ಬ್ರೇಕಿಂಗ್ ನ್ಯೂಸ್
13-02-21 02:59 pm Source: GIZBOT Manthesh ಡಿಜಿಟಲ್ ಟೆಕ್
ಗೂಗಲ್ ಮ್ಯಾಪ್ ಅಪ್ಲಿಕೇಶನ್ಗೆ ಬದಲಾಗಿ ಸ್ವದೇಶಿ ಮ್ಯಾಪ್ ಸೇವೆ ಅಭಿವೃದ್ಧಿ ಪಡಿಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ISRO) ಮತ್ತು ಮ್ಯಾಪ್ ಮೈ ಇಂಡಿಯಾ ಸಂಸ್ಥೆಗಳು ಒಪ್ಪಂದ ಮಾಡಿಕೊಂಡಿವೆ.
ಸ್ವದೇಶಿ ಮ್ಯಾಪ್ ಸೇವೆ ಅಭಿವೃದ್ಧಿಯಿಂದ ಮ್ಯಾಪ್, ಜಿಯೊ ಲೊಕೇಶನ್, ನ್ಯಾವಿಗೇಷನ್ ಸೇರಿದಂತೆ ಮ್ಯಾಪ್ ಸೇವೆಗಳಿಗೆ ವಿದೇಶಿ ಕಂಪನಿಗಳನ್ನು ಅವಲಂಬಿಸುವುದು ತಪ್ಪುತ್ತದೆ. ಇಸ್ರೊದ ಭೂ ಪರಿವೀಕ್ಷಣೆ ಡೇಟಾ, ಸ್ಯಾಟಲೈಟ್ ಫೋಟೊಗಳನ್ನು ಬಳಸಿಕೊಳ್ಳುವ ಮೂಲಕ ಉತ್ತಮ ಗುಣಮಟ್ಟದ ಮ್ಯಾಪ್ ಸೇವೆ ನೀಡಲು ಸಾಧ್ಯವಾಗುತ್ತದೆ. ಆತ್ಮನಿರ್ಭರ ಭಾರತ ಹಾದಿಯಲ್ಲಿ ಇದು ಮಹತ್ವದ ಮೈಲಿಗಲ್ಲು ಎಂದು ಮ್ಯಾಪ್ ಮೈ ಇಂಡಿಯಾ ಸಿಇಒ ರೋಹನ್ ವರ್ಮಾ ಹೇಳಿದ್ದಾರೆ.

ಮ್ಯಾಪ್ ಮೈ ಇಂಡಿಯಾ ಮಾಲೀಕತ್ವ ಹೊಂದಿರುವ ಸಿ.ಇ. ಇನ್ಫೋ ಸಿಸ್ಟಮ್ಸ್ ಪ್ರೈ.ಲಿ. ಮತ್ತು ಬಾಹ್ಯಾಕಾಶ ಇಲಾಖೆ ಫೆ.11ರಂದು ಒಪ್ಪಂದ ಮಾಡಿಕೊಂಡಿವೆ ಎಂದು ಇಸ್ರೊ ತಿಳಿಸಿದೆ. ಭೂ ಪರಿವೀಕ್ಷಣೆ ಡೇಟಾಗಾಗಿ ಇಸ್ರೊದ 'NavIC', 'ವೆಬ್ ಸೇವೆಗಳು', 'API', 'ಮ್ಯಾಪ್ ಮೈ ಇಂಡಿಯಾ', 'ಭುವನ್', 'VEDAS' ಮತ್ತು 'MOSDAC 'ಗಳನ್ನು ಬಳಸಿಕೊಂಡು ಜಂಟಿಯಾಗಿ ಸ್ಥಳಗಳ ವಿವರ ಒದಗಿಸುವ ಉತ್ತಮ ಮ್ಯಾಪ್ ಸೇವೆ ಒದಗಿಸಲು ಮ್ಯಾಪ್ ಮೈ ಇಂಡಿಯಾ ಜೊತೆಗಿನಒಪ್ಪಂದ ನೆರವಾಗುತ್ತದೆ ಎಂದು ಇಸ್ರೊ ತಿಳಿಸಿದೆ.
ಕೇಂದ್ರ ಸರಕಾರದ ಅಧಿಕೃತ ಮ್ಯಾಪ್ ಬಳಸುವ ಮ್ಯಾಪ್ ಮೈ ಇಂಡಿಯಾ, ಭಾರತದ ನೈಜ ಸಾರ್ವಭೌಮತೆಯನ್ನು ಪ್ರದರ್ಶಿಸುವ ಭಾರತೀಯ ಕಂಪನಿಯಾಗಿದೆ. ಮ್ಯಾಫ್ಸ್, ಆ್ಯಫ್ಸ್ ಮತ್ತು ಸೇವೆಗಳು ಇನ್ನು ಮುಂದೆ ಇಸ್ರೊದ ಬೃಹತ್ ಛಾಯಾಚಿತ್ರ ಮತ್ತು ಭೂಪರೀಕ್ಷಣೆ ಸ್ಯಾಟಲೈಟ್ ಡೇಟಾ ಜತೆ ಏಕೀಕರಣಗೊಳ್ಳಲಿವೆ ಎಂದು ಮ್ಯಾಪ್ ಮೈ ಇಂಡಿಯಾ ತಿಳಿಸಿದೆ.

ವಿದೇಶಿ ಸಂಸ್ಥೆಯಗಳು ಉಚಿತ ಸೇವೆ ಹೆಸರಿನಲ್ಲಿ ಬಳಕೆದಾರರ ಖಾಸಗಿ ಮಾಹಿತಿ, ಓಡಾಟ ಮತ್ತು ಲೊಕೇಶನ್ ಅನ್ನು ಮಾರಿಕೊಳ್ಳುತ್ತವೆ. ಖಾಸಗಿತನಕ್ಕೆ ಧಕ್ಕೆ ತರುವ ದೃಷ್ಠಿಯಿಂದ ಇದು ಒಳ್ಳೆಯ ಕ್ರಮವಲ್ಲ. ಆದರೆ, ನಮ್ಮದು ಖಾಸಗಿತನಕ್ಕೆ ಧಕ್ಕೆಯಾಗದಂತೆ ಜಾಹೀರಾತು ಬಿಸಿನೆಸ್ ಮಾಡೆಲ್ ಒಳಗೊಂಡಿರದ ಸುರಕ್ಷಿತ ಮ್ಯಾಪ್ ಆಗಿದೆ ಎಂದು ಮ್ಯಾಪ್ ಮೈ ಇಂಡಿಯಾ ಸಿಇಒ ರೋಹನ್ ವರ್ಮಾ ಹೇಳಿದ್ದಾರೆ.
This News Article is a Copy of GIZBOT
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
13-06-26 05:28 pm
HK News Staffer
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
13-06-26 09:17 pm
HK News Staffer
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm