ಬ್ರೇಕಿಂಗ್ ನ್ಯೂಸ್
16-09-21 11:15 am Gizbot, Mutthuraju H M ಡಿಜಿಟಲ್ ಟೆಕ್
ಸರ್ಕಾರದಿಂದ ಪೂರೈಕೆ ಆಗುವ ಆಹಾರ ಧಾನ್ಯಗಳನ್ನು ಪಡೆದುಕೊಳ್ಳಬೇಕಾದ್ರೆ ರೇಷನ್ ಕಾರ್ಡ್ ಅವಶ್ಯಕವಾಗಿದೆ. ಅಷ್ಟೇ ಅಲ್ಲ ಬಡತನ ರೇಖೆಗಿಂತ ಕೆಳಗಿರುವ, ಸಾಮಾಜಿಕವಾಗಿ ಹಿಂದುಳಿದಿರುವ ಹಾಗೂ ಮಧ್ಯಮವರ್ಗದ ಜನತೆಗೆ ಪಡಿತರ ಚೀಟಿ ಅತಿ ಅಗತ್ಯವಾಗಿದೆ. ಇನ್ನು ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ಪಡೆಯುವುದು, ತಿದ್ದುಪಡಿ ಮಾಡಿಸುವುದು, ಹೊಸದಾಗಿ ಹೆಸರು ಸೇರ್ಪಡೆ ಮಾಡಿಸಬೇಕಾದ ಸಂದರ್ಭ ಬಂದರೆ ಕೆಲವರಿಗೆ ಏನು ಮಾಡಬೇಕು ಅನ್ನೊದು ತಿಳಿದಿರುವುದಿಲ್ಲ.
ಹೌದು, ರೇಷನ್ ಕಾರ್ಡ್ಗೆ ನಿಮ್ಮ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡುವುದು? ಹೆಸರು ತಿದ್ದುಪಡಿ ಮಾಡಬೇಕಾದಾಗ ಕಚೇರಿಗೆ ಅಲೆದಾಡುವುದು ಕಿರಿಕಿರಿ ಎನಿಸಲಿದೆ. ಅದರಲ್ಲೂ ಪಡಿತರ ಚೀಟಿಯಲ್ಲಿ ಕುಟುಂಬದ ಸದಸ್ಯರ ಹೆಸರು ಸೇರಿಸುವುದು ಅತಿ ಮುಖ್ಯವಾಗಿರೊದ್ರಿಂದ ಈ ಕೆಲಸ ಮಾಡಲೇಬೇಕಾದ ಅನಿವಾರ್ಯತೆ ಕೂಡ ಇರುತ್ತೆ. ಆದರೆ ಏನು ಮಾಡೋದು ಕೆಲವರಿಗೆ ಇದರ ಬಗ್ಗೆ ಎಲ್ಲಿ ಹೋಗಿ ವಿಚಾರಿಸಬೇಕು ಅನ್ನೊದು ತಿಳಿದಿರುವುದಿಲ್ಲ. ಅದಕ್ಕಾಗಿ ನೀವು ಚಿಂತಿಸುವ ಅಗತ್ಯವಿಲ್ಲ. ನಿಮ್ಮ ಪಡಿತರ ಚೀಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮಾಡಬೇಕಾದರೆ? ಹೆಸರು ತಿದ್ದುಪಡಿ ಮಾಡಿಸುವುದಕ್ಕೆ ಏನು ಮಾಡಬೇಕು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ವಿಚಾರದಲ್ಲಿ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಪಡಿತರ ಚೀಟಿಗಾಗಿ ಬಯೋಮೆಟ್ರಿಕ್ ದೃಡೀಕರಣವನ್ನು ಕುಟುಂಬದ ಸದದಸ್ಯರೆಲ್ಲರೂ ನೀಡಲೇಬೇಕಾದ ಅನಿವಾರ್ಯತೆ ಇದೆ. ಹಾಗೆಯೇ ಹೊಸದಾಗಿ ಪಡಿತರ ಚೀಟಿ ಪಡೆಯುವುದಕ್ಕೆ ಆಗಲಿ, ಹೊಸದಾಗಿ ಹೆಸರು ಸೇರ್ಪಡೆ ಮಾಡುವುದಕ್ಕಾಗಲಿ ಕೆಲವು ಅಗತ್ಯ ದಾಖಲೆಗಳನ್ನು ನೀವು ಒದಗಿಸಲೇಬೇಕು.

ರೇಷನ್ ಕಾರ್ಡ್ನಲ್ಲಿ ನಿಮ್ಮ ಮನೆಯ ಸದಸ್ಯರೆಲ್ಲರ ಹೆಸರು ಇದ್ದರೆ ಅನುಕೂಲವಿದೆ. ಇದೇ ಕಾರಣಕ್ಕೆ ನಿಮ್ಮ ಮಕ್ಕಳ ಹೆಸರನ್ನು ಕೂಡ ಸೇರಿಸುವುದು ಇಂದಿನ ದಿನಗಳಲ್ಲಿ ಅಗತ್ಯ. ಇನ್ನು ನೀವು ನಿಮ್ಮ ಮಗುವಿನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಬೇಕಾದ್ರೆ, ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅಗತ್ಯವಾಗಿ ನೀಡಬೇಕಾಗುತ್ತದೆ. ಇದಲ್ಲದೆ ನಿಮ್ಮ ಮನೆಗೆ ಮದುವೆಯ ನಂತರ ಬಂದ ಸೊಸೆ/ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಕಾರ್ಡ್, ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಲು ಹೀಗೆ ಮಾಡಿ?
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm