ಬ್ರೇಕಿಂಗ್ ನ್ಯೂಸ್
16-07-21 12:55 pm GIZBOT Mutthuraju H M ಡಿಜಿಟಲ್ ಟೆಕ್
ಜನಪ್ರಿಯ ಮೆಸೇಜಿಂಗ್ ವಾಟ್ಸಾಪ್ ಭಾರತದ 2021 ರ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ಅನುಸಾರವಾಗಿ ತನ್ನ ಮೊದಲ ಮಧ್ಯವರ್ತಿ ಮಾರ್ಗಸೂಚಿಗಳ ವರದಿಯನ್ನು ಪ್ರಕಟಿಸಿದೆ. ಮೇ 15 ರಿಂದ ಜೂನ್ 15 ರ ನಡುವೆ ಹೊಸ ಐಟಿ ನಿಯಮದ ಅನ್ವಯ 29 ಲಕ್ಷ ಖಾತೆಗಳನ್ನು ನಿಷೇಧಿಸಲಾಗಿದೆ ಅನ್ನೊ ಮಾಹಿತಿಯನ್ನು ವಾಟ್ಸಾಪ್ ಬಹಿರಂಗಪಡಿಸಿದೆ. ಅಲ್ಲದೆ ವಾಟ್ಸಾಪ್ ಖಾತೆಗಳ ನಿಷೇಧದ ಬಗ್ಗೆ ಕೆಲವು ವಿವರಗಳನ್ನು ಹಂಚಿಕೊಂಡಿದೆ.

ಹೌದು, ಭಾರತದಲ್ಲಿ ಜಾರಿಯಾದ ಹೊಸ ಮಾಹಿತಿ ತಂತ್ರಜ್ಞಾನದ ನಿಯಮ 2021ರ ಅನ್ವಯ ಮಾರ್ಗಸೂಚಿ ವರದಿಯನ್ನು ಪ್ರಕಟಿಸಿದೆ. ಇದರಲ್ಲಿ 29 ಲಕ್ಷ ವಾಟ್ಸಾಪ್ ಖಾತೆಗಳನ್ನು ಬ್ಲಾಕ್ ಮಾಡಿರುವುದಾಗಿ ಹೇಳಿದೆ. ಅಂತಹ ಖಾತೆ ನಿಷೇಧದ ಶೇಕಡಾ 95 ಕ್ಕಿಂತಲೂ ಹೆಚ್ಚು ಸ್ವಯಂಚಾಲಿತ ಅಥವಾ ಬೃಹತ್ ಸಂದೇಶಗಳ ಅನಧಿಕೃತ ಬಳಕೆಯಿಂದಾಗಿ ಇದನ್ನು ಸ್ಪ್ಯಾಮ್ ಎಂದು ವರ್ಗೀಕರಿಸಬಹುದು. ಜಾಗತಿಕ ಮಾಸಿಕ ಸರಾಸರಿ ಸುಮಾರು 8 ಮಿಲಿಯನ್ ಖಾತೆಗಳನ್ನು ಪ್ರತಿ ತಿಂಗಳು ನಿಷೇಧಿಸಲಾಗಿದೆ ಎಎಂದಿದೆ. ಹಾಗಾದ್ರೆ ವಾಟ್ಸಾಪ್ ಹೊಸ ಐಟಿ ನಿಯಮದ ಅನ್ವಯ 29 ಲಕ್ಷ ಖಾತೆಗಳನ್ನು ಬ್ಲಾಕ್ ಮಾಡಿದ್ದು ಯಾಕೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ವಾಟ್ಸಾಪ್ 2021 ರ ಮೇ 15 ರಿಂದ ಜೂನ್ 15 ರವರೆಗೆ ವಿವಿಧ ವಲಯಗಳಿಂದ ಪಡೆದ ಕುಂದುಕೊರತೆಗಳ ವಿಘಟನೆಯನ್ನು ಹಂಚಿಕೊಂಡಿದೆ. ಮೊದಲ ಮಧ್ಯವರ್ತಿ ಮಾರ್ಗಸೂಚಿಗಳ ವರದಿಯ ಪ್ರಕಾರ, ಮೆಸೇಜಿಂಗ್ ಅಪ್ಲಿಕೇಶನ್ ಖಾತೆ ಬೆಂಬಲಕ್ಕಾಗಿ 70 ವಿನಂತಿಗಳನ್ನು ಮತ್ತು 204 ನಿಷೇಧ ಮೇಲ್ಮನವಿಗಳನ್ನು ಸ್ವೀಕರಿಸಿದೆ. ಇದರಲ್ಲಿ ಅಪ್ಲಿಕೇಶನ್ 63 ಖಾತೆಗಳನ್ನು ನಿಷೇಧಿಸಿದೆ. ಕುಂದುಕೊರತೆ ಎಂದು ಪರಿಗಣಿಸಿದ ಪ್ರಕರಣಗಳಿಗೆ ವಾಟ್ಸಾಪ್ ಸ್ಪಂದಿಸಿದೆ. ಒಮ್ಮೆ ಖಾತೆಯನ್ನು ನಿಷೇಧಿಸಿದರೆ ಅಥವಾ ದೂರಿನ ಪರಿಣಾಮವಾಗಿ ಹಿಂದೆ ನಿಷೇಧಿಸಲಾದ ಖಾತೆಯನ್ನು ಮರುಸ್ಥಾಪಿಸಿದರೆ ಖಾತೆಯನ್ನು ಕಾರ್ಯಗತಗೊಳಿಸಲಾಗುತ್ತದ ಎಂದು ವಾಟ್ಸಾಪ್ ತನ್ನ ವರದಿಯಲ್ಲಿ ಹೇಳಿದೆ.

ಇದಲ್ಲದೆ, ಅದು ತನ್ನ ಪ್ಲಾಟ್ಫಾರ್ಮ್ನಲ್ಲಿ ದುರುಪಯೋಗ ಪತ್ತೆಹಚ್ಚುವಿಕೆಯನ್ನು ಹೇಗೆ ನಿಭಾಯಿಸುತ್ತದೆ ಎಂಬುದನ್ನು ವಿವರಿಸುತ್ತದೆ. "ಖಾತೆಯ ಜೀವನಶೈಲಿಯ ಮೂರು ಹಂತಗಳಲ್ಲಿ ನಿಂದನೆ ಪತ್ತೆಹಚ್ಚುವಿಕೆ ಕಾರ್ಯನಿರ್ವಹಿಸುತ್ತದೆ. ಅಂದರೆ ನೋಂದಣಿಯಲ್ಲಿ, ಸಂದೇಶ ಕಳುಹಿಸುವ ಸಮಯದಲ್ಲಿ ಮತ್ತು ಋಣಾತ್ಮಕ ಪ್ರತಿಕ್ರಿಯೆಗೆ ಪ್ರತಿಕ್ರಿಯೆಯಾಗಿ, ನಾವು ಬಳಕೆದಾರರ ರೂಪದಲ್ಲಿ ಸ್ವೀಕರಿಸುತ್ತೇವೆ ಎಂದು ಹೇಳಿದೆ. ಮೆಸೇಜಿಂಗ್ ಅಪ್ಲಿಕೇಶನ್ ನಿಷೇಧಿತ ಖಾತೆಗಳಲ್ಲಿ ಭಾರತೀಯ ಸಂಖ್ಯೆಗಳನ್ನು ಒಳಗೊಂಡಿದೆ ಎಂದು ಸ್ಪಷ್ಟಪಡಿಸಿದೆ.
(Kannada Copy of Gizbot Kannada)
29-07-26 01:52 pm
HK News Staffer
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 01:53 pm
HK News Staffer
ಹಿಟ್& ರನ್ ಪ್ರಕರಣ ; ಕಾರು ಡಿಕ್ಕಿ ರಭಸಕ್ಕೆ ಎರಡೂ ಕ...
29-07-26 10:40 am
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm