ಬ್ರೇಕಿಂಗ್ ನ್ಯೂಸ್
27-05-22 07:08 pm Source: Vijayakarnataka ಉದ್ಯೋಗ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕಾನೂನು ಕೋಶದ ಮುಖ್ಯಸ್ಥರ ಹುದ್ದೆ ಭರ್ತಿಗಾಗಿ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಹೆಡ್ ಆಪ್ ದಿ ಲೀಗಲ್ ಹುದ್ದೆಯನ್ನು ಭರ್ತಿ ಮಾಡಲಿದೆ. ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಅಥವಾ ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಅಥವಾ ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು
- ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕೆಲಸ ನಿರ್ವಹಿಸಿರಬೇಕು. ಅಥವಾ
- ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಆಗಿರಬೇಕು. ಅಥವಾ
- ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರು ಆಗಿರಬೇಕು.
- ಅರ್ಜಿ ಸಲ್ಲಿಸಬಯಸುವವರು 67 ವರ್ಷಗಳಿಗೆ ಮೀರದ ವಯೋಮಿತಿ ಹೊಂದಿರಬೇಕು.
ಪ್ರಮುಖ ಅಂಶಗಳು
- ಹುದ್ದೆಯ ಅವಧಿ ಪ್ರಾರಂಭದಲ್ಲಿ 01 ವರ್ಷದವರೆಗಿರುತ್ತದೆ. ಕಾರ್ಯಕ್ಷಮತೆಯನ್ನು ಆಧರಿಸಿ 01 ರಿಂದ 03 ವರ್ಷಗಳವರೆಗೆ ವೃತ್ತಿಯಲ್ಲಿ ಮುಂದುವರೆಸಲಾಗುವುದು.
- ಕೆಸಿಎಸ್ಆರ್ ಗಳ ಪ್ರಕಾರ ವೇತನ ನಿಗಧಿಪಡಿಸಲಾಗುವುದು.
- ಬಿಬಿಎಂಪಿ ಉದ್ಯೋಗಿಗಳಿಗಿರುವಂತೆ ರಜೆ ಮತ್ತು ವೈದ್ಯಕೀಯ ಸೌಲಭ್ಯಗಳು ಇರುತ್ತವೆ.
- ಸಂದರ್ಶನದ ಮೂಲಕ ನೇಮಕ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಂಪೂರ್ಣ ಬಯೋಡಾಟಾ ಜತೆಗೆ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮಾನ್ಯ ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಎನ್.ಆರ್.ಚೌಕ, ಬೆಂಗಳೂರು-560002.
ಮೇಲಿನ ವಿಳಾಸಕ್ಕೆ ಲಕೋಟೆಯ ಮೇಲೆ 'ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗಾಗಿ ಅರ್ಜಿ' ಎಂದು ಬರೆದು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-06-2022
Bruhat Bengaluru Mahanagara Palike Recruitment 2022.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm