ಬ್ರೇಕಿಂಗ್ ನ್ಯೂಸ್
05-02-25 06:52 pm HK News Desk ಉದ್ಯೋಗ
ಹುಬ್ಬಳ್ಳಿ , ಫೆ 05: ಹುಬ್ಬಳ್ಳಿ ಹಾಗೂ ಹುಬ್ಬಳ್ಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಸ ಹುಡುಕುತ್ತಿದ್ದರೆ ನಿಮಗೆ ಇಲ್ಲೊಂದು ಸುವರ್ಣ ಅವಕಾಶ ಇದೆ. ಹುಬ್ಬಳ್ಳಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದ್ದು. ಇದರಲ್ಲಿ ನೂರಾರು ಜನರಿಗೆ ಉದ್ಯೋಗ ಸಿಗುವ ನಿರೀಕ್ಷೆ ಇದೆ. ಈ ಮೇಳದಲ್ಲಿ ಹಲವು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ. ಉದ್ಯೋಗ ಮೇಳ ಯಾವಾಗ ನಡೆಯಲಿದೆ. ಎಲ್ಲಿ ನಡೆಯಲಿದೆ ಹಾಗೂ ಯಾರೆಲ್ಲ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಹುಬ್ಬಳ್ಳಿಯಲ್ಲಿ ಫೆಬ್ರವರಿ 8ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇಲ್ಲಿನ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಎಸ್.ಪಿ. ಫೌಂಡೇಶನ್ ನವಲಗುಂದದ ಸಹಯೋಗದಲ್ಲಿ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. ಇನ್ನು ಈ ಉದ್ಯೋಗ ಮೇಳವನ್ನು ಫೆಬ್ರವರಿ 8 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನವಲಗುಂದದ ಮಾಡೆಲ್ ಹೈಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
50 ಕಂಪನಿಗಳು ಭಾಗಿ:
ಹುಬ್ಬಳ್ಳಿಯಲ್ಲಿ ನಡೆಯಲಿರುವ ಈ ಬೃಹತ್ ಉದ್ಯೋಗ ಮೇಳದಲ್ಲಿ 50ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಹಲವು ಪ್ರತಿಷ್ಠಿತ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಲಿದ್ದು. ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಮೇಳದಲ್ಲಿ 50ಕ್ಕೂ ಅಧಿಕ ಖಾಸಗಿ ವಲಯದ ಉದ್ಯೋಗದಾತರು ಭಾಗವಹಿಸಲಿದ್ದಾರೆ. ಈ ಮೇಳದಲ್ಲಿ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅಭ್ಯರ್ಥಿಗಳ ನೇರ ಸಂದರ್ಶನ ಸಹ ನಡೆಯಲಿದೆ.
ಯಾರೆಲ್ಲ ಭಾಗವಹಿಸಬಹುದು:
ಇನ್ನು ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಹಾಗೂ ಸ್ನಾತಕೋತ್ತರ ಪದವಿ ಮಾಡಿರುವವರು/ ಪಾಸಾಗಿರುವವರು ಭಾಗವಹಿಸಬಹುದಾಗಿದೆ. ಇನ್ನು ಉದ್ಯೋಗ ಮೇಳದಲ್ಲಿ ಭಾಗವಹಿಸುವುದಕ್ಕೆ 18 ರಿಂದ 35 ವಯಸ್ಸಿನ ಒಳಗಿರಬೇಕು. ಈ ವಯೋಮಾನದ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು ಎಂದು ಹೇಳಲಾಗಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: ಮೇಳದಲ್ಲಿ ಭಾಗವಹಿಸುವುದಕ್ಕೆ ಯಾವುದಾರೂ ಗೊಂದಲಗಳಿದ್ದರೆ. ಇಲ್ಲವೇ ಹೆಚ್ಚಿನ ಮಾಹಿತಿ ಬೇಕಾದರೆ 9535360259, 8453208555, 9806905751 ಹಾಗೂ 9164192155 ಮೊಬೈಲ್ ಸಂಖ್ಯೆಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Job News kannada, Hubballi Feb 8th job fair organised, apply now or contact the numbers listed.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm