ಬ್ರೇಕಿಂಗ್ ನ್ಯೂಸ್
12-01-21 04:44 pm Headline Karnataka News Network ಡಿಜಿಟಲ್ ಟೆಕ್
ಹೊಸದಿಲ್ಲಿ,ಜ.12: ವಾಟ್ಸಾಪ್ ಕಂಪೆನಿಯು ತನ್ನ ನೂತನ ಗೌಪ್ಯತಾ ನಿಯಮಗಳನ್ನು ಬಳಕೆದಾರರು ಒಪ್ಪದಿದ್ದಲ್ಲಿ ಫೆಬ್ರವರಿಯಿಂದ ಅವರ ಖಾತೆಗಳನ್ನು ಬ್ಲಾಕ್ ಮಾಡಲಾಗುವುದು ಎಂದು ಹೇಳಿಕೆ ನೀಡಿತ್ತು. ಅಲ್ಲದೇ, ಈ ನಿಯಮದ ಅನುಸಾರ ಫೇಸ್ಬುಕ್ ನೊಂದಿಗೆ ಮತ್ತು ಥರ್ಡ್ ಪಾರ್ಟಿ ಆಪ್ ಗಳೊಂದಿಗೆ ವಾಟ್ಸಾಪ್ ಖಾತೆಯ ಮಾಹಿತಿಗಳನ್ನು ಹಂಚಿಕೊಳ್ಳುವುದಾಗಿ ಹೇಳಿಕೆ ನೀಡಿತ್ತು. ಇದು ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿ ಹಲವಾರು ಮಂದಿ ವಾಟ್ಸಾಪ್ ಬಳಕೆಯನ್ನು ನಿಲ್ಲಿಸಿ, ಟೆಲಿಗ್ರಾಂ, ಸಿಗ್ನಲ್ ಆಪ್ ಗಳನ್ನು ಡೌನ್ಲೋಡ್ ಮಾಡಲು ಪ್ರಾರಂಭಿಸಿದ್ದರು. ಈ ಕಾರಣದಿಂದಾಗಿ ವಾಟ್ಸಾಪ್ ಗೆ ಹಿನ್ನಡೆಯಾಗಿದ್ದು, ಇದೀಗ ಕೊನೆಗೂ ವಾಟ್ಸಾಪ್ ಕಂಪೆನಿಯು ಸ್ಪಷ್ಟೀಕರಣ ನೀಡಿದೆ.

ತನ್ನ ಟ್ವಿಟರ್ ಖಾತೆಯ ಮೂಲಕ ಸ್ಪಷ್ಟೀಕರಣ ನೀಡಿದ ವಾಟ್ಸಾಪ್ ಕಂಪೆನಿಯು ವಾಟ್ಸಾಪ್ ಯಾವುದೇ ಕಾರಣಕ್ಕೂ ನಿಮ್ಮ ಖಾಸಗಿ ಸಂದೇಶಗಳನ್ನು ನೋಡುವುದಿಲ್ಲ. ಹೊಸ ನಿಯಮಗಳು ವಾಟ್ಸಾಪ್ ನಲ್ಲಿ ನ ವ್ಯವಹಾರಕ್ಕೆ ಸೀಮಿತವಾಗಿರುತ್ತದೆ ಎಂದಿದೆ. ಇನ್ನೂ ಕೆಲವು ವಿಚಾರಗಳ್ನು ವಾಟ್ಸಪ್ ಹಂಚಿಕೊಂಡಿದ್ದು, ಅವರು ಈ ಕೆಳಗಿನಂತಿವೆ.
1. ನಿಮ್ಮ ಕಾಲ್ ಅಥವಾ ನಿಮ್ಮ ಖಾಸಗಿ ಮೆಸೇಜ್ ಗಳನ್ನು ವಾಟ್ಸಪ್, ಫೇಸ್ ಬುಕ್ ಗೆ ವೀಕ್ಷಿಸಲು ಸಾಧ್ಯವಿಲ್ಲ.
2. ನಿಮಗೆ ಯಾರೆಲ್ಲಾ ಕರೆ ಮಾಡುತ್ತಿದ್ದಾರೆ, ಮೆಸೇಜ್ ಮಾಡುತ್ತಿದ್ದಾರೆಂದು ಎಲ್ಲರ ಪಟ್ಟಿಯನ್ನು ವಾಟ್ಸಾಪ್ ಸಿದ್ಧಪಡಿಸಿಟ್ಟುಕೊಳ್ಳುವುದಿಲ್ಲ.
3. ನೀವು ಶೇರ್ ಮಾಡಿದ ಲೊಕೇಶನ್ ಅನ್ನು ವಾಟ್ಸಾಪ್ ಮತ್ತು ಫೇಸ್ ಬುಕ್ ಗೆ ನೋಡಲು ಸಾಧ್ಯವಿಲ್ಲ
4. ನಿಮ್ಮ ಕಾಂಟ್ಯಾಕ್ಟ್ ಲಿಸ್ಟ್ ಅನ್ನು ಫೇಸ್ ಬುಕ್ ಗೆ ನೀಡುವುದಿಲ್ಲ.

5. ವಾಟ್ಸಾಪ್ ನ ಗ್ರೂಪ್ ಗಳು ಖಾಸಗಿಯಾಗಿಯೇ ಇರುತ್ತವೆ. ಸಾರ್ವಜನಿಕವಾಗಿರುವುದಿಲ್ಲ.
6. ನಿಮ್ಮ ಮೆಸೇಜ್ ಅಳಿಸುವಂತಹ (ಡಿಸ್ ಅಪಿಯರ್) ವ್ಯವಸ್ಥೆಯನ್ನು ನಿಮಗೆ ಅಳವಡಿಸಬಹುದಾಗಿದೆ.
7.ನಿಮ್ಮ ಮಾಹಿತಿಗಳನ್ನು ನಿಮಗೆ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
ನಿಮ್ಮ ಯಾವುದೇ ಖಾಸಗಿ ಮಾಹಿತಿಗಳನ್ನು ನಾವು ಫೇಸ್ಬುಕ್ ಜೊತೆ ಹಂಚಿಕೊಳ್ಳುವುದಿಲ್ಲ. ನೀವು ಕಳಿಸಿರುವ ಖಾಸಗಿ ಮೆಸೇಜ್ ಗಳನ್ನು ವೀಕ್ಷಿಸಲು ಯಾರಿಗೂ ಸಾಧ್ಯವಿಲ್ಲ ಎಂದು ವಾಟ್ಸಾಪ್ ಇಂದು ಬೆಳಗ್ಗೆ ತನ್ನ ಟ್ವಿಟರ್ ಖಾತೆಯಲ್ಲಿ ಸ್ಪಷ್ಟೀಕರಣ ನೀಡಿದೆ.
We want to address some rumors and be 100% clear we continue to protect your private messages with end-to-end encryption. pic.twitter.com/6qDnzQ98MP
— WhatsApp (@WhatsApp) January 12, 2021
A new WhatsApp blog post on Tuesday has reiterated that it doesn’t share private messages or sensitive location data with Facebook, but clarified that some of the business conversation hosted with the social network might be readable and used for advertising.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
15-03-26 01:08 pm
HK News Desk
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am