ಬ್ರೇಕಿಂಗ್ ನ್ಯೂಸ್
08-12-24 10:59 pm HK News Desk ಉದ್ಯೋಗ
ನವದೆಹಲಿ, ಡಿ.8: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತ ಹೆದ್ದಾರಿ ಕಾಮಗಾರಿ ನಿರ್ವಹಿಸಲು ಮ್ಯಾನೇಜರ್ ಹುದ್ದೆಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಿದೆ. ಹೆದ್ದಾರಿ ಪ್ರಾಧಿಕಾರದ nhai.gov.in ವೆಬ್ ಸೈಟ್ ನಲ್ಲಿ ಡಿ.6ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಜನವರಿ 6ರ ವರೆಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಭಾರತ ಸರಕಾರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧೀನದಲ್ಲಿ ನಡೆಸಲ್ಪಡುತ್ತಿದ್ದು, ಎ ದರ್ಜೆಯ ಹುದ್ದೆಗಳನ್ನು ಭರ್ತಿಗೊಳಿಸಲು ಮುಂದಾಗಿದೆ. ಹುದ್ದೆಗಳ ಬಗ್ಗೆ ಅಧಿಕೃತ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಕೊಡಲಾಗಿದೆ.
ಅಭ್ಯರ್ಥಿಗಳು ಕಾಮರ್ಸ್ ಪದವಿ, ಚಾರ್ಟರ್ಡ್ ಅಕೌಂಟೆಂಟ್, ಸರ್ಟಿಫೈಡ್ ಮ್ಯಾನೇಜ್ಮೆಂಟ್ ಅಕೌಂಟೆಂಟ್ (ಸಿಎಂಎ) ಅಥವಾ ಎಂಬಿಎ (ಫೈನಾನ್ಸ್) ಪದವಿಯನ್ನು ಅಧಿಕೃತ ವಿಶ್ವವಿದ್ಯಾನಿಲಯದಿಂದ ಪಡೆದಿರಬೇಕು. ಕನಿಷ್ಠ ನಾಲ್ಕು ವರ್ಷ ಅನುಭವ ಅಪೇಕ್ಷಣೀಯ. ಡೆಪ್ಯುಟೇಶನ್ ಮೇಲೆ ಹುದ್ದೆಗಳನ್ನು ಭರ್ತಿಗೊಳಿಸಲಾಗುವುದು. ವಯಸ್ಸಿನ ಮಿತಿ ಗರಿಷ್ಠ 56 ಆಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತ ಸರಕಾರದ 11ನೇ ದರ್ಜೆಯಡಿ 67,700 ರಿಂದ 2,08,700 ವೇತನ ಪಡೆಯಲಿದ್ದಾರೆ.
ಆಯ್ಕೆ ಪ್ರಕ್ರಿಯೆ ವೇಳೆ ಲಿಖಿತ ಪರೀಕ್ಷೆ ಇರುವುದಿಲ್ಲ. ಸಂದರ್ಶನ ಮೂಲಕ ನೇರವಾಗಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಸಾರ್ವಜನಿಕ ರಂಗದ ಸಂಸ್ಥೆಗಳಲ್ಲಿ ಅಥವಾ ಸಾರ್ವಜನಿಕ ರಂಗದ ಬ್ಯಾಂಕು ಅಥವಾ ತತ್ಸಮಾನ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರಬೇಕು ಎಂದು ಹೆದ್ದಾರಿ ಪ್ರಾಥಿಕಾರದ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗಿದೆ.
NHAI Highway manager work Job vacancy, direct interview with 2 lakh salary package. Those interested with age below 56 can attend the interview.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 06:59 pm
HK News Desk
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
05-08-25 08:22 pm
Mangalore Correspondent
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm