ಬ್ರೇಕಿಂಗ್ ನ್ಯೂಸ್
13-02-21 02:59 pm Source: GIZBOT Manthesh ಡಿಜಿಟಲ್ ಟೆಕ್
ಗೂಗಲ್ ಮ್ಯಾಪ್ ಅಪ್ಲಿಕೇಶನ್ಗೆ ಬದಲಾಗಿ ಸ್ವದೇಶಿ ಮ್ಯಾಪ್ ಸೇವೆ ಅಭಿವೃದ್ಧಿ ಪಡಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಮತ್ತು ಮ್ಯಾಪ್ ಮೈ ಇಂಡಿಯಾ ಸಂಸ್ಥೆಗಳು ಒಪ್ಪಂದ ಮಾಡಿಕೊಂಡಿವೆ.
ಸ್ವದೇಶಿ ಮ್ಯಾಪ್ ಸೇವೆ ಅಭಿವೃದ್ಧಿಯಿಂದ ಮ್ಯಾಪ್, ಜಿಯೊ ಲೊಕೇಶನ್, ನ್ಯಾವಿಗೇಷನ್ ಸೇರಿದಂತೆ ಮ್ಯಾಪ್ ಸೇವೆಗಳಿಗೆ ವಿದೇಶಿ ಕಂಪನಿಗಳನ್ನು ಅವಲಂಬಿಸುವುದು ತಪ್ಪುತ್ತದೆ. ಇಸ್ರೊದ ಭೂ ಪರಿವೀಕ್ಷಣೆ ಡೇಟಾ, ಸ್ಯಾಟಲೈಟ್ ಫೋಟೊಗಳನ್ನು ಬಳಸಿಕೊಳ್ಳುವ ಮೂಲಕ ಉತ್ತಮ ಗುಣಮಟ್ಟದ ಮ್ಯಾಪ್ ಸೇವೆ ನೀಡಲು ಸಾಧ್ಯವಾಗುತ್ತದೆ. ಆತ್ಮನಿರ್ಭರ ಭಾರತ ಹಾದಿಯಲ್ಲಿ ಇದು ಮಹತ್ವದ ಮೈಲಿಗಲ್ಲು ಎಂದು ಮ್ಯಾಪ್ ಮೈ ಇಂಡಿಯಾ ಸಿಇಒ ರೋಹನ್ ವರ್ಮಾ ಹೇಳಿದ್ದಾರೆ.

ಮ್ಯಾಪ್ ಮೈ ಇಂಡಿಯಾ ಮಾಲೀಕತ್ವ ಹೊಂದಿರುವ ಸಿ.ಇ. ಇನ್ಫೋ ಸಿಸ್ಟಮ್ಸ್ ಪ್ರೈ.ಲಿ. ಮತ್ತು ಬಾಹ್ಯಾಕಾಶ ಇಲಾಖೆ ಫೆ.11ರಂದು ಒಪ್ಪಂದ ಮಾಡಿಕೊಂಡಿವೆ ಎಂದು ಇಸ್ರೊ ತಿಳಿಸಿದೆ. ಭೂ ಪರಿವೀಕ್ಷಣೆ ಡೇಟಾಗಾಗಿ ಇಸ್ರೊದ 'NavIC', 'ವೆಬ್ ಸೇವೆಗಳು', 'API', 'ಮ್ಯಾಪ್ ಮೈ ಇಂಡಿಯಾ', 'ಭುವನ್', 'VEDAS' ಮತ್ತು 'MOSDAC 'ಗಳನ್ನು ಬಳಸಿಕೊಂಡು ಜಂಟಿಯಾಗಿ ಸ್ಥಳಗಳ ವಿವರ ಒದಗಿಸುವ ಉತ್ತಮ ಮ್ಯಾಪ್ ಸೇವೆ ಒದಗಿಸಲು ಮ್ಯಾಪ್ ಮೈ ಇಂಡಿಯಾ ಜೊತೆಗಿನಒಪ್ಪಂದ ನೆರವಾಗುತ್ತದೆ ಎಂದು ಇಸ್ರೊ ತಿಳಿಸಿದೆ.
ಕೇಂದ್ರ ಸರಕಾರದ ಅಧಿಕೃತ ಮ್ಯಾಪ್ ಬಳಸುವ ಮ್ಯಾಪ್ ಮೈ ಇಂಡಿಯಾ, ಭಾರತದ ನೈಜ ಸಾರ್ವಭೌಮತೆಯನ್ನು ಪ್ರದರ್ಶಿಸುವ ಭಾರತೀಯ ಕಂಪನಿಯಾಗಿದೆ. ಮ್ಯಾಫ್ಸ್, ಆ್ಯಫ್ಸ್ ಮತ್ತು ಸೇವೆಗಳು ಇನ್ನು ಮುಂದೆ ಇಸ್ರೊದ ಬೃಹತ್ ಛಾಯಾಚಿತ್ರ ಮತ್ತು ಭೂಪರೀಕ್ಷಣೆ ಸ್ಯಾಟಲೈಟ್ ಡೇಟಾ ಜತೆ ಏಕೀಕರಣಗೊಳ್ಳಲಿವೆ ಎಂದು ಮ್ಯಾಪ್ ಮೈ ಇಂಡಿಯಾ ತಿಳಿಸಿದೆ.

ವಿದೇಶಿ ಸಂಸ್ಥೆಯಗಳು ಉಚಿತ ಸೇವೆ ಹೆಸರಿನಲ್ಲಿ ಬಳಕೆದಾರರ ಖಾಸಗಿ ಮಾಹಿತಿ, ಓಡಾಟ ಮತ್ತು ಲೊಕೇಶನ್ ಅನ್ನು ಮಾರಿಕೊಳ್ಳುತ್ತವೆ. ಖಾಸಗಿತನಕ್ಕೆ ಧಕ್ಕೆ ತರುವ ದೃಷ್ಠಿಯಿಂದ ಇದು ಒಳ್ಳೆಯ ಕ್ರಮವಲ್ಲ. ಆದರೆ, ನಮ್ಮದು ಖಾಸಗಿತನಕ್ಕೆ ಧಕ್ಕೆಯಾಗದಂತೆ ಜಾಹೀರಾತು ಬಿಸಿನೆಸ್ ಮಾಡೆಲ್ ಒಳಗೊಂಡಿರದ ಸುರಕ್ಷಿತ ಮ್ಯಾಪ್ ಆಗಿದೆ ಎಂದು ಮ್ಯಾಪ್ ಮೈ ಇಂಡಿಯಾ ಸಿಇಒ ರೋಹನ್ ವರ್ಮಾ ಹೇಳಿದ್ದಾರೆ.
This News Article is a Copy of GIZBOT
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm