ಬ್ರೇಕಿಂಗ್ ನ್ಯೂಸ್
01-05-21 03:24 pm Headline Karnataka News Network ಡಿಜಿಟಲ್ ಟೆಕ್
Photo credits : Gadgets
ಇಡೀ ವಿಶ್ವ ಕೊರೊನಾ ಎರಡನೇ ಅಲೆ ವಿರುದ್ಧ ಹೋರಾಡುತ್ತಿದೆ. ಅದರಲ್ಲೂ ಈ ಬಾರಿ ಕೊರೊನಾಕ್ಕೆ ಅತ್ಯಂತ ಹೆಚ್ಚು ತತ್ತರಿಸಿರುವ ರಾಷ್ಟ್ರ ಭಾರತ. ಬರೀ ಕೊರೊನಾ ಸೋಂಕು ಉಲ್ಬಣಗೊಂಡಿರುವುದಷ್ಟೇ ಅಲ್ಲ, ಅದರೊಂದಿಗೆ ಆಕ್ಸಿಜನ್ ಅಭಾವ, ಬೆಡ್ಗಳ ಕೊರತೆಯಂಥ ಸಮಸ್ಯೆಗಳೂ ತಲೆದೋರಿವೆ. ಅದರ ಮಧ್ಯೆ ಇಂದು ಮೂರನೇ ಹಂತದ ಲಸಿಕೆ ವಿತರಣೆ ಶುರುವಾಗಬೇಕಿತ್ತು. ಆದರೆ ಕೊವಿಡ್ 19 ವ್ಯಾಕ್ಸಿನ್ಗಳ ಅಭಾವ ಉಂಟಾಗಿರುವ ಕಾರಣಕ್ಕೆ ಇಂದು ಎಲ್ಲ ರಾಜ್ಯಗಳಲ್ಲೂ ಲಸಿಕೆ ನೀಡಲು ಸಾಧ್ಯವಾಗುತ್ತಿಲ್ಲ.

ಆದರೆ ಮಾರಣಾಂತಿಕವಾದ ಈ ವೈರಸ್ನಿಂದ ಪಾರಾಗಲು ಲಸಿಕೆ ಪಡೆಯುವುದೊಂದೇ ಮಾರ್ಗ ಎಂದು ವಿಶ್ವ ಆರೋಗ್ಯ ಸಂಸ್ಥೆ ಸೇರಿ, ಹಲವು ಪ್ರಮುಖ ತಜ್ಞರು, ಸಂಶೋಧಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜನರು ಸ್ವಯಂ ಪ್ರೇರಿತರಾಗಿ ಬಂದು ಲಸಿಕೆ ಪಡೆಯಬೇಕು ಎಂದು ಅರಿವು ಮೂಡಿಸುತ್ತಿದ್ದಾರೆ. ಇದೀಗ ಗೂಗಲ್ ಕೂಡ ತನ್ನ ಡೂಡಲ್ ಮೂಲಕ ಲಸಿಕೆ ಪಡೆಯುವಂತೆ ಜನರನ್ನು ಪ್ರೇರೇಪಿಸುತ್ತಿದೆ.

ವಿಶ್ವದಾದ್ಯಂತ ಅನೇಕ ರಾಷ್ಟ್ರಗಳಲ್ಲಿ ಕೊವಿಡ್ 19 ಲಸಿಕೆ ಅಭಿಯಾನ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದು ಇನ್ನಷ್ಟು ವೇಗವಾಗಿ ನಡೆದರೆ ಇನ್ನೂ ಒಳಿತು ಎಂಬುದು ತಜ್ಞರ ಅನಿಸಿಕೆ. ಕಳೆದವರ್ಷ ಕೊರೊನಾ ಸೋಂಕು ಶುರುವಾದಾಗಿನಿಂದಲೂ ಗೂಗಲ್ ತನ್ನ ಡೂಡಲ್ ಮೂಲಕ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. ಜನರನ್ನು ಎಚ್ಚರಿಸುತ್ತಿದೆ. ಇದೀಗ ಲಸಿಕೆಯನ್ನು ಪಡೆಯಲು ಪ್ರೇರೇಪಿಸಿದೆ. GOOGLE ಎಂಬ ಶಬ್ದದ ಎಲ್ಲ ಅಕ್ಷರಗಳಿಗೂ ಫೇಸ್ ಮಾಸ್ಕ್ ಹಾಕಿ, ಲಸಿಕೆ ಪಡೆದ ಸಂಕೇತವಾದ ಬ್ಯಾಂಡ್ ತೊಟ್ಟಿರುವಂತೆ ಚಿತ್ರಿಸಲಾಗಿದೆ. ಅಷ್ಟೇ ಅಲ್ಲ ಎಲ್ಲ ಅಕ್ಷರಗಳೂ ಲಸಿಕೆ ಪಡೆದು ತುಂಬ ಖುಷಿಯಾಗಿರುವಂತೆ ರಚಿಸಲಾಗಿದೆ.

ಹಾಗೇ, ಈ ಡೂಡಲ್ ಮೇಲೆ ಕ್ಲಿಕ್ ಮಾಡಿದರೆ ಲಸಿಕೆ ಪಡೆಯಿರಿ, ಮಾಸ್ಕ್ ಧರಿಸಿ, ಜೀವ ರಕ್ಷಿಸಿಕೊಳ್ಳಿ ಎಂಬ ಸಂದೇಶವನ್ನು ನೋಡಬಹುದು.
Google displayed a new doodle across many countries on May 1 to promote vaccination against COVID-19. The doodle was visible on the search engine across India, Canada, the United States, United Kingdom, Pakistan and Indonesia, among other countries.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm