ಬ್ರೇಕಿಂಗ್ ನ್ಯೂಸ್
14-07-21 11:17 am GIZBOT Mantesh ಡಿಜಿಟಲ್ ಟೆಕ್
ಇ-ಕಾಮರ್ಸ್ ದೈತ್ಯ ಅಮೆಜಾನ್ ಒಂದಿಲ್ಲೊಂದು ಆಫರ್ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತ ಸಾಗಿದೆ. ಮುಖ್ಯವಾಗಿ ಸ್ಮಾರ್ಟ್ಫೋನ್ಗಳಿಗೆ ವಿಶೇಷ ಸೇಲ್ ಆಯೋಜಿಸುತ್ತದೆ. ಅದೇ ರೀತಿ ಈಗ ಆಪಲ್ ಡೇಸ್ ಸೇಲ್ ಆಯೋಜಿಸಿದ್ದು, ಗ್ರಾಹಕರಿಗೆ ಭರ್ಜರಿ ಕೊಡುಗೆ ಘೋಷಿಸಿದೆ. ಈ ಸೇಲ್ನಲ್ಲಿ ಆಯ್ದ ಐಫೋನ್ಗಳಿಗೆ ಆಕರ್ಷಕ ರಿಯಾಯಿತಿ ತಿಳಿಸಿದೆ. ಅವುಗಳಲ್ಲಿ ಆಪಲ್ನ ಇತ್ತೀಚಿಗಿನ ಹೊಸ ಐಫೋನ್ 12 ಭರ್ಜರಿ ಡಿಸ್ಕೌಂಟ್ ಪ್ರೈಸ್ ಟ್ಯಾಗ್ನಲ್ಲಿ ಕಾಣಿಸಿಕೊಂಡಿದೆ.
ಹೌದು, ಅಮೆಜಾನ್ ಇ-ಕಾಮರ್ಸ್ ತಾಣವು ಆಯೋಜಿಸಿರುವ ಆಪಲ್ ಡೇಸ್ ಸೇಲ್ ಸದ್ಯ ಚಾಲ್ತಿ ಇದೆ. ಈ ಸೇಲ್ ಮೇಳವು ಇದೇ ಜುಲೈ 17 ರ ವರೆಗೂ ಚಾಲ್ತಿ ಇರಲಿದೆ. ಸೇಲ್ನಲ್ಲಿ ಐಫೋನ್ 12 ಫೋನ್ 9000ರೂ. ರಿಯಾಯಿತಿಯಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಗ್ರಾಹಕರು ಐಫೋನ್ 12 ಫೋನ್ ಅನ್ನು 9,000 ರೂ.ಗಳ ರಿಯಾಯಿತಿಯೊಂದಿಗೆ ಪಡೆಯಬಹುದು. ಇದಲ್ಲದೆ, ಗ್ರಾಹಕರು ಎಚ್ಡಿಎಫ್ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ಗಳ ವಹಿವಾಟಿನಲ್ಲಿ 6,000 ರೂ.ಗಳವರೆಗೆ ಹೆಚ್ಚುವರಿ ರಿಯಾಯಿತಿ ಪಡೆಯಬಹುದು ಎಂದು ಕಂಪನಿ ತಿಳಿಸಿದೆ.

79,900ರೂ. ಬೆಲೆಯ ಐಫೋನ್ 12 ಫೋನ್ 64 ಜಿಬಿ ಸ್ಟೋರೇಜ್ ಮಾಡೆಲ್ ವೈಟ್ ಕಲರ್ ರೂಪಾಂತರವು ಆಪಲ್ ಡೇಸ್ ಸೇಲ್ನಲ್ಲಿ ರಿಯಾಯಿತಿಯ ನಂತರ 70,900ರೂ.ಗಳ ಪ್ರೈಸ್ ಟ್ಯಾಗ್ ಪಡೆದಿದೆ. ಹಾಗಾದರೇ ಐಫೋನ್ 12 ಫೋನಿನ ಫೀಚರ್ಸ್ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಐಫೋನ್ 12 ಫೀಚರ್ಸ್
ಐಫೋನ್ 12 OLED ಡಿಸ್ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್ ಕೋರ್ ಪ್ರೊಸೆಸರ್ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ. ನೈಟ್ ಮೋಡ್ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ.

ಹಾಗೆಯೇ ಆಪಲ್ ಡೇಸ್ ಸೇಲ್ನಲ್ಲಿ ಕೆಲವು ಹಳೆಯ ಐಫೋನ್ಗಳ ಮೇಲೆ ರಿಯಾಯಿತಿ ಘೋಷಿಸಲಾಗಿದೆ. ಐಫೋನ್ 12 ಜೊತೆಗೆ ಇ-ಕಾಮರ್ಸ್ ಪ್ಲಾಟ್ಫಾರ್ಮ್ ಐಫೋನ್ 11, ಐಫೋನ್ ಎಕ್ಸ್ಆರ್, ಐಫೋನ್ ಎಕ್ಸ್, ಐಫೋನ್ ಎಕ್ಸ್ಎಸ್ ಮ್ಯಾಕ್ಸ್, ಐಫೋನ್ 8 ಮುಂತಾದ ಫೋನ್ಗಳಿಗೂ ರಿಯಾಯಿತಿ ನೀಡುತ್ತಿದೆ. ಇದರೊಂದಿಗೆ ಹೆಚ್ಚುವರಿಯಾಗಿ, ಆಪಲ್ ಡೇಸ್ ಸೇಲ್ನಲ್ಲಿ ಹಲವಾರು ಆಪಲ್ ಐಪ್ಯಾಡ್ ಮತ್ತು ಮ್ಯಾಕ್ಬುಕ್ ಮಾದರಿಗಳು ದೊಡ್ಡ ರಿಯಾಯಿತಿ ಕೊಡುಗೆಯೊಂದಿಗೆ ಲಭ್ಯವಿದೆ. ಇ-ಕಾಮರ್ಸ್ ಪ್ಲಾಟ್ಫಾರ್ಮ್ನಲ್ಲಿ ಜುಲೈ 17 ರವರೆಗೆ ಮಾರಾಟ ಮುಂದುವರಿಯುತ್ತದೆ.
(Kannada Copy of Gizbot Kannada)
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm