ಬ್ರೇಕಿಂಗ್ ನ್ಯೂಸ್
25-06-21 03:50 pm GIZBOT Mantesh ಡಿಜಿಟಲ್ ಟೆಕ್
ಕೋವಿಡ್ ಸಾಂಕ್ರಾಮಿಕ ವಿರುದ್ಧ ಹೋರಾಡಲು ಲಸಿಕೆ ಪ್ರಮುಖ ಅಸ್ತ್ರವಾಗಿದೆ. ದೇಶದಲ್ಲಿ ಲಸಿಕೆ ಅಭಿಯಾನ ಚಾಲ್ತಿ ಇದೆ. ಲಸಿಕೆ ಪಡೆಯಲು ಜನರು ಕೋವಿನ್ ವೆಬ್ಸೈಟ್ನಲ್ಲಿ ಹೆಸರು ನೋಂದಾಯಿಸಲು ಅವಕಾಶ ನೀಡಿದೆ. ಕೋವಿನ್-CoWIN ಆಪ್ ಈಗ ತನ್ನ ಬಳಕೆದಾರರಿಗೆ ತಮ್ಮ ಪಾಸ್ಪೋರ್ಟ್ ಸಂಖ್ಯೆಯನ್ನು ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರದಲ್ಲಿ ಸೇರಿಸಲು ನೀಡುತ್ತಿದೆ. ಕೋವಿನ್ ಲಸಿಕೆ ಪ್ರಮಾಣಪತ್ರಗಳನ್ನು ಪ್ರಯಾಣದ ಸಮಯದಲ್ಲಿ ಬಳಸಲಾಗುತ್ತಿದೆ ಮತ್ತು ಹಲವಾರು ಇತರ ಆವರಣಗಳ ಪ್ರವೇಶಕ್ಕೆ ಸಹಾಯ ಮಾಡುತ್ತದೆ.

ಈಗ ನೀವು ನಿಮ್ಮ ವ್ಯಾಕ್ಸಿನೇಷನ್ ಪ್ರಮಾಣಪತ್ರದಲ್ಲಿ ನಿಮ್ಮ ಪಾಸ್ಪೋರ್ಟ್ ಸಂಖ್ಯೆಯನ್ನು ನವೀಕರಿಸಬಹುದು. ಎಂದು ಆರೋಗ್ಯಾ ಸೇತು ಅಪ್ಲಿಕೇಶನ್ನ ಅಧಿಕೃತ ಹ್ಯಾಂಡಲ್ ಟ್ವೀಟ್ ಮಾಡಿದ್ದಾರೆ. ಈ ತಿಂಗಳ ಆರಂಭದಲ್ಲಿ, ಕೇಂದ್ರವು ಕೋವಿಡ್ -19 ಲಸಿಕೆಗಾಗಿ ಹೊಸ ಮಾರ್ಗಸೂಚಿಗಳನ್ನು ಘೋಷಿಸಿತ್ತು, ಶಿಕ್ಷಣ, ಉದ್ಯೋಗಗಳಿಗಾಗಿ ವಿದೇಶಕ್ಕೆ ಪ್ರಯಾಣಿಸುವವರು ಅಥವಾ ಟೋಕಿಯೊ ಒಲಿಂಪಿಕ್ ಕ್ರೀಡಾಕೂಟಕ್ಕಾಗಿ ಭಾರತೀಯ ತುಕಡಿಯ ಭಾಗವಾಗಿ, ಅವರ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳನ್ನು ತಮ್ಮ ಪಾಸ್ಪೋರ್ಟ್ಗೆ ಲಿಂಕ್ ಮಾಡಬೇಕಾಗುತ್ತದೆ ಎಂದು ತಿಳಿಸಿದೆ.

ಕೋವಿನ್ ವೆಬ್ಸೈಟ್ - cowin.gov.in ಮೂಲಕ ಬಳಕೆದಾರರು ತಮ್ಮ ಪಾಸ್ಪೋರ್ಟ್ ವಿವರಗಳನ್ನು ಸೇರಿಸಬಹುದು. ಕೋವಿನ್ ಮೂಲಕ ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿ ನೀವು ಪಾಸ್ಪೋರ್ಟ್ ವಿವರಗಳನ್ನು ಹೇಗೆ ಸೇರಿಸಬಹುದು. ಅದು ಹೇಗೆ ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಕೋವಿಡ್ -19 ಲಸಿಕೆ ಪ್ರಮಾಣಪತ್ರ: ಕೋವಿನ್ ಮೂಲಕ ಪಾಸ್ಪೋರ್ಟ್ ವಿವರಗಳನ್ನು ಹೇಗೆ ಸೇರಿಸುವುದು
ಹಂತ 1: CoWin - cowin.gov.in ನ ಅಧಿಕೃತ ಪೋರ್ಟಲ್ಗೆ ಭೇಟಿ ನೀಡಿ.
ಹಂತ 2: 'Raise an issue' ಆಯ್ಕೆಯನ್ನು ಟ್ಯಾಪ್ ಮಾಡಿ.
ಹಂತ 3: ಈಗ, "ಪಾಸ್ಪೋರ್ಟ್" ಆಯ್ಕೆಯನ್ನು ಟ್ಯಾಪ್ ಮಾಡಿ ಮತ್ತು ಡ್ರಾಪ್ ಡೌನ್ ಮೆನುವಿನಿಂದ ವ್ಯಕ್ತಿಯನ್ನು ಆಯ್ಕೆ ಮಾಡಿ.
ಹಂತ 4: ನಿಮ್ಮ ಪಾಸ್ಪೋರ್ಟ್ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿ.
ಹಂತ 5: ನೀವು ಸೆಕೆಂಡುಗಳಲ್ಲಿ ಹೊಸ ಪ್ರಮಾಣಪತ್ರವನ್ನು ಸ್ವೀಕರಿಸುತ್ತೀರಿ.
ಹಂತ 6: ಒಂದು ವೇಳೆ, ಲಸಿಕೆ ಪ್ರಮಾಣಪತ್ರ ಮತ್ತು ಪಾಸ್ಪೋರ್ಟ್ನಲ್ಲಿನ ಹೆಸರು ಹೊಂದಿಕೆಯಾಗದಿದ್ದರೆ, ನೀವು ಹೆಸರು ತಿದ್ದುಪಡಿಗಾಗಿ ಸಹ ವಿನಂತಿಸಬಹುದು

ಕೋವಿನ್ ಮೂಲಕ ಆನ್ಲೈನ್ನಲ್ಲಿ ವೈಯಕ್ತಿಕ ವಿವರಗಳನ್ನು ಹೇಗೆ ಸರಿಪಡಿಸಲು ಹೀಗೆ ಮಾಡಿ:
* CoWin-- cowin.gov.in ನ ಅಧಿಕೃತ ಪೋರ್ಟಲ್ಗೆ ಭೇಟಿ ನೀಡಿ.
* ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ಸೈನ್ ಇನ್ ಮಾಡಿ.
* ಈಗ, ಮೇಲ್ಭಾಗದಲ್ಲಿರುವ 'Raise an issue' ಆಯ್ಕೆಯನ್ನು ಟ್ಯಾಪ್ ಮಾಡಿ ಮತ್ತು ಸದಸ್ಯರ ಹೆಸರನ್ನು ಆರಿಸಿ.
* 'ತಿದ್ದುಪಡಿ ಪ್ರಮಾಣಪತ್ರ' ಆಯ್ಕೆಯನ್ನು ಟ್ಯಾಪ್ ಮಾಡಿ.
* ನೀವು ತಿದ್ದುಪಡಿ ಮಾಡಬೇಕಾದ ಆಯ್ಕೆಗಳನ್ನು ಆಯ್ಕೆಮಾಡಿ.
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm