ಬ್ರೇಕಿಂಗ್ ನ್ಯೂಸ್
23-07-25 01:04 pm HK News Desk ಉದ್ಯೋಗ
ಬೆಂಗಳೂರು, ಜುಲೈ 23 : ರೈಲ್ವೇ ಇಲಾಖೆಯಲ್ಲಿ ಒಟ್ಟು 37,307 ಹುದ್ದೆಗಳ ನೇಮಕಕ್ಕೆ ಭಾರತೀಯ ರೈಲ್ವೆ ಅಧಿಸೂಚನೆ ಹೊರಡಿಸಿದೆ. ವಿವಿಧ ವಿಷಯಗಳಲ್ಲಿ ಪದವಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಪ್ರಕಟಣೆ ತಿಳಿಸಿದೆ.
ನಾನ್ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿಯಲ್ಲಿ ಕಳೆದ ವರ್ಷ 8113 ಹುದ್ದೆಗಳನ್ನು ಪದವೀಧರರಿಗೆ ಹಾಗೂ 3445 ಹುದ್ದೆಗಳನ್ನು ಪದವಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಮೀಸಲಿಡಲಾಗಿತ್ತು. ಆದರೆ, ಈ ವರ್ಷ ಪದವೀಧರ ಕೆಟಗರಿಯಲ್ಲಿಯೇ ಬರೋಬ್ಬರಿ 30,307 ಹುದ್ದೆಗಳಿಗೆ ನೇಮಕಾತಿ ನಡೆಸುವುದಾಗಿ ರೈಲ್ವೆ ತಿಳಿಸಿದೆ. ಇದು ಈ ವರ್ಷದ ಬೃಹತ್ ನೇಮಕಾತಿ ಆಗಿರಲಿದೆ. ಆನ್ಲೈನ್ ಅರ್ಜಿ ಸಲ್ಲಿಕೆ ಆಗಸ್ಟ್ 30ರಿಂದ ಆರಂಭವಾಗಿ ಸೆಪ್ಟೆಂಬರ್ 29ಕ್ಕೆ ಕೊನೆಗೊಳ್ಳಲಿದೆ. ಟಿಕೆಟ್ ಸೂಪರ್ ವೈಸರ್, ಸ್ಟೇಷನ್ ಮಾಸ್ಟರ್, ಗೂಡ್ಸ್ ಟ್ರೇನ್ ಮ್ಯಾನೇಜರ್, ಜೂನಿಯರ್ ಅಕೌಂಟೆಂಟ್, ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಹಾಗೂ ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ರೈಲ್ವೇ ವೆಬ್ ಸೈಟ್ ನೋಡಬಹುದು.
ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಆಧಾರ್ ಆಧರಿತ ಇ-ಕೆವೈಸಿ, ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಅಳವಡಿಕೆ ಸೇರಿದಂತೆ ಅನೇಕ ಕ್ರಮಗಳಿಗೆ ಮುಂದಾಗಿರುವ ಭಾರತೀಯ ರೈಲ್ವೆ ಇಲಾಖೆಯು ಈ ವರ್ಷ 50 ಸಾವಿರಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಚಾಲನೆ ನೀಡುವುದಾಗಿ ಜುಲೈ ಎರಡನೇ ವಾರದಲ್ಲಿ ಪ್ರಕಟಣೆ ಹೊರಡಿಸಿತ್ತು.
The Indian Railways has released a massive recruitment notification for 37,307 posts, inviting applications from graduates across various disciplines for direct appointments to multiple non-technical positions.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm