಯ ಮಾಹಿತಿಯನ್ನಾಧರಿಸಿ ಆ ಸರ್ವೇ ನಂಬರ್ನಲ್ಲಿರುವ ಭೂಮಿಯ ವಿವರಗಳು ನಿಮಗೆ ಕಾಣುತ್ತವೆ.

ಹಂತ 7 ಭೂಮಿಯ ವಿವರಗಳು ಕಾಣಿಸಿಕೊಂಡ ನಂತರ View ಆಯ್ಕೆಯನ್ನು ಸೆಲೆಕ್ಟ್ ಮಾಡಿ.
ಹಂತ 8 View ಆಯ್ಕೆ ಕ್ಲಿಕ್ ಮಾಡಿದ ನಂತರ ಬೇರೊಂದು ಪುಟದಲ್ಲಿ ನಿಮ್ಮ ಪಹಣಿ ಕಾಣುತ್ತದೆ. ನೀವು ಅಲ್ಲಿ ಕಾಣುವ ಪಹಣಿಯನ್ನು ಸೇವ್ ಮಾಡಿಕೊಂಡು ಪ್ರಿಂಟ್ ತೆಗೆಸಿಕೊಳ್ಳಬಹುದು.
ಹಂತ 9 ಆನ್ಲೈನ್ನಲ್ಲಿ ವೀಕ್ಷಿಸುವ ಪಹಣಿ ವೀಕ್ಷಣೆಗೆ ಮಾತ್ರ. ಆದರೆ ನಿಗದಿತ ಸರ್ಕಾರಿ ಶುಲ್ಕ ಪಾವತಿಸುವ ಮೂಲಕ ಕೆಲಸಗಳಿಗೆ ಮಾನ್ಯತೆ ಇರುವಂತಹ ಪಹಣಿ ಸಹ ಪ್ರಿಂಟ್ ಮಾಡಬಹುದಾಗಿದೆ.
This News Article is a Copy of GIZBOT
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
13-06-26 05:28 pm
HK News Staffer
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
13-06-26 09:17 pm
HK News Staffer
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm