ಬ್ರೇಕಿಂಗ್ ನ್ಯೂಸ್
16-01-21 05:43 pm Source: GIZBOT Mutthuraju H M ಡಿಜಿಟಲ್ ಟೆಕ್
ದೇಶಿಯ ಮಾರುಕಟ್ಟೆಯಲ್ಲಿ ಬಜೆಟ್ ದರದ ಸ್ಮಾರ್ಟ್ಫೋನ್ಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಈ ನಿಟ್ಟಿನಲ್ಲಿ ಬಹುತೇಕ ಕಂಪನಿಗಳು ನೂತನ ಫೋನ್ಗಳನ್ನು ಪರಿಚಯಿಸುತ್ತವೆ. ಅವುಗಳಲ್ಲಿ ಐಟೆಲ್ ಕಂಪನಿಯು ಸಹ ಅಗ್ಗದ ದರದಲ್ಲಿ ಸ್ಮಾರ್ಟ್ಫೋನ್ಗಳನ್ನು ಲಾಂಚ್ ಮಾಡಿ ಸೈ ಅನಿಸಿಕೊಂಡಿದೆ. ಇದೀಗ ಐಟೆಲ್ ಕಂಪನಿಯು ಭಾರತದಲ್ಲಿ ಹೊಸದಾಗಿ ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ.
ಹೌದು, ಐಟೆಲ್ ಕಂಪೆನಿ ತನ್ನ ಹೊಸ ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಲಾಂಚ್ ಮಾಡಿದೆ. ಅಗ್ಗದ ಪ್ರೈಸ್ಟ್ಯಾಗ್ ಹೊಂದಿರುವ ಈ ಸ್ಮಾರ್ಟ್ಫೋನ್ ಆಂಡ್ರಾಯ್ಡ್ 10 ಗೋ ಎಡಿಷನ್ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4,000mAh ಸಾಮರ್ಥ್ಯ ಬ್ಯಾಟರಿ ಬ್ಯಾಕ್ಅಪ್ ಅನ್ನು ಪಡೆದುಕೊಂಡಿದೆ ಜೊತೆಗೆ ತ್ರಿವಳಿ ಕ್ಯಾಮೆರಾ ರಚನೆಯನ್ನು ಹೊಂದಿದೆ.
ಡಿಸ್ಪ್ಲೇ ವಿನ್ಯಾಸ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ವಾಟರ್ ಡ್ರಾಪ್ ನಾಚ್ ಶೈಲಿಯನ್ನು ಹೊಂದಿರುವ ಡಿಸ್ಪ್ಲೇ ಹೊಂದಿದ್ದು, ಇದು 720x1600 ಸ್ಕ್ರೀನ್ ರೆಸಲ್ಯೂಶನ್ ಹೊಂದಿರುವ 6.5-ಇಂಚಿನ ಎಚ್ಡಿ ಪ್ಲಸ್ ಡಿಸ್ಪ್ಲೇ ಇದಾಗಿದೆ. ಈ ಡಿಸ್ಪ್ಲೇಯು IPS LCD ಪ್ಯಾನೆಲ್ ಡಿಸ್ಪ್ಲೇ ಆಗಿದ್ದು, 450 ನಿಟ್ಸ್ ಬ್ರೈಟ್ನೆಶ್ ಅನ್ನು ಹೊಂದಿದೆ. ಅಲ್ಲದೆ ಈ ಡಿಸ್ಪ್ಲೇ 20:9 ಅನುಪಾತ ಹೊಂದಿದೆ.
ಪ್ರೊಸೆಸರ್ ಬಲ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, 10 ಗೋ ಎಡಿಷನ್ ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಅಗ್ಗದ ಬೆಲೆಯ ಈ ಸ್ಮಾರ್ಟ್ಫೋನ್ 2GB RAM ಮತ್ತು 32GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನ ಹೊಂದಿದೆ.
ಕ್ಯಾಮೆರಾ ರಚನೆ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ ಟ್ರಿಪಲ್ ಕ್ಯಾಮೆರಾ ರಿಯರ್ ಸೆಟ್ಆಪ್ ಹೊಂದಿದ್ದು, ಮೊದಲನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಇನ್ನುಳಿದಂತೆ ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳೆರಡು VGA ಕ್ಯಾಮೆರಾ ಮಾದರಿಯನ್ನು ಹೊಂದಿವೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರುವ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ ಮತ್ತು ಇತರೆ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ 4000mAh ಬ್ಯಾಟರಿ ಪ್ಯಾಕ್ಆಪ್ ಹೊಂದಿದೆ. 35 ಗಂಟೆಗಳ ಪ್ಲೇಬ್ಯಾಕ್ ಮ್ಯೂಸಿಕ್, 8 ಗಂಟೆಗಳ ವೀಡಿಯೊ ಮತ್ತು 7 ಗಂಟೆಗಳ ಗೇಮಿಂಗ್ ಅನ್ನು ಒದಗಿಸುತ್ತದೆ ಎಂದು ಐಟೆಲ್ ಹೇಳಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಯಲ್ಲಿ ಡ್ಯುಯಲ್ ಆಕ್ಟಿವ್ 4G VOLTE, ವೈಫೈ, ಬ್ಲೂಟೂತ್ , ಹಾಟ್ಸ್ಪಾಟ್ ಅನ್ನು ಬೆಂಬಲಿಸಲಿದೆ.
ಬೆಲೆ ಮತ್ತು ಲಭ್ಯತೆ
ಐಟೆಲ್ ವಿಷನ್ 1 ಪ್ರೊ ಸ್ಮಾರ್ಟ್ಫೋನ್ 2GB RAM ಮತ್ತು 32GB ವೇರಿಯಂಟ್ ಬೆಲೆಯು 6,599ರೂ.ಗಳಾಗಿದೆ. ಇನ್ನು ಈ ಫೋನ್ ಅರೋರಾ ಬ್ಲೂ ಹಾಗೂ ಓಶಿಯನ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಾಗಲಿದೆ.
This News Article is a Copy of GIZBOT
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm