ಬ್ರೇಕಿಂಗ್ ನ್ಯೂಸ್
13-02-21 02:59 pm Source: GIZBOT Manthesh ಡಿಜಿಟಲ್ ಟೆಕ್
ಗೂಗಲ್ ಮ್ಯಾಪ್ ಅಪ್ಲಿಕೇಶನ್ಗೆ ಬದಲಾಗಿ ಸ್ವದೇಶಿ ಮ್ಯಾಪ್ ಸೇವೆ ಅಭಿವೃದ್ಧಿ ಪಡಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಮತ್ತು ಮ್ಯಾಪ್ ಮೈ ಇಂಡಿಯಾ ಸಂಸ್ಥೆಗಳು ಒಪ್ಪಂದ ಮಾಡಿಕೊಂಡಿವೆ.
ಸ್ವದೇಶಿ ಮ್ಯಾಪ್ ಸೇವೆ ಅಭಿವೃದ್ಧಿಯಿಂದ ಮ್ಯಾಪ್, ಜಿಯೊ ಲೊಕೇಶನ್, ನ್ಯಾವಿಗೇಷನ್ ಸೇರಿದಂತೆ ಮ್ಯಾಪ್ ಸೇವೆಗಳಿಗೆ ವಿದೇಶಿ ಕಂಪನಿಗಳನ್ನು ಅವಲಂಬಿಸುವುದು ತಪ್ಪುತ್ತದೆ. ಇಸ್ರೊದ ಭೂ ಪರಿವೀಕ್ಷಣೆ ಡೇಟಾ, ಸ್ಯಾಟಲೈಟ್ ಫೋಟೊಗಳನ್ನು ಬಳಸಿಕೊಳ್ಳುವ ಮೂಲಕ ಉತ್ತಮ ಗುಣಮಟ್ಟದ ಮ್ಯಾಪ್ ಸೇವೆ ನೀಡಲು ಸಾಧ್ಯವಾಗುತ್ತದೆ. ಆತ್ಮನಿರ್ಭರ ಭಾರತ ಹಾದಿಯಲ್ಲಿ ಇದು ಮಹತ್ವದ ಮೈಲಿಗಲ್ಲು ಎಂದು ಮ್ಯಾಪ್ ಮೈ ಇಂಡಿಯಾ ಸಿಇಒ ರೋಹನ್ ವರ್ಮಾ ಹೇಳಿದ್ದಾರೆ.
ಮ್ಯಾಪ್ ಮೈ ಇಂಡಿಯಾ ಮಾಲೀಕತ್ವ ಹೊಂದಿರುವ ಸಿ.ಇ. ಇನ್ಫೋ ಸಿಸ್ಟಮ್ಸ್ ಪ್ರೈ.ಲಿ. ಮತ್ತು ಬಾಹ್ಯಾಕಾಶ ಇಲಾಖೆ ಫೆ.11ರಂದು ಒಪ್ಪಂದ ಮಾಡಿಕೊಂಡಿವೆ ಎಂದು ಇಸ್ರೊ ತಿಳಿಸಿದೆ. ಭೂ ಪರಿವೀಕ್ಷಣೆ ಡೇಟಾಗಾಗಿ ಇಸ್ರೊದ 'NavIC', 'ವೆಬ್ ಸೇವೆಗಳು', 'API', 'ಮ್ಯಾಪ್ ಮೈ ಇಂಡಿಯಾ', 'ಭುವನ್', 'VEDAS' ಮತ್ತು 'MOSDAC 'ಗಳನ್ನು ಬಳಸಿಕೊಂಡು ಜಂಟಿಯಾಗಿ ಸ್ಥಳಗಳ ವಿವರ ಒದಗಿಸುವ ಉತ್ತಮ ಮ್ಯಾಪ್ ಸೇವೆ ಒದಗಿಸಲು ಮ್ಯಾಪ್ ಮೈ ಇಂಡಿಯಾ ಜೊತೆಗಿನಒಪ್ಪಂದ ನೆರವಾಗುತ್ತದೆ ಎಂದು ಇಸ್ರೊ ತಿಳಿಸಿದೆ.
ಕೇಂದ್ರ ಸರಕಾರದ ಅಧಿಕೃತ ಮ್ಯಾಪ್ ಬಳಸುವ ಮ್ಯಾಪ್ ಮೈ ಇಂಡಿಯಾ, ಭಾರತದ ನೈಜ ಸಾರ್ವಭೌಮತೆಯನ್ನು ಪ್ರದರ್ಶಿಸುವ ಭಾರತೀಯ ಕಂಪನಿಯಾಗಿದೆ. ಮ್ಯಾಫ್ಸ್, ಆ್ಯಫ್ಸ್ ಮತ್ತು ಸೇವೆಗಳು ಇನ್ನು ಮುಂದೆ ಇಸ್ರೊದ ಬೃಹತ್ ಛಾಯಾಚಿತ್ರ ಮತ್ತು ಭೂಪರೀಕ್ಷಣೆ ಸ್ಯಾಟಲೈಟ್ ಡೇಟಾ ಜತೆ ಏಕೀಕರಣಗೊಳ್ಳಲಿವೆ ಎಂದು ಮ್ಯಾಪ್ ಮೈ ಇಂಡಿಯಾ ತಿಳಿಸಿದೆ.
ವಿದೇಶಿ ಸಂಸ್ಥೆಯಗಳು ಉಚಿತ ಸೇವೆ ಹೆಸರಿನಲ್ಲಿ ಬಳಕೆದಾರರ ಖಾಸಗಿ ಮಾಹಿತಿ, ಓಡಾಟ ಮತ್ತು ಲೊಕೇಶನ್ ಅನ್ನು ಮಾರಿಕೊಳ್ಳುತ್ತವೆ. ಖಾಸಗಿತನಕ್ಕೆ ಧಕ್ಕೆ ತರುವ ದೃಷ್ಠಿಯಿಂದ ಇದು ಒಳ್ಳೆಯ ಕ್ರಮವಲ್ಲ. ಆದರೆ, ನಮ್ಮದು ಖಾಸಗಿತನಕ್ಕೆ ಧಕ್ಕೆಯಾಗದಂತೆ ಜಾಹೀರಾತು ಬಿಸಿನೆಸ್ ಮಾಡೆಲ್ ಒಳಗೊಂಡಿರದ ಸುರಕ್ಷಿತ ಮ್ಯಾಪ್ ಆಗಿದೆ ಎಂದು ಮ್ಯಾಪ್ ಮೈ ಇಂಡಿಯಾ ಸಿಇಒ ರೋಹನ್ ವರ್ಮಾ ಹೇಳಿದ್ದಾರೆ.
This News Article is a Copy of GIZBOT
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 12:58 pm
Mangalore Correspondent
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm