ಬ್ರೇಕಿಂಗ್ ನ್ಯೂಸ್
23-01-21 04:10 pm Source: GIZBOT Mutthuraju H M ಡಿಜಿಟಲ್ ಟೆಕ್
ಎಲೆಕ್ಟ್ರಾನಿಕ್ಸ್ ದೈತ್ಯ ಎನಿಸಿಕೊಂಡಿರುವ ಎಲ್ಜಿ ಕಂಪೆನಿ ತನ್ನ ಬಜೆಟ್ ಬೆಲೆಯ ಸ್ಮಾರ್ಟ್ಫೋನ್ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್ಫೋನ್ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಎಲ್ಜಿ ಕಂಪೆನಿ ತನ್ನ ಹೊಸ ಎಲ್ಜಿ K42 ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದೆ.
ಹೌದು, ಎಲ್ಜಿ ಕಂಪೆನಿ ತನ್ನ ಎಲ್ಜಿ K42 ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ಅನಾವರಣಗೊಳಿಸಿದೆ. ಇದು 6.6 ಇಂಚಿನ ಹೆಚ್ಡಿ ಪ್ಲಸ್ ಡಿಸ್ಪ್ಲೇಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್ಫೋನ್ ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ P22SoC ಪ್ರೊಸೆಸರ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್ಫೋನ್ ಯಾವೆಲ್ಲಾ ಫೀಚರ್ಸ್ ಅನ್ನು ಹೊಂದಿದೆ
ಡಿಸ್ಪ್ಲೇ
ಎಲ್ಜಿ K42 ಸ್ಮಾರ್ಟ್ಫೋನ್ 720x1,600 ಪಿಕ್ಸೆಲ್ ಸಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6 ಇಂಚಿನ ಹೆಚ್ಡಿ ಡಿಸ್ಪ್ಲೇ ಹೊಂದಿದೆ. ಈ ಡಿಸ್ಪ್ಲೇ 20: 9 ರಚನೆಯ ಅನುಪಾತವನ್ನು ಹೊಂದಿದೆ. ಇನ್ನು ಈ ಡಿಸ್ಪ್ಲೇ 270 PPI ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ.
ಪ್ರೊಸೆಸರ್
ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೊ P22 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 3GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.
ಕ್ಯಾಮೆರಾ ವಿಶೇಷ
ಎಲ್ಜಿ K 42 ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಪ್ರೈಮರಿ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಸೂಪರ್-ವೈಡ್-ಆಂಗಲ್ ಲೆನ್ಸ್ , ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.
ಬ್ಯಾಟರಿ ಮತ್ತು ಇತರೆ
ಈ ಸ್ಮಾರ್ಟ್ಫೋನ್ 4,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್ಅಪ್ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈ-ಫೈ, ಬ್ಲೂಟೂತ್ ವಿ 5.0 ಮತ್ತು USB ಟೈಪ್-ಸಿ ಪೋರ್ಟ್ ಸೇರಿವೆ. ಇನ್ನು ಈ ಸ್ಮಾರ್ಟ್ಫೋನ್ ಯುಎಸ್ ಮಿಲಿಟರಿ ಡಿಫೆನ್ಸ್ ಸ್ಟ್ಯಾಂಡರ್ಡ್ ಪರೀಕ್ಷೆಯ ಒಂಬತ್ತು ವಿಭಿನ್ನ ವಿಭಾಗಗಳನ್ನು ಉತ್ತೀರ್ಣವಾಗಿದೆ ಎಂದು ಹೇಳಲಾಗುತ್ತದೆ.
ಬೆಲೆ ಮತ್ತು ಲಭ್ಯತೆ
ಭಾರತದಲ್ಲಿ ಎಲ್ಜಿ K42 ಸ್ಮಾರ್ಟ್ಫೋನ್ ಬೆಲೆ ಏಕೈಕ 3GB RAM + 64GB ಶೇಖರಣಾ ರೂಪಾಂತರಕ್ಕೆ 10,990 ರೂ.ಆಗಿದೆ. ಇದು ಫ್ಲಿಪ್ಕಾರ್ಟ್ ಮೂಲಕ ಪ್ರತ್ಯೇಕವಾಗಿ ಖರೀದಿಸಲು ಲಭ್ಯವಿರುತ್ತದೆ. ಇದು ಗ್ರೇ ಮತ್ತು ಗ್ರೀನ್ ಬಣ್ಣ ಆಯ್ಕೆಗಳಲ್ಲಿ ಬರುತ್ತದೆ.
This News Article is a Copy of GIZBOT
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm