ಬ್ರೇಕಿಂಗ್ ನ್ಯೂಸ್
30-07-25 03:26 pm Bangalore Correspondent ಉದ್ಯೋಗ
ಬೆಂಗಳೂರು, ಜುಲೈ 30 : ಕೇಂದ್ರ ಗೃಹ ಸಚಿವಾಲಯದ ಅಧೀನದ ಗಡಿ ಭದ್ರತಾ ಪಡೆಯಲ್ಲಿ (ಬಿಎಸ್ಎಫ್) ಕ್ರೀಡಾ ಕೋಟಾದಡಿ ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) (ನಾನ್-ಗೆಜೆಟೆಡ್ ಮತ್ತು ನಾನ್-ಮಿನಿಸ್ಟೀರಿಯಲ್) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 241 ಹುದ್ದೆಗಳನ್ನು ಭರ್ತಿ ಮಾಡಲಿದ್ದು ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಆಗಸ್ಟ್ 20 ರೊಳಗೆ ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಲ್ಲುಗಾರಿಕೆ, ಅಥ್ಲೆಟಿಕ್ಸ್, ಬ್ಯಾಡ್ಮಿಂಟನ್, ಈಜು, ಡೈವಿಂಗ್, ವಾಟರ್ ಪೋಲೋ, ಬ್ಯಾಸ್ಕೆಟ್ಬಾಲ್, ಬಾಕ್ಸಿಂಗ್, ಸೈಕ್ಲಿಂಗ್, ಕ್ರಾಸ್ ಕಂಟ್ರಿ, ಈಕ್ವೆಸ್ಟ್ರಿಯನ್, ಫುಟ್ಬಾಲ್, ಜಿಮ್ನಾಸ್ಟಿಕ್ಸ್, ಹ್ಯಾಂಡ್ಬಾಲ್, ಹಾಕಿ, ಐಸ್ ಸ್ಕೀಯಿಂಗ್, ಜೂಡೋ, ಕರಾಟೆ, ವಾಲಿಬಾಲ್, ವೇಟ್ ಲಿಫ್ಟಿಂಗ್, ವಾಟರ್ ಸ್ಪೋರ್ಟ್ಸ್, ಕುಸ್ತಿ, ಶೂಟಿಂಗ್, ಟೇಕ್ವಾಂಡೋ, ವುಶು, ಫೆನ್ಸಿಂಗ್, ಕಯಾಕಿಂಗ್, ಕ್ಯಾನೋಯಿಂಗ್ (ಬೋಟ್ ರೇಸಿಂಗ್), ರೋಯಿಂಗ್, ಟೇಬಲ್ ಟೆನಿಸ್ ಹೀಗೆ ಯಾವುದಾದರೂ ಒಂದು ಕ್ರೀಡೆಯಲ್ಲಿ ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿರಬೇಕು. 10 ನೇ ತರಗತಿ ಅಥವಾ ಮೆಟ್ರಿಕ್ಯುಲೇಷನ್ನಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ವಯಸ್ಸಿನ ಮಿತಿ ಆಗಸ್ಟ್ 01, 2025 ರಂತೆ 18 ರಿಂದ 23 ವರ್ಷಗಳ ನಡುವೆ ಇರಬೇಕು.
ಆಸಕ್ತ ಅಭ್ಯರ್ಥಿಗಳು ಆಗಸ್ಟ್ 20, 2025 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ. 147 ಪಾವತಿಸಬೇಕು. ಎಸ್ಸಿ, ಎಸ್ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಅಂತಿಮ ಆಯ್ಕೆ ದೈಹಿಕ ಗುಣಮಟ್ಟ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಆಧರಿಸಿರುತ್ತದೆ. ಯಾವುದೇ ಲಿಖಿತ ಪರೀಕ್ಷೆ ನಡೆಸದೆ ಆಯ್ಕೆ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.
The Border Security Force (BSF), under the Ministry of Home Affairs, Government of India, has invited online applications from eligible male and female candidates for recruitment to 241 Constable (General Duty) posts under the Sports Quota. These are non-gazetted, non-ministerial positions.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm