ಬ್ರೇಕಿಂಗ್ ನ್ಯೂಸ್
16-07-21 12:55 pm GIZBOT Mutthuraju H M ಡಿಜಿಟಲ್ ಟೆಕ್
ಜನಪ್ರಿಯ ಮೆಸೇಜಿಂಗ್ ವಾಟ್ಸಾಪ್ ಭಾರತದ 2021 ರ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ಅನುಸಾರವಾಗಿ ತನ್ನ ಮೊದಲ ಮಧ್ಯವರ್ತಿ ಮಾರ್ಗಸೂಚಿಗಳ ವರದಿಯನ್ನು ಪ್ರಕಟಿಸಿದೆ. ಮೇ 15 ರಿಂದ ಜೂನ್ 15 ರ ನಡುವೆ ಹೊಸ ಐಟಿ ನಿಯಮದ ಅನ್ವಯ 29 ಲಕ್ಷ ಖಾತೆಗಳನ್ನು ನಿಷೇಧಿಸಲಾಗಿದೆ ಅನ್ನೊ ಮಾಹಿತಿಯನ್ನು ವಾಟ್ಸಾಪ್ ಬಹಿರಂಗಪಡಿಸಿದೆ. ಅಲ್ಲದೆ ವಾಟ್ಸಾಪ್ ಖಾತೆಗಳ ನಿಷೇಧದ ಬಗ್ಗೆ ಕೆಲವು ವಿವರಗಳನ್ನು ಹಂಚಿಕೊಂಡಿದೆ.

ಹೌದು, ಭಾರತದಲ್ಲಿ ಜಾರಿಯಾದ ಹೊಸ ಮಾಹಿತಿ ತಂತ್ರಜ್ಞಾನದ ನಿಯಮ 2021ರ ಅನ್ವಯ ಮಾರ್ಗಸೂಚಿ ವರದಿಯನ್ನು ಪ್ರಕಟಿಸಿದೆ. ಇದರಲ್ಲಿ 29 ಲಕ್ಷ ವಾಟ್ಸಾಪ್ ಖಾತೆಗಳನ್ನು ಬ್ಲಾಕ್ ಮಾಡಿರುವುದಾಗಿ ಹೇಳಿದೆ. ಅಂತಹ ಖಾತೆ ನಿಷೇಧದ ಶೇಕಡಾ 95 ಕ್ಕಿಂತಲೂ ಹೆಚ್ಚು ಸ್ವಯಂಚಾಲಿತ ಅಥವಾ ಬೃಹತ್ ಸಂದೇಶಗಳ ಅನಧಿಕೃತ ಬಳಕೆಯಿಂದಾಗಿ ಇದನ್ನು ಸ್ಪ್ಯಾಮ್ ಎಂದು ವರ್ಗೀಕರಿಸಬಹುದು. ಜಾಗತಿಕ ಮಾಸಿಕ ಸರಾಸರಿ ಸುಮಾರು 8 ಮಿಲಿಯನ್ ಖಾತೆಗಳನ್ನು ಪ್ರತಿ ತಿಂಗಳು ನಿಷೇಧಿಸಲಾಗಿದೆ ಎಎಂದಿದೆ. ಹಾಗಾದ್ರೆ ವಾಟ್ಸಾಪ್ ಹೊಸ ಐಟಿ ನಿಯಮದ ಅನ್ವಯ 29 ಲಕ್ಷ ಖಾತೆಗಳನ್ನು ಬ್ಲಾಕ್ ಮಾಡಿದ್ದು ಯಾಕೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ವಾಟ್ಸಾಪ್ 2021 ರ ಮೇ 15 ರಿಂದ ಜೂನ್ 15 ರವರೆಗೆ ವಿವಿಧ ವಲಯಗಳಿಂದ ಪಡೆದ ಕುಂದುಕೊರತೆಗಳ ವಿಘಟನೆಯನ್ನು ಹಂಚಿಕೊಂಡಿದೆ. ಮೊದಲ ಮಧ್ಯವರ್ತಿ ಮಾರ್ಗಸೂಚಿಗಳ ವರದಿಯ ಪ್ರಕಾರ, ಮೆಸೇಜಿಂಗ್ ಅಪ್ಲಿಕೇಶನ್ ಖಾತೆ ಬೆಂಬಲಕ್ಕಾಗಿ 70 ವಿನಂತಿಗಳನ್ನು ಮತ್ತು 204 ನಿಷೇಧ ಮೇಲ್ಮನವಿಗಳನ್ನು ಸ್ವೀಕರಿಸಿದೆ. ಇದರಲ್ಲಿ ಅಪ್ಲಿಕೇಶನ್ 63 ಖಾತೆಗಳನ್ನು ನಿಷೇಧಿಸಿದೆ. ಕುಂದುಕೊರತೆ ಎಂದು ಪರಿಗಣಿಸಿದ ಪ್ರಕರಣಗಳಿಗೆ ವಾಟ್ಸಾಪ್ ಸ್ಪಂದಿಸಿದೆ. ಒಮ್ಮೆ ಖಾತೆಯನ್ನು ನಿಷೇಧಿಸಿದರೆ ಅಥವಾ ದೂರಿನ ಪರಿಣಾಮವಾಗಿ ಹಿಂದೆ ನಿಷೇಧಿಸಲಾದ ಖಾತೆಯನ್ನು ಮರುಸ್ಥಾಪಿಸಿದರೆ ಖಾತೆಯನ್ನು ಕಾರ್ಯಗತಗೊಳಿಸಲಾಗುತ್ತದ ಎಂದು ವಾಟ್ಸಾಪ್ ತನ್ನ ವರದಿಯಲ್ಲಿ ಹೇಳಿದೆ.

ಇದಲ್ಲದೆ, ಅದು ತನ್ನ ಪ್ಲಾಟ್ಫಾರ್ಮ್ನಲ್ಲಿ ದುರುಪಯೋಗ ಪತ್ತೆಹಚ್ಚುವಿಕೆಯನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ವಿವರಿಸುತ್ತದೆ. "ಖಾತೆಯ ಜೀವನಶೈಲಿಯ ಮೂರು ಹಂತಗಳಲ್ಲಿ ನಿಂದನೆ ಪತ್ತೆಹಚ್ಚುವಿಕೆ ಕಾರ್ಯನಿರ್ವಹಿಸುತ್ತದೆ. ಅಂದರೆ ನೋಂದಣಿಯಲ್ಲಿ, ಸಂದೇಶ ಕಳುಹಿಸುವ ಸಮಯದಲ್ಲಿ ಮತ್ತು ಋಣಾತ್ಮಕ ಪ್ರತಿಕ್ರಿಯೆಗೆ ಪ್ರತಿಕ್ರಿಯೆಯಾಗಿ, ನಾವು ಬಳಕೆದಾರರ ರೂಪದಲ್ಲಿ ಸ್ವೀಕರಿಸುತ್ತೇವೆ ಎಂದು ಹೇಳಿದೆ. ಮೆಸೇಜಿಂಗ್ ಅಪ್ಲಿಕೇಶನ್ ನಿಷೇಧಿತ ಖಾತೆಗಳಲ್ಲಿ ಭಾರತೀಯ ಸಂಖ್ಯೆಗಳನ್ನು ಒಳಗೊಂಡಿದೆ ಎಂದು ಸ್ಪಷ್ಟಪಡಿಸಿದೆ.
(Kannada Copy of Gizbot Kannada)
12-09-26 05:56 pm
HK News Staffer
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
ಕಸ್ತೂರಿರಂಗನ್ ವರದಿ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶ...
11-09-26 05:50 pm
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm