ಬ್ರೇಕಿಂಗ್ ನ್ಯೂಸ್
09-01-25 10:09 pm Bangalore Correspondent ಉದ್ಯೋಗ
ಬೆಂಗಳೂರು, ಜ.9: ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪ ನಿರೀಕ್ಷಕರು ಹಾಗೂ ಅಬಕಾರಿ ಪೇದೆಗಳ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಸಾವಿರಕ್ಕೂ ಹೆಚ್ಚು ಉದ್ಯೋಗಗಳಿಗೆ ಅಬಕಾರಿ ಇಲಾಖೆ ಅರ್ಜಿಗಳನ್ನು ಆಹ್ವಾನ ಮಾಡಲಿದೆ.
ಹುದ್ದೆಗಳನ್ನು ಭರ್ತಿಗೊಳಿಸಲು ಅಬಕಾರಿ ಇಲಾಖೆ ಆಯುಕ್ತರಿಗೆ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಆದೇಶದ ಪ್ರತಿ ನೀಡುವ ಮೂಲಕ ಅರ್ಜಿ ಆಹ್ವಾನಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇನ್ನು ಎರಡ್ಮೂರು ತಿಂಗಳಲ್ಲಿ ಅಥವಾ ಇದೇ ತಿಂಗಳ ಕೊನೆಯಲ್ಲಿ ಅಬಕಾರಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತದೆ. ಇದಕ್ಕಾಗಿ ಕಾದು ಕುಳಿತಿರುವ ಉದ್ಯೋಗಾಕಾಂಕ್ಷಿಗಳು ಶಿಕ್ಷಣ ದಾಖಲೆ ಸೇರಿದಂತೆ ಹುದ್ದೆಗೆ ಬೇಕಾಗುವುದನ್ನು ಮೊದಲೇ ಸಿದ್ಧ ಪಡಿಸಿಕೊಳ್ಳಬೇಕು.
ಅಬಕಾರಿ ಪೇದೆ ಹುದ್ದೆ 942, ಅಬಕಾರಿ ಉಪ ನಿರೀಕ್ಷಕರ 265 ಹುದ್ದೆಗಳನ್ನು (ಕಲ್ಯಾಣ ಕರ್ನಾಟಕ ಸಹಿತ) ತುಂಬಲಾಗುತ್ತದೆ. ಒಟ್ಟು 1,207 ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಆಯ್ಕೆ ಆದವರಿಗೆ ಮಾಸಿಕವಾಗಿ ವೇತನ ಶ್ರೇಣಿ ಆರಂಭದಲ್ಲಿ ಅಬಕಾರಿ ಉಪ ನಿರೀಕ್ಷಕರಿಗೆ 30,350 ಹಾಗೂ ಪೇದೆ ಕೆಲಸಕ್ಕೆ 21,400 ರೂಪಾಯಿಗಳನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಬಕಾರಿ ಉಪ ನಿರೀಕ್ಷಕ ಹುದ್ದೆಗೆ ಪದವಿ ಹಾಗೂ ಪೇದೆ ಕೆಲಸಕ್ಕೆ ದ್ವಿತೀಯ ಪಿಯುಸಿ ಕನಿಷ್ಠ ಶಿಕ್ಷಣ ಮಾನದಂಡ ನಿಗದಿ ಮಾಡಲಾಗಿದೆ. ಆಯ್ಕೆ ಪ್ರಕ್ರಿಯೆಗೆ ಬಂದರೆ ಪರೀಕ್ಷೆ, ದೈಹಿಕ ಸಾಮರ್ಥ್ಯ, ಮೆಡಿಕಲ್ ಪರೀಕ್ಷೆ ಇರುತ್ತದೆ. ಉದ್ಯೋಗಗಳ ಬಗ್ಗೆ ಹೆಚ್ಚಿನ ಮಾಹಿತಿ ಅಬಕಾರಿ ಇಲಾಖೆ ಅಧಿಸೂಚನೆ ಬಳಿಕ ಎಲ್ಲವೂ ತಿಳಿದು ಬರಲಿದೆ. ಉದ್ಯೋಗ ಆಕಾಂಕ್ಷಿಗಳು ಪೂರ್ವ ತಯಾರಿ ಮಾಡಿದರೇ ಉತ್ತಮ.
The government is taking steps to fill the vacant posts of Excise Sub-Inspectors and Excise Constables in the state Excise Department. The Excise Department will soon invite applications for more than a thousand jobs.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am