ಬ್ರೇಕಿಂಗ್ ನ್ಯೂಸ್
27-05-22 07:08 pm Source: Vijayakarnataka ಉದ್ಯೋಗ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕಾನೂನು ಕೋಶದ ಮುಖ್ಯಸ್ಥರ ಹುದ್ದೆ ಭರ್ತಿಗಾಗಿ ನೇಮಕ ಪ್ರಕಟಣೆ ಬಿಡುಗಡೆ ಮಾಡಿದೆ. ಹೆಡ್ ಆಪ್ ದಿ ಲೀಗಲ್ ಹುದ್ದೆಯನ್ನು ಭರ್ತಿ ಮಾಡಲಿದೆ. ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಅಥವಾ ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಅಥವಾ ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು
- ಸೇವಾ ವಿಷಯಗಳಲ್ಲಿ, ಕಾರ್ಮಿಕರ ಕಾನೂನು, ಭೂ ಕಾನೂನು ಇತ್ಯಾದಿ ವಿಷಯಗಳಲ್ಲಿ ಉತ್ತಮ ಪರಿಣಿತಿ ಹೊಂದಿರುವ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕೆಲಸ ನಿರ್ವಹಿಸಿರಬೇಕು. ಅಥವಾ
- ಸಹಾಯಕ ಡ್ರಾಫ್ಟ್ಮನ್ ಹುದ್ದೆಗಿಂತ ಕಡಿಮೆ ಇಲ್ಲದ ಮತ್ತು ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಸಂಸದೀಯ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಆಗಿರಬೇಕು. ಅಥವಾ
- ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳ ವಕೀಲ ವೃತ್ತಿಯ ಅನುಭವ ಹೊಂದಿರುವ ವಕೀಲರು ಆಗಿರಬೇಕು.
- ಅರ್ಜಿ ಸಲ್ಲಿಸಬಯಸುವವರು 67 ವರ್ಷಗಳಿಗೆ ಮೀರದ ವಯೋಮಿತಿ ಹೊಂದಿರಬೇಕು.
ಪ್ರಮುಖ ಅಂಶಗಳು
- ಹುದ್ದೆಯ ಅವಧಿ ಪ್ರಾರಂಭದಲ್ಲಿ 01 ವರ್ಷದವರೆಗಿರುತ್ತದೆ. ಕಾರ್ಯಕ್ಷಮತೆಯನ್ನು ಆಧರಿಸಿ 01 ರಿಂದ 03 ವರ್ಷಗಳವರೆಗೆ ವೃತ್ತಿಯಲ್ಲಿ ಮುಂದುವರೆಸಲಾಗುವುದು.
- ಕೆಸಿಎಸ್ಆರ್ ಗಳ ಪ್ರಕಾರ ವೇತನ ನಿಗಧಿಪಡಿಸಲಾಗುವುದು.
- ಬಿಬಿಎಂಪಿ ಉದ್ಯೋಗಿಗಳಿಗಿರುವಂತೆ ರಜೆ ಮತ್ತು ವೈದ್ಯಕೀಯ ಸೌಲಭ್ಯಗಳು ಇರುತ್ತವೆ.
- ಸಂದರ್ಶನದ ಮೂಲಕ ನೇಮಕ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಸಂಪೂರ್ಣ ಬಯೋಡಾಟಾ ಜತೆಗೆ, ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಮಾನ್ಯ ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಎನ್.ಆರ್.ಚೌಕ, ಬೆಂಗಳೂರು-560002.
ಮೇಲಿನ ವಿಳಾಸಕ್ಕೆ ಲಕೋಟೆಯ ಮೇಲೆ 'ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗಾಗಿ ಅರ್ಜಿ' ಎಂದು ಬರೆದು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 10-06-2022
Bruhat Bengaluru Mahanagara Palike Recruitment 2022.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 10:21 pm
Mangalore Correspondent
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm