ಬ್ರೇಕಿಂಗ್ ನ್ಯೂಸ್
09-01-25 10:09 pm Bangalore Correspondent ಉದ್ಯೋಗ
ಬೆಂಗಳೂರು, ಜ.9: ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರು ಹಾಗೂ ಅಬಕಾರಿ ಪೇದೆಗಳ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಸಾವಿರಕ್ಕೂ ಹೆಚ್ಚು ಉದ್ಯೋಗಗಳಿಗೆ ಅಬಕಾರಿ ಇಲಾಖೆ ಅರ್ಜಿಗಳನ್ನು ಆಹ್ವಾನ ಮಾಡಲಿದೆ.
ಹುದ್ದೆಗಳನ್ನು ಭರ್ತಿಗೊಳಿಸಲು ಅಬಕಾರಿ ಇಲಾಖೆ ಆಯುಕ್ತರಿಗೆ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಆದೇಶದ ಪ್ರತಿ ನೀಡುವ ಮೂಲಕ ಅರ್ಜಿ ಆಹ್ವಾನಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇನ್ನು ಎರಡ್ಮೂರು ತಿಂಗಳಲ್ಲಿ ಅಥವಾ ಇದೇ ತಿಂಗಳ ಕೊನೆಯಲ್ಲಿ ಅಬಕಾರಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತದೆ. ಇದಕ್ಕಾಗಿ ಕಾದು ಕುಳಿತಿರುವ ಉದ್ಯೋಗಾಕಾಂಕ್ಷಿಗಳು ಶಿಕ್ಷಣ ದಾಖಲೆ ಸೇರಿದಂತೆ ಹುದ್ದೆಗೆ ಬೇಕಾಗುವುದನ್ನು ಮೊದಲೇ ಸಿದ್ಧ ಪಡಿಸಿಕೊಳ್ಳಬೇಕು.
ಅಬಕಾರಿ ಪೇದೆ ಹುದ್ದೆ 942, ಅಬಕಾರಿ ಉಪ ನಿರೀಕ್ಷಕರ 265 ಹುದ್ದೆಗಳನ್ನು (ಕಲ್ಯಾಣ ಕರ್ನಾಟಕ ಸಹಿತ) ತುಂಬಲಾಗುತ್ತದೆ. ಒಟ್ಟು 1,207 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆಯ್ಕೆ ಆದವರಿಗೆ ಮಾಸಿಕವಾಗಿ ವೇತನ ಶ್ರೇಣಿ ಆರಂಭದಲ್ಲಿ ಅಬಕಾರಿ ಉಪ ನಿರೀಕ್ಷಕರಿಗೆ 30,350 ಹಾಗೂ ಪೇದೆ ಕೆಲಸಕ್ಕೆ 21,400 ರೂಪಾಯಿಗಳನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಬಕಾರಿ ಉಪ ನಿರೀಕ್ಷಕ ಹುದ್ದೆಗೆ ಪದವಿ ಹಾಗೂ ಪೇದೆ ಕೆಲಸಕ್ಕೆ ದ್ವಿತೀಯ ಪಿಯುಸಿ ಕನಿಷ್ಠ ಶಿಕ್ಷಣ ಮಾನದಂಡ ನಿಗದಿ ಮಾಡಲಾಗಿದೆ. ಆಯ್ಕೆ ಪ್ರಕ್ರಿಯೆಗೆ ಬಂದರೆ ಪರೀಕ್ಷೆ, ದೈಹಿಕ ಸಾಮರ್ಥ್ಯ, ಮೆಡಿಕಲ್ ಪರೀಕ್ಷೆ ಇರುತ್ತದೆ. ಉದ್ಯೋಗಗಳ ಬಗ್ಗೆ ಹೆಚ್ಚಿನ ಮಾಹಿತಿ ಅಬಕಾರಿ ಇಲಾಖೆ ಅಧಿಸೂಚನೆ ಬಳಿಕ ಎಲ್ಲವೂ ತಿಳಿದು ಬರಲಿದೆ. ಉದ್ಯೋಗ ಆಕಾಂಕ್ಷಿಗಳು ಪೂರ್ವ ತಯಾರಿ ಮಾಡಿದರೇ ಉತ್ತಮ.
The government is taking steps to fill the vacant posts of Excise Sub-Inspectors and Excise Constables in the state Excise Department. The Excise Department will soon invite applications for more than a thousand jobs.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm