ಬ್ರೇಕಿಂಗ್ ನ್ಯೂಸ್
26-01-21 05:12 pm Source: GIZBOT Mutthuraju H M ಡಿಜಿಟಲ್ ಟೆಕ್
ಭಾರತದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದ ಟಿಕ್ಟಾಕ್ ಈಗಾಗಲೇ ಭಾರತದಲ್ಲಿ ಬ್ಯಾನ್ ಆಗಿದೆ. ಇದರ ಜೊತೆಗೆ ಚೀನಾ ಮೂಲದ ಅನೇಕ ಆಪ್ಗಳನ್ನ ಬ್ಯಾನ್ ಮಾಡಲಾಗಿದೆ. ಇದರಲ್ಲಿ ಟಿಕ್ಟಾಕ್, ವೀಚಾಟ್ ಮತ್ತು ಚೀನಾದ ಕಂಪನಿಗಳ ಒಟ್ಟು 59 ಆಪ್ಗಳನ್ನು ಭಾರತದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಶಾಶ್ವತವಾಗಿ ನಿಷೇಧಿಸಿದೆ ಎಂದು ವರದಿಗಳು ತಿಳಿಸಿವೆ. ಬ್ಯಾನ್ ಆಗಿರುವ ಟಿಕ್ಟಾಕ್ ಮತ್ತೆ ಬಳಕೆಗೆ ಲಭ್ಯವಾಬಹುದು ಎನ್ನುವ ಭರವಸೆ ಹೊಂದಿದ್ದ ಟಿಕ್ಟಾಕ್ ಪ್ರಿಯರು ಇನ್ಮುಂದೆ ಟಿಕ್ಟಾಕ್ ಅನ್ನೇ ಮರೆತುಬಿಡುವುದು ಉತ್ತಮವಾಗಿದೆ.
ಹೌದು, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಭಾರತದಲ್ಲಿ ಬ್ಯಾನ್ ಆಗಿರುವ ಚೀನೀ ಅಪ್ಲಿಕೇಶನ್ಗಳು ಮತ್ತೆ ಭಾರತದಲ್ಲಿ ಪುನರಾಗಮನ ಮಾಡುವುದು ಅಸಾಧ್ಯ ಎನ್ನಲಾಗ್ತಿದೆ. ಈ ಅಪ್ಲಿಕೇಶನ್ಗಳಿಂದ ಭಾರತದ ರಕ್ಷಣೆ, ರಾಜ್ಯದ ಭದ್ರತೆಗೆ ದಕ್ಕೆ ಆಗಲಿದೆ ಎಂದು ಬ್ಯಾನ್ ಮಾಡಲಾಗಿದೆ. ಇದೇ ಕಾರಣಕ್ಕೆ ಈ ಆಪ್ಗಳನ್ನು ಭಾರತದಲ್ಲಿ ಶಾಶ್ವತವಾಗಿ ಬ್ಯಾನ್ ಮಾಡಲಾಗಿದೆ. ಅದರಲ್ಲೂ ಟಿಕ್ಟಾಕ್ನಂತಹ ಅಪ್ಲಿಕೇಶನ್ಗಳು ಭಾರತಕ್ಕೆ ಹಿಂತಿರುಗುವುದಿಲ್ಲ ಎಂದು ಹೇಳಲಾಗ್ತಿದೆ.
ಭಾರತ ಸರ್ಕಾರ ಈಗಾಗಲೇ ಸಾರ್ವಭೌಮತ್ವ ಮತ್ತು ಸಮಗ್ರತೆ, ಭಾರತದ ರಕ್ಷಣೆ, ರಾಜ್ಯದ ಭದ್ರತೆ ದೃಷ್ಟಿಯಿಂದ ಚೀನಾ ಮೂಲದ 200 ಕ್ಕೂ ಹೆಚ್ಚು ಆಪ್ಗಳನ್ನು ನಿಷೇಧಿಸಿದೆ. ಈ ಪೈಕಿ ಕನಿಷ್ಠ 59 ಅಪ್ಲಿಕೇಶನ್ಗಳನ್ನು ದೇಶದಲ್ಲಿ ಶಾಶ್ವತವಾಗಿ ನಿಷೇಧಿಸಲಾಗುವುದು ಎಂದು ಹೇಳಲಾಗಿದೆ. ಅದರಲ್ಲೂ ಲೈವ್ಮಿಂಟ್ನ ವರದಿಯ ಪ್ರಕಾರ, ಟಿಕ್ಟಾಕ್ ಭಾರತದಲ್ಲಿ ಮತ್ತೆ ಎಂದಿಗೂ ಕೂಡ ಲಭ್ಯವಾಗುವುದಿಲ್ಲ ಎನ್ನಲಾಗಿದೆ. ಈ ಅಪ್ಲಿಕೇಶನ್ಗಳು ಬಳಕೆದಾರರ ಗೌಪ್ಯತೆ ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ಸಮರ್ಪಕವಾದ ಉತ್ತರವನ್ನು ನೀಡಿಲ್ಲ ಎನ್ನಲಾಗಿದೆ.
ಇನ್ನು ಈ ಆಪ್ ತಯಾರಕರು ಭಾರತ ಸರ್ಕಾರಕ್ಕೆ ನಿಡಿರುವ ಉತ್ತರ ತಯಾರಕರು ಸಲ್ಲಿಸಿದ ಪ್ರತಿಕ್ರಿಯೆಗಳಿಂದ ಭಾರತ ಸರ್ಕಾರವು ತೃಪ್ತಿ ಹೊಂದಿಲ್ಲ ಎಂದು ಹೇಳಲಾಗಿದೆ. ಆದ್ದರಿಂದ, ಟಿಕ್ಟಾಕ್ ಸೇರಿದಂತೆ ಕೆಲವು ಅಪ್ಲಿಕೇಶನ್ಗಳು ದೇಶದಲ್ಲಿ ಶಾಶ್ವತ ನಿಷೇಧವನ್ನು ಪಡೆಯುವ ಸಾಧ್ಯತೆಯಿದೆ. ಈಗಿನಂತೆ, ಮೊದಲ ಹಂತದಿಂದ ನಿಷೇಧಿಸಲ್ಪಟ್ಟ ಎಲ್ಲಾ 59 ಅಪ್ಲಿಕೇಶನ್ಗಳಿಗೆ ಶಾಶ್ವತ ನಿಷೇಧ ಸಿಗುತ್ತದೆಯೇ ಅಥವಾ ಕಳೆದ ಕೆಲವು ತಿಂಗಳಲ್ಲಿ ದೇಶದಿಂದ ನಿಷೇಧಿಸಲ್ಪಟ್ಟ 200 ಪ್ಲಸ್ ಅಪ್ಲಿಕೇಶನ್ಗಳನ್ನು ಶಾಶ್ವತವಾಗಿ ನಿಷೇದ ಮಾಡಲಾಗುತ್ತದೆಯೇ ಎನ್ನುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.
ಇದಲ್ಲದೆ ಭಾರತದಲ್ಲಿ PUBG ಮೊಬೈಲ್ ಗೇಮ್ ಮತ್ತೆ ಶುರುವಾಗಲಿದೆ ಎಂಬ ಭರವಸೆ ಇತ್ತು. ಆದರೆ ಆರ್ಟಿಐನಲ್ಲಿ ಬಹಿರಂಗವಾದ ಮಾಹಿತಿ ಪ್ರಕಾರ ಪಬ್ಜಿ ಆಪ್ ಮತ್ತೆ ಶುರುವಾಗುವುದಕ್ಕೆ ಭಾರತ ಸರ್ಕಾರ ಯಾವುದೇ ಅನುಮತಿ ನೀಡಿಲ್ಲ ಎನ್ನಲಾಗಿದೆ. ಈ ಮೂಲಕ ಭಾರತದಲ್ಲಿ ಚೀನಾ ಮೂಲದ ಅಪ್ಲಿಕೇಶನ್ಗಳು ಮತ್ತೆ ಪ್ರಾರಂಭವಾಗುವುದಿಲ್ಲ ಎನ್ನಲಾಗಿದೆ.
This News Article is a Copy of GIZBOT
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm